ಇಂದಿನಿಂದ “ದೊಡ್ಡಬಳ್ಳಾಪುರ ಸೀರೆ ಸಂತೆ”- ಭರ್ಜರಿ ರೆಸ್ಪಾನ್ಸ್- ಸೀರೆ ಕೊಳ್ಳಲು ಮುಗಿಬಿದ್ದ ಜನ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ “ದೊಡ್ಡಬಳ್ಳಾಪುರ ಸೀರೆ ಸಂತೆ” ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ.

ಇಂದಿನಿಂದ ಫೆ.22ರವರೆಗೆ  “ದೊಡ್ಡಬಳ್ಳಾಪುರ ಸೀರೆ ಸಂತೆ ಇರಲಿದೆ. ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಭಗತ್ ಸಿಂಗ್ ಕ್ರೀಡಾಂಗಣದಕ್ಕೆ ತಂಡೋಪತಂಡವಾಗಿ ಜನ ಆಗಮಿಸುತ್ತಿದ್ದಾರೆ… ಇನ್ನೇನು ಕೆಲವೇ ನಿಮಿಷಗಳಲ್ಲಿ ಉದ್ಘಾಟನೆ ನೆರವೇರಲಿದೆ…

ಕಾರ್ಯಕ್ರಮದಲ್ಲಿ ಒಟ್ಟು 54 ಸೀರೆ ಮಳಿಗೆಗಳನ್ನು ಇರಿಸಲಾಗಿದೆ. ತರೇಹವಾರಿ ಸೀರೆಗಳ ಪ್ರದರ್ಶನ ಹಾಗೂ ಮಾರಾಟ ಭರ್ಜರಿಯಾಗಿ ನಡೆಯುತ್ತಿದೆ… ತಮಗೆ ಇಷ್ಟವಾದ ಸೀರೆಗಳನ್ನು ಕೊಂಡುಕೊಳ್ಳಲು ಜನ ಮುಗಿಬಿದ್ದಿದ್ದಾರೆ…

ದೊಡ್ಡಬಳ್ಳಾಪುರದಲ್ಲಿ ನೇಕಾರಿಕೆ, ಗುಡಿ ಕೈಗಾರಿಕೆ ನಮ್ಮೆಯ ಕುಲಕಸುಬುಗಳಾಗಿವೆ. ದೊಡ್ಡಬಳ್ಳಾಪುರಕ್ಕೆ ಮ್ಯಾಂಚೆಸ್ಟರ್ ಆಫ್ ಇಂಡಿಯಾ ಬಿರುದು ಬಂದಿದೆ.. ದೊಡ್ಡಬಳ್ಳಾಪುರ ಸೀರೆಗಳ ವೈಶಿಷ್ಟ್ಯಗಳ ಬಗ್ಗೆ ಪರಿಚಯ ಮಾಡುವ ಉದ್ದೇಶದಿಂದ ಕಾರ್ಯಕ್ರಮ ಆಯೋಜನೆ.

ಉತ್ತಮ ಸೀರೆಗಳಿಗೆ ಬಹುಮಾನ ವಿತರಣೆ ಮಾಡಲಾಗುವುದು. ಉದ್ಘಾಟನಾ ಕಾರ್ಯಕ್ರಮಕ್ಕೆ ‘ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋ ವಿನ್ನರ್ ಗಿಲ್ಲಿ ನಟ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ.

ಸೀರೆ ಸಂತೆ ಕಾರ್ಯಕ್ರಮದಲ್ಲಿ ಯಾವುದೇ ಶುಲ್ಕ ಇರುವುದಿಲ್ಲ. ಮಳಿಗೆಗಳಲ್ಲಿ ದೊಡ್ಡಬಳ್ಳಾಪುರದಲ್ಲೇ ನೇಯ್ದಿರುವ ಸೀರೆಗಳನ್ನು ಮಾತ್ರ ಪ್ರದರ್ಶನಕ್ಕೆ ಇಡಲು ಅವಕಾಶ ಕಲ್ಪಿಸಲಾಗಿದೆ. ಮಳಿಗೆಗಳನ್ನು ಇಡಲು ಹಾಗೂ ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಯಾವುದೇ ಶುಲ್ಕ ಇರುವುದಿಲ್ಲ.

ಮೂರು ದಿನ ವಿವಿಧ ಕಲಾ ತಂಡಗಳಿಂದ ನಗೆ ಕಾರ್ಯಕ್ರಮ, ನೃತ್ಯ ಕಾರ್ಯಕ್ರಮ, ರಸ ಮಂಜರಿ, ಮಕ್ಕಳ ಫ್ಯಾಷನ್ ಶೋ ಕಾರ್ಯಕ್ರಮ ಸೇರಿದಂತೆ ಇತರೆ ಮನರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿರುತ್ತದೆ.

ಗಿಲ್ಲಿ ನಟ, ಪ್ರಾಣೇಶ್, ರಘು ದೀಕ್ಷಿತ್, ಕಾಮಿಡಿ ಕಿಲಾಡಿಗಳು ಶೋ ನ ಕಲಾವಿದರು ಸೇರಿದಂತೆ ಇತರರು  ಮನರಂಜನೆ ಕಾರ್ಯಕ್ರಮಗಳನ್ನು ನಡೆಸಿಕೊಡಲಿದ್ದಾರೆ..

Ramesh Babu

Journalist

Recent Posts

ಕೋಲಾರಮ್ಮ ಜಿಲ್ಲಾ ಕೋಳಿ ಸಾಕಾಣಿಕೆದಾರರ ಮತ್ತು ಮಾರಾಟಗಾರರ ಸಹಕಾರ ಸಂಘದ ಜಿಲ್ಲಾ ಸಮ್ಮೇಳನ

ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…

4 hours ago

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಬಾಣಂತಿ ಹಾಗೂ ನವಜಾತ ಗಂಡು ಮಗುವಿನ ಸಾ*ವು..!

ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ‌‌ ಮಾಡಿದ್ದಾರೆ.…

6 hours ago

ಬಾಗಲಕೋಟೆಯಲ್ಲಿ ಕಲ್ಲುತೂರಾಟ ಪ್ರಕರಣ: ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ.…

6 hours ago

ಪ್ರತಿಭಟನೆ – ಮುಷ್ಕರ – ಮುತ್ತಿಗೆ – ಚಳವಳಿ – ಬಂದ್ – ಸತ್ಯಾಗ್ರಹ – ಹರತಾಳ – ಅಮರಣಾಂತ ಉಪವಾಸ – ಜೈಲ್ ಭರೋ ..

ಪ್ರತಿಭಟನೆ - ಮುಷ್ಕರ - ಮುತ್ತಿಗೆ - ಚಳವಳಿ - ಬಂದ್ - ಸತ್ಯಾಗ್ರಹ - ಹರತಾಳ - ಅಮರಣಾಂತ…

13 hours ago

ಕೆ.ಜಿ.ಹಳ್ಳಿ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚನೆ

‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ…

23 hours ago

ಯೂರಿಯಾ ಅಕ್ರಮ ದಾಸ್ತಾನು ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳ ದಾಳಿ…18 ಲಕ್ಷ ಮೌಲ್ಯದ ಗೊಬ್ಬರ ವಶ..1296 ಮೂಟೆ ಯೂರಿಯಾ ವಶ…

ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296…

24 hours ago