ಇಂದಿನಿಂದ ದೊಡ್ಡಬಳ್ಳಾಪುರ ರಾಗಿ ಖರೀದಿ ಕೇಂದ್ರದಲ್ಲಿ ಕನಿಷ್ಠ ಬೆಂಬಲ ಯೋಜನೆಯಡಿ ರಾಗಿ ಖರೀದಿ ಪ್ರಕ್ರಿಯೆ ಆರಂಭ

2025-26ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ರಾಗಿಯನ್ನು ಖರೀದಿಸುವ ಕಾರ್ಯ ದೊಡ್ಡಬಳ್ಳಾಪುರದ ಎಂಪಿಎಂಸಿ ಆವರಣದಲ್ಲಿರುವ ರಾಗಿ ಖರೀದಿ ಕೇಂದ್ರದಲ್ಲಿ ಇಂದಿನಿಂದ ಅಧಿಕೃತವಾಗಿ ಆರಂಭವಾಗಿದೆ.

ಈಗಾಗಲೇ ನೋಂದಣಿ ಮಾಡಿಕೊಂಡಿರುವ ರೈತರು ಟ್ರ್ಯಾಕ್ಟರ್ ಹಾಗೂ ಇತರೆ ಗೂಡ್ಸ್ ವಾಹನಗಳಲ್ಲಿ ರಾಗಿ ತಂದಿದ್ದಾರೆ. ರಾಗಿ ಖರೀದಿ ಕೇಂದ್ರದಲ್ಲಿ ರಾಗಿ ಹೊತ್ತ ಟ್ರ್ಯಾಕ್ಟರ್ ಗಳು ಸಾಲುಗಟ್ಟಿ ನಿಂತಿರುವ ದೃಶ್ಯ ಕಂಡುಬಂದಿದೆ…..

ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಅಂದಾಜು 6 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿಸುವ ಗುರಿಯನ್ನು ಹೊಂದಿದ್ದು, ರೈತರಿಂದ ನೇರವಾಗಿ ರಾಗಿ ಖರೀದಿಸಿ ಅದರ ಹಣವನ್ನು ಯಾವುದೇ ಮಧ್ಯವರ್ತಿಗೆ ಆಸ್ಪದ ನೀಡದೇ ರೈತರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ನೇರವಾಗಿ ಸಂದಾಯ ಮಾಡಲಾಗುತ್ತಿದೆ.

ಪ್ರತಿ ಕ್ವಿಂಟಾಲ್ ರಾಗಿಗೆ ರೂ. 4886/- ನಿಗದಿ*

2025-26 ನೇ ಸಾಲಿನ ಕನಿಷ್ಠ ಬೆಂಬಲ ಯೋಜನೆಯಡಿ ಪ್ರತಿ ಕ್ವಿಂಟಾಲ್ ರಾಗಿಗೆ ರೂ.4886/- ನಿಗದಿ ಪಡಿಸಲಾಗಿದೆ. ಪ್ರತಿ ರೈತರಿಂದ ಒಂದು ಎಕರೆಗೆ 10 ಕ್ವಿಂಟಾಲ್ ನಂತೆ ಗರಿಷ್ಟ 50 ಕ್ವಿಂಟಾಲ್ ಗಳನ್ನು ಮೀರದಂತೆ ಉತ್ತಮ ಗುಣಮಟ್ಟದ ರಾಗಿ ಖರೀದಿಸಲಾಗುವುದು. ಪ್ರಸಕ್ತ ಸಾಲಿನ ರಾಗಿ ಖರೀದಿ ಪ್ರಕ್ರಿಯೆಯಲ್ಲಿ ಎರಡು ಬಾರಿ ಬಯೋಮೆಟ್ರಿಕ್ ಬಳಕೆಯಾಗುತ್ತದೆ. ಒಂದು ಬಾರಿ ನೋಂದಣಿ ಸಂದರ್ಭದಲ್ಲಿ ಇನ್ನೊಂದು ರಾಗಿ ಖರೀದಿ ವೇಳೆಯಲ್ಲಿ ಹಾಗಾಗಿ ನೋಂದಾಯಿತ ರೈತರೇ ರಾಗಿ ಖರೀದಿ ಕೇಂದ್ರಗಳಿಗೆ ರಾಗಿ ತರುವುದು ಕಡ್ಡಾಯವಾಗಿರುತ್ತದೆ.

*ತಾಲ್ಲೂಕುವಾರು ರೈತರ ನೋಂದಣಿ ವಿವರ:*

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕು- 3678, ದೊಡ್ಡಬಳ್ಳಾಪುರ ತಾಲ್ಲೂಕು- 12687, ಹೊಸಕೋಟೆ ತಾಲೂಕು-1240,  ನೆಲಮಂಗಲ ತಾಲೂಕು- 5619 ಸೇರಿ ಒಟ್ಟು 23224 ರೈತರು ರಾಗಿ ಪೂರೈಕೆಗೆ ನೋಂದಣಿ ಮಾಡಿಸಿಕೊಂಡಿದ್ದಾರೆ.

Ramesh Babu

Journalist

Recent Posts

“ಕಾಂಗ್ರೆಸ್ ನಡೆ – ಮತ ರಕ್ಷಣೆಯ ಕಡೆ”: ಕೆಪಿಸಿಸಿ ವತಿಯಿಂದ ಮಹತ್ವದ ಕಾರ್ಯಾಗಾರ: ಸಿಎಂ, ಡಿಸಿಎಂ‌ ಭಾಗಿ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಚಿಕ್ಕಬಳ್ಳಾಪುರದ ನಂದಿಬೆಟ್ಟ ರಸ್ತೆಯ ಖಾಸಗಿ ಹೋಟೆಲ್‌ನಲ್ಲಿ‌ ಆಯೋಜಿಸಿದ್ದ "ಕಾಂಗ್ರೆಸ್ ನಡೆ-ಮತ ರಕ್ಷಣೆಯ ಕಡೆ" ಜಾಗೃತ…

3 hours ago

1 ವರ್ಷ 4 ತಿಂಗಳ ಮಗುವಿನ ಕಣ್ಣು ದಾನ: ಸಾವಿನಲ್ಲೂ ಮಾನವೀಯತೆ ಮೆರೆದ ಕುಟುಂಬ

ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…

1 day ago

ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಶಿಕ್ಷಣಕ್ಕೆ ‌ಪೂರಕ- ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್‌ ರಾಜ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ

ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ‌ಪೂರಕವಾಗಿದೆ. ಇದನ್ನು ‌ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್‌ನ…

1 day ago

ಫ್ರಿಡ್ಜ್ ಕ್ಲೀನ್ ಮಾಡುವಾಗ ವಿದ್ಯುತ್ ಶಾಕ್: ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…

2 days ago

“ಎಲ್ಲವೂ ವಿಫಲವಾದಾಗ ತಾಳ್ಮೆ ಸಫಲವಾಗುತ್ತದೆ”…….

" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…

2 days ago

ಎಲ್ರಿ ಅಧಿಕಾರಿಗಳು, ಜನರ ಸಮಸ್ಯೆ ಕೇಳೋದ್ಯಾರು..?- ತಹಶೀಲ್ದಾರ್ ಮಲ್ಲಪ್ಪ ಕೆ ಯರಗೋಳಗೆ ಸಚಿವ ಕೆ.ಎಚ್ ಮುನಿಯಪ್ಪ ತೀವ್ರ ತರಾಟೆ

ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…

3 days ago