ಇಂದಿನಿಂದ ದೊಡ್ಡಬಳ್ಳಾಪುರ ರಾಗಿ ಖರೀದಿ ಕೇಂದ್ರದಲ್ಲಿ ಕನಿಷ್ಠ ಬೆಂಬಲ ಯೋಜನೆಯಡಿ ರಾಗಿ ಖರೀದಿ ಪ್ರಕ್ರಿಯೆ ಆರಂಭ

2025-26ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ರಾಗಿಯನ್ನು ಖರೀದಿಸುವ ಕಾರ್ಯ ದೊಡ್ಡಬಳ್ಳಾಪುರದ ಎಂಪಿಎಂಸಿ ಆವರಣದಲ್ಲಿರುವ ರಾಗಿ ಖರೀದಿ ಕೇಂದ್ರದಲ್ಲಿ ಇಂದಿನಿಂದ ಅಧಿಕೃತವಾಗಿ ಆರಂಭವಾಗಿದೆ.

ಈಗಾಗಲೇ ನೋಂದಣಿ ಮಾಡಿಕೊಂಡಿರುವ ರೈತರು ಟ್ರ್ಯಾಕ್ಟರ್ ಹಾಗೂ ಇತರೆ ಗೂಡ್ಸ್ ವಾಹನಗಳಲ್ಲಿ ರಾಗಿ ತಂದಿದ್ದಾರೆ. ರಾಗಿ ಖರೀದಿ ಕೇಂದ್ರದಲ್ಲಿ ರಾಗಿ ಹೊತ್ತ ಟ್ರ್ಯಾಕ್ಟರ್ ಗಳು ಸಾಲುಗಟ್ಟಿ ನಿಂತಿರುವ ದೃಶ್ಯ ಕಂಡುಬಂದಿದೆ…..

ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಅಂದಾಜು 6 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿಸುವ ಗುರಿಯನ್ನು ಹೊಂದಿದ್ದು, ರೈತರಿಂದ ನೇರವಾಗಿ ರಾಗಿ ಖರೀದಿಸಿ ಅದರ ಹಣವನ್ನು ಯಾವುದೇ ಮಧ್ಯವರ್ತಿಗೆ ಆಸ್ಪದ ನೀಡದೇ ರೈತರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ನೇರವಾಗಿ ಸಂದಾಯ ಮಾಡಲಾಗುತ್ತಿದೆ.

ಪ್ರತಿ ಕ್ವಿಂಟಾಲ್ ರಾಗಿಗೆ ರೂ. 4886/- ನಿಗದಿ*

2025-26 ನೇ ಸಾಲಿನ ಕನಿಷ್ಠ ಬೆಂಬಲ ಯೋಜನೆಯಡಿ ಪ್ರತಿ ಕ್ವಿಂಟಾಲ್ ರಾಗಿಗೆ ರೂ.4886/- ನಿಗದಿ ಪಡಿಸಲಾಗಿದೆ. ಪ್ರತಿ ರೈತರಿಂದ ಒಂದು ಎಕರೆಗೆ 10 ಕ್ವಿಂಟಾಲ್ ನಂತೆ ಗರಿಷ್ಟ 50 ಕ್ವಿಂಟಾಲ್ ಗಳನ್ನು ಮೀರದಂತೆ ಉತ್ತಮ ಗುಣಮಟ್ಟದ ರಾಗಿ ಖರೀದಿಸಲಾಗುವುದು. ಪ್ರಸಕ್ತ ಸಾಲಿನ ರಾಗಿ ಖರೀದಿ ಪ್ರಕ್ರಿಯೆಯಲ್ಲಿ ಎರಡು ಬಾರಿ ಬಯೋಮೆಟ್ರಿಕ್ ಬಳಕೆಯಾಗುತ್ತದೆ. ಒಂದು ಬಾರಿ ನೋಂದಣಿ ಸಂದರ್ಭದಲ್ಲಿ ಇನ್ನೊಂದು ರಾಗಿ ಖರೀದಿ ವೇಳೆಯಲ್ಲಿ ಹಾಗಾಗಿ ನೋಂದಾಯಿತ ರೈತರೇ ರಾಗಿ ಖರೀದಿ ಕೇಂದ್ರಗಳಿಗೆ ರಾಗಿ ತರುವುದು ಕಡ್ಡಾಯವಾಗಿರುತ್ತದೆ.

*ತಾಲ್ಲೂಕುವಾರು ರೈತರ ನೋಂದಣಿ ವಿವರ:*

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕು- 3678, ದೊಡ್ಡಬಳ್ಳಾಪುರ ತಾಲ್ಲೂಕು- 12687, ಹೊಸಕೋಟೆ ತಾಲೂಕು-1240,  ನೆಲಮಂಗಲ ತಾಲೂಕು- 5619 ಸೇರಿ ಒಟ್ಟು 23224 ರೈತರು ರಾಗಿ ಪೂರೈಕೆಗೆ ನೋಂದಣಿ ಮಾಡಿಸಿಕೊಂಡಿದ್ದಾರೆ.

Ramesh Babu

Journalist

Recent Posts

ಕಾರಿನಲ್ಲಿ ಬೆಂಕಿ: ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮ: ಹಲವು ಅನುಮಾನ

ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…

10 hours ago

ಶ್ರೀ ಅಭಯ ಚೌಡೇಶ್ವರಿ ದೇವಿಯ ಜ್ಯೋತಿ, ಪಲ್ಲಕ್ಕಿ ಉತ್ಸವ

ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…

10 hours ago

ಗಂಗಸಂದ್ರದಲ್ಲಿ ಮೇ.6,7ರಂದು ಶ್ರೀ ಅಶ್ವತ್ಥ ಕಟ್ಟೆ ನಾಗ ದೇವರ ಪ್ರತಿಷ್ಠಾಪನಾ ಮಹೋತ್ಸವ

ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…

14 hours ago

ಬುದ್ದ ಹುಣ್ಣಿಮೆಯಲ್ಲಿ ಜ್ಞಾನವನ್ನು ಹುಡುಕುತ್ತಾ……

ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…

20 hours ago

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

1 day ago

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

1 day ago