ಇಂದಿನಿಂದ “ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಸೀರೆ ಕೊಳ್ಳಲು ಮುಗಿಬಿದ್ದ ಜನ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ “ದೊಡ್ಡಬಳ್ಳಾಪುರ ಸ್ಯಾರಿ ಸಂತೆ” ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ.

ಇಂದಿನಿಂದ ಫೆ.22ರವರೆಗೆ  “ದೊಡ್ಡಬಳ್ಳಾಪುರ ಸ್ಯಾರಿ ಸಂತೆ ಇರಲಿದೆ. ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಭಗತ್ ಸಿಂಗ್ ಕ್ರೀಡಾಂಗಣದಕ್ಕೆ ತಂಡೋಪತಂಡವಾಗಿ ಜನ ಆಗಮಿಸುತ್ತಿದ್ದಾರೆ… ಇನ್ನೇನು ಕೆಲವೇ ನಿಮಿಷಗಳಲ್ಲಿ ಉದ್ಘಾಟನೆ ನೆರವೇರಲಿದೆ…

ಕಾರ್ಯಕ್ರಮದಲ್ಲಿ ಒಟ್ಟು 54 ಸೀರೆ ಮಳಿಗೆಗಳನ್ನು ಇರಿಸಲಾಗಿದೆ. ತರೇಹವಾರಿ ಸೀರೆಗಳ ಪ್ರದರ್ಶನ ಹಾಗೂ ಮಾರಾಟ ಭರ್ಜರಿಯಾಗಿ ನಡೆಯುತ್ತಿದೆ… ತಮಗೆ ಇಷ್ಟವಾದ ಸೀರೆಗಳನ್ನು ಕೊಂಡುಕೊಳ್ಳಲು ಜನ ಮುಗಿಬಿದ್ದಿದ್ದಾರೆ…

ದೊಡ್ಡಬಳ್ಳಾಪುರದಲ್ಲಿ ನೇಕಾರಿಕೆ, ಗುಡಿ ಕೈಗಾರಿಕೆ ನಮ್ಮೆಯ ಕುಲಕಸುಬುಗಳಾಗಿವೆ. ದೊಡ್ಡಬಳ್ಳಾಪುರಕ್ಕೆ ಮ್ಯಾಂಚೆಸ್ಟರ್ ಆಫ್ ಇಂಡಿಯಾ ಬಿರುದು ಬಂದಿದೆ.. ದೊಡ್ಡಬಳ್ಳಾಪುರ ಸೀರೆಗಳ ವೈಶಿಷ್ಟ್ಯಗಳ ಬಗ್ಗೆ ಪರಿಚಯ ಮಾಡುವ ಉದ್ದೇಶದಿಂದ ಕಾರ್ಯಕ್ರಮ ಆಯೋಜನೆ.

ಉತ್ತಮ ಸೀರೆಗಳಿಗೆ ಬಹುಮಾನ ವಿತರಣೆ ಮಾಡಲಾಗುವುದು. ಉದ್ಘಾಟನಾ ಕಾರ್ಯಕ್ರಮಕ್ಕೆ ‘ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋ ವಿನ್ನರ್ ಗಿಲ್ಲಿ ನಟ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ.

ಸೀರೆ ಸಂತೆ ಕಾರ್ಯಕ್ರಮದಲ್ಲಿ ಯಾವುದೇ ಶುಲ್ಕ ಇರುವುದಿಲ್ಲ. ಮಳಿಗೆಗಳಲ್ಲಿ ದೊಡ್ಡಬಳ್ಳಾಪುರದಲ್ಲೇ ನೇಯ್ದಿರುವ ಸೀರೆಗಳನ್ನು ಮಾತ್ರ ಪ್ರದರ್ಶನಕ್ಕೆ ಇಡಲು ಅವಕಾಶ ಕಲ್ಪಿಸಲಾಗಿದೆ. ಮಳಿಗೆಗಳನ್ನು ಇಡಲು ಹಾಗೂ ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಯಾವುದೇ ಶುಲ್ಕ ಇರುವುದಿಲ್ಲ.

ಮೂರು ದಿನ ವಿವಿಧ ಕಲಾ ತಂಡಗಳಿಂದ ನಗೆ ಕಾರ್ಯಕ್ರಮ, ನೃತ್ಯ ಕಾರ್ಯಕ್ರಮ, ರಸ ಮಂಜರಿ, ಮಕ್ಕಳ ಫ್ಯಾಷನ್ ಶೋ ಕಾರ್ಯಕ್ರಮ ಸೇರಿದಂತೆ ಇತರೆ ಮನರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿರುತ್ತದೆ.

ಗಿಲ್ಲಿ ನಟ, ಪ್ರಾಣೇಶ್, ರಘು ದೀಕ್ಷಿತ್, ಕಾಮಿಡಿ ಕಿಲಾಡಿಗಳು ಶೋ ನ ಕಲಾವಿದರು ಸೇರಿದಂತೆ ಇತರರು  ಮನರಂಜನೆ ಕಾರ್ಯಕ್ರಮಗಳನ್ನು ನಡೆಸಿಕೊಡಲಿದ್ದಾರೆ..

Ramesh Babu

Journalist

Recent Posts

ದಶಕಗಳುರುಳಿದರೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಿಲ್ಲ ಜಿಲ್ಲಾ ಕೇಂದ್ರ

ರಾಜ್ಯ ರಾಜಧಾನಿ ಬೆಂಗಳೂರಿಗೆ ಪಕ್ಕದಲ್ಲೇ ಇರುವ ಜಿಲ್ಲೆ ಎಂದರೆ ಅದು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಕೈಗಾರಿಕಾ ಬೆಳವಣಿಗೆ, ವೇಗವಾದ ನಗರೀಕರಣ,…

2 hours ago

ದೇವೇಗೌಡರ ವ್ಯಕ್ತಿತ್ವವನ್ನು ವಿಮರ್ಶೆಗೆ ಒಳಪಡಿಸುವುದು ಸಹ ಅಷ್ಟೇ ಸಂಕೀರ್ಣ….

ಸನ್ಮಾನ್ಯ ಶ್ರೀ ಎಚ್. ಡಿ. ದೇವೇಗೌಡ,... 94, ನಾಟ್ ಔಟ್, ಶತಕಕ್ಕೆ 6 ಮಾತ್ರ ಬಾಕಿ, ಅವರು ಶತಕವನ್ನು ಪೂರೈಸಲಿ…

2 hours ago

ಮೇ 20 ಇ-ಫಾರ್ಮಸಿ ವಿರೋಧಿ ಬಂದ್‌ಗೆ ಔಷಧ ವ್ಯಾಪಾರಿಗಳ ಬೆಂಬಲ

ದೊಡ್ಡಬಳ್ಳಾಪುರ: ದೇಶದಲ್ಲಿ ಇ-ಫಾರ್ಮಸಿ ಹಾಗೂ ಆನ್ಲೈನ್ ಮೂಲಕ ಔಷಧ ಮಾರಾಟವನ್ನು ವಿರೋಧಿಸಿ ಮೇ 20 ರಂದು ದೇಶವ್ಯಾಪಿ ಕರೆ ನೀಡಿರುವ…

12 hours ago

ಹಾಡೋನಹಳ್ಳಿ ವಿಎಸ್ ಎಸ್ ಎನ್ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘ(ವಿಎಸ್ಎಸ್ ಎನ್) ಚುನಾವಣೆ ನಡೆದಿದ್ದು, ವಿಎಸ್ಎಸ್ ಎನ್ ನ…

13 hours ago

ವಿ.ಡಿ ಸತೀಶನ್ ಕೇರಳದ ನೂತನ ಮುಖ್ಯಮಂತ್ರಿ

ವಿಡಿ ಸತೀಶನ್ ಅವರು ಕೇರಳದ ನೂತನ ಮುಖ್ಯಮಂತ್ರಿಯಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. ತಿರುವನಂತಪುರಂನ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆದ ಪ್ರಮಾಣವಚನ ಸ್ವೀಕಾರ…

18 hours ago

ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಮತ್ತು ನೀಟ್ ಪರೀಕ್ಷೆಯ ಅಕ್ರಮ ಖಂಡಿಸಿ “ಕೈ” ಪ್ರತಿಭಟನೆ

ದೊಡ್ಡಬಳ್ಳಾಪುರ: ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಮತ್ತು ನೀಟ್ (NEET) ಪರೀಕ್ಷೆಯ ಅಕ್ರಮಗಳನ್ನು ಖಂಡಿಸಿ ಬೆಂಗಳೂರು…

19 hours ago