ಇಂದಿನಿಂದ ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆ ಪ್ರಾರಂಭ:  ಎಎಸ್ಪಿ ವೆಂಕಟೇಶ್ ಪ್ರಸನ್ನ ಭೇಟಿ, ಪರಿಶೀಲನೆ

ಇಂದಿನಿಂದ ಇತಿಹಾಸ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆ ಪ್ರಾರಂಭವಾಗಿದೆ. ಈ ಹಿನ್ನೆಲೆ ಈಗಾಗಲೇ ರೈತರಿಂದ ಪೂರ್ವ ಸಿದ್ಧತೆ ನಡೆಸಿಕೊಳ್ಳಲಾಗಿದೆ.  ಹೋರಿಗಳ ಮಾರಾಟ ಮತ್ತು ಪ್ರದರ್ಶನಕ್ಕೆ ದಿಬ್ಬ, ಶೆಡ್, ಪೆಂಡಾಲ್ ಗಳ ನಿರ್ಮಾಣ ಕಾರ್ಯ ನಡೆದಿದ್ದು, ಹೋರಿಗಳನ್ನು ತಂದು ಮಾರಾಟ ಹಾಗೂ ಪ್ರದರ್ಶನಕ್ಕೆ ಇರಿಸಲಾಗಿದೆ….

ಮುಂಗಾರಿನಲ್ಲಿ ಮಳೆ ಆಶ್ರಯದಲ್ಲಿ ಬೆಳೆಯಲಾಗುವ ಬೆಳೆಗಳ ಕೊಯ್ಲು ಮುಕ್ತಾಯವಾದ ನಂತರ ಪ್ರಥಮ ಬಾರಿಗೆ ನಡೆಯುವ ಘಾಟಿ ಸುಬ್ರಹ್ಮಣ್ಯ ಜಾತ್ರೆಯಲ್ಲಿ ಕೃಷಿ ಕೆಲಸಕ್ಕೆ ಬೇಕಾಗುವ ಹೋರಿಗಳನ್ನು ಖರೀದಿಸಲು ರಾಜ್ಯದ ಬಳ್ಳಾರಿ, ದಾವಣಗೆರೆ, ರಾಯಚೂರು, ಬೀದರ್ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಮಾತ್ರವಲ್ಲದೆ ಹೊರ ರಾಜ್ಯದ ತಮಿಳುನಾಡಿನ ಸೇಲಂ, ಹೊಸೂರು, ಆಂಧ್ರಪ್ರದೇಶದ ಹಿಂದೂಪುರ, ಅನಂತಪುರ, ಮಹಾರಾಷ್ಟ್ರದ ಕೊಲ್ಲಾಪುರ, ಸಾಂಗ್ಲಿ ಸೇರಿದಂತೆ ವಿವಿಧ ಕಡೆಗಳಿಂದಲು ರೈತರು ಬರುತ್ತಿದ್ದಾರೆ…

ಜಾತ್ರೆಯಲ್ಲಿ ಅಮೃತ್ ಮಹಲ್, ಹಳ್ಳಿಕಾರ್ ಸೇರಿದಂತೆ ಸ್ಥಳೀಯ ನಾಟಿ ಹೋರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಕ್ಕೆ ಬರುತ್ತವೆ. ಹೀಗಾಗಿಯೇ ಹೆಚ್ಚಿನ ಸಂಖ್ಯೆಯಲ್ಲಿ ಹೊರ ಜಿಲ್ಲೆ, ಹೊರ ರಾಜ್ಯದ ರೈತರು ಕೃಷಿ ಕೆಲಸಗಳಿಗೆ ಹೋರಿಗಳ ಖರೀದಿಗೆ ಬರುತ್ತಿದ್ದಾರೆ.

ಈ ಬಾರಿಯ ಘಾಟಿ ಜಾತ್ರೆಯಲ್ಲಿ ಜಾನುವಾರುಗಳಿಗೆ ಹಾಗೂ ಬರುವಂತಹ ಭಕ್ತಾದಿಗಳ ವಾಹನಗಳಿಗೆ ಸುಂಕ ಇರುವುದಿಲ್ಲ. ರೈತರಿಗೆ ಮತ್ತು ರಾಸುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ, ರಾಸುಗಳಿಗೆ ರೋಗಗಳು ಹರಡದಂತೆ ಪಶು ವೈದ್ಯರ ವ್ಯವಸ್ಥೆ ಕಲ್ಪಿಸಲಾಗಿದೆ. ರಾಸುಗಳ ಜಾತ್ರೆಗೆ ಆಗಮಿಸುವ ರೈತರಿಗೆ ತಿಂಡಿ ಮತ್ತು ಊಟದ ವ್ಯವಸ್ಥೆಯನ್ನು ದೇವಾಲಯದ ವತಿಯಿಂದ ಕಲ್ಪಿಸಲಾಗಿರುತ್ತದೆ…

ಇಂದಿನಿಂದ ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆ ವಿಶೇಷ ಹಿನ್ನೆಲೆ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಎಸ್ಪಿ ವೆಂಕಟೇಶ್ ಪ್ರಸನ್ನ, ಡಿವೈಎಸ್ಪಿ ಪಾಂಡುರಂಗ, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಯಾವುದೇ ಅಹಿತಕರ ಘಟನೆಗಳು, ಅಪಘಾತ ತಡೆಗಟ್ಟಲು, ವಾಹನಗಳ ಸುಗಮ ಸಂಚಾರ, ಅಪರಾಧ ಕೃತ್ಯಗಳು ನಡೆಯದಂತೆ ತಡೆಯಲು ಬೇಕಾಗುವ ಕ್ರಮಗಳನ್ನು ಕೈಗೊಳ್ಳಲಾಯಿತು…ಹಾಗೂ ಇತರೆ ಕ್ರಮಗಳನ್ನು ಕೈಗೊಳ್ಳಲಾಯಿತು…

Ramesh Babu

Journalist

Recent Posts

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

42 minutes ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

1 hour ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

7 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

19 hours ago

ಬಾಶೆಟ್ಟಿಹಳ್ಳಿ ಪಪಂ ಚುನಾವಣೆ: ಶೇ.78ರಷ್ಟು ಮತದಾನ: ನಕಲಿ ಮತದಾನಕ್ಕೆ ಯತ್ನಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು: ಕುಡಿದು ಚುನಾವಣೆ ಕೆಲಸಕ್ಕೆ ಬಂದ ಶಿಕ್ಷಕ

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…

19 hours ago

ಒಂಟಿ ಮನೆ ಸುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು: ಗಾಬರಿಗೊಂಡ ಮಹಿಳೆ: ಗ್ರಾಮಸ್ಥರ ಕೈಗೆ ಸಿಕ್ಕ ಆಸಾಮಿಗಳು, ಸದ್ಯ ವಶಕ್ಕೆ ಪಡೆದ ಪೊಲೀಸರು

ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…

19 hours ago