ಇಂದಿನಿಂದ ಇತಿಹಾಸ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆ ಪ್ರಾರಂಭವಾಗಿದೆ. ಈ ಹಿನ್ನೆಲೆ ಈಗಾಗಲೇ ರೈತರಿಂದ ಪೂರ್ವ ಸಿದ್ಧತೆ ನಡೆಸಿಕೊಳ್ಳಲಾಗಿದೆ. ಹೋರಿಗಳ ಮಾರಾಟ ಮತ್ತು ಪ್ರದರ್ಶನಕ್ಕೆ ದಿಬ್ಬ, ಶೆಡ್, ಪೆಂಡಾಲ್ ಗಳ ನಿರ್ಮಾಣ ಕಾರ್ಯ ನಡೆದಿದ್ದು, ಹೋರಿಗಳನ್ನು ತಂದು ಮಾರಾಟ ಹಾಗೂ ಪ್ರದರ್ಶನಕ್ಕೆ ಇರಿಸಲಾಗಿದೆ….
ಮುಂಗಾರಿನಲ್ಲಿ ಮಳೆ ಆಶ್ರಯದಲ್ಲಿ ಬೆಳೆಯಲಾಗುವ ಬೆಳೆಗಳ ಕೊಯ್ಲು ಮುಕ್ತಾಯವಾದ ನಂತರ ಪ್ರಥಮ ಬಾರಿಗೆ ನಡೆಯುವ ಘಾಟಿ ಸುಬ್ರಹ್ಮಣ್ಯ ಜಾತ್ರೆಯಲ್ಲಿ ಕೃಷಿ ಕೆಲಸಕ್ಕೆ ಬೇಕಾಗುವ ಹೋರಿಗಳನ್ನು ಖರೀದಿಸಲು ರಾಜ್ಯದ ಬಳ್ಳಾರಿ, ದಾವಣಗೆರೆ, ರಾಯಚೂರು, ಬೀದರ್ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಮಾತ್ರವಲ್ಲದೆ ಹೊರ ರಾಜ್ಯದ ತಮಿಳುನಾಡಿನ ಸೇಲಂ, ಹೊಸೂರು, ಆಂಧ್ರಪ್ರದೇಶದ ಹಿಂದೂಪುರ, ಅನಂತಪುರ, ಮಹಾರಾಷ್ಟ್ರದ ಕೊಲ್ಲಾಪುರ, ಸಾಂಗ್ಲಿ ಸೇರಿದಂತೆ ವಿವಿಧ ಕಡೆಗಳಿಂದಲು ರೈತರು ಬರುತ್ತಿದ್ದಾರೆ…
ಜಾತ್ರೆಯಲ್ಲಿ ಅಮೃತ್ ಮಹಲ್, ಹಳ್ಳಿಕಾರ್ ಸೇರಿದಂತೆ ಸ್ಥಳೀಯ ನಾಟಿ ಹೋರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಕ್ಕೆ ಬರುತ್ತವೆ. ಹೀಗಾಗಿಯೇ ಹೆಚ್ಚಿನ ಸಂಖ್ಯೆಯಲ್ಲಿ ಹೊರ ಜಿಲ್ಲೆ, ಹೊರ ರಾಜ್ಯದ ರೈತರು ಕೃಷಿ ಕೆಲಸಗಳಿಗೆ ಹೋರಿಗಳ ಖರೀದಿಗೆ ಬರುತ್ತಿದ್ದಾರೆ.
ಈ ಬಾರಿಯ ಘಾಟಿ ಜಾತ್ರೆಯಲ್ಲಿ ಜಾನುವಾರುಗಳಿಗೆ ಹಾಗೂ ಬರುವಂತಹ ಭಕ್ತಾದಿಗಳ ವಾಹನಗಳಿಗೆ ಸುಂಕ ಇರುವುದಿಲ್ಲ. ರೈತರಿಗೆ ಮತ್ತು ರಾಸುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ, ರಾಸುಗಳಿಗೆ ರೋಗಗಳು ಹರಡದಂತೆ ಪಶು ವೈದ್ಯರ ವ್ಯವಸ್ಥೆ ಕಲ್ಪಿಸಲಾಗಿದೆ. ರಾಸುಗಳ ಜಾತ್ರೆಗೆ ಆಗಮಿಸುವ ರೈತರಿಗೆ ತಿಂಡಿ ಮತ್ತು ಊಟದ ವ್ಯವಸ್ಥೆಯನ್ನು ದೇವಾಲಯದ ವತಿಯಿಂದ ಕಲ್ಪಿಸಲಾಗಿರುತ್ತದೆ…
ಇಂದಿನಿಂದ ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆ ವಿಶೇಷ ಹಿನ್ನೆಲೆ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಎಸ್ಪಿ ವೆಂಕಟೇಶ್ ಪ್ರಸನ್ನ, ಡಿವೈಎಸ್ಪಿ ಪಾಂಡುರಂಗ, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಯಾವುದೇ ಅಹಿತಕರ ಘಟನೆಗಳು, ಅಪಘಾತ ತಡೆಗಟ್ಟಲು, ವಾಹನಗಳ ಸುಗಮ ಸಂಚಾರ, ಅಪರಾಧ ಕೃತ್ಯಗಳು ನಡೆಯದಂತೆ ತಡೆಯಲು ಬೇಕಾಗುವ ಕ್ರಮಗಳನ್ನು ಕೈಗೊಳ್ಳಲಾಯಿತು…ಹಾಗೂ ಇತರೆ ಕ್ರಮಗಳನ್ನು ಕೈಗೊಳ್ಳಲಾಯಿತು…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…
ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…