ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ “ದೊಡ್ಡಬಳ್ಳಾಪುರ ಸ್ಯಾರಿ ಸಂತೆ” ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ.
ಇಂದಿನಿಂದ ಫೆ.22ರವರೆಗೆ “ದೊಡ್ಡಬಳ್ಳಾಪುರ ಸ್ಯಾರಿ ಸಂತೆ ಇರಲಿದೆ. ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಭಗತ್ ಸಿಂಗ್ ಕ್ರೀಡಾಂಗಣದಕ್ಕೆ ತಂಡೋಪತಂಡವಾಗಿ ಜನ ಆಗಮಿಸುತ್ತಿದ್ದಾರೆ… ಇನ್ನೇನು ಕೆಲವೇ ನಿಮಿಷಗಳಲ್ಲಿ ಉದ್ಘಾಟನೆ ನೆರವೇರಲಿದೆ…
ಕಾರ್ಯಕ್ರಮದಲ್ಲಿ ಒಟ್ಟು 54 ಸೀರೆ ಮಳಿಗೆಗಳನ್ನು ಇರಿಸಲಾಗಿದೆ. ತರೇಹವಾರಿ ಸೀರೆಗಳ ಪ್ರದರ್ಶನ ಹಾಗೂ ಮಾರಾಟ ಭರ್ಜರಿಯಾಗಿ ನಡೆಯುತ್ತಿದೆ… ತಮಗೆ ಇಷ್ಟವಾದ ಸೀರೆಗಳನ್ನು ಕೊಂಡುಕೊಳ್ಳಲು ಜನ ಮುಗಿಬಿದ್ದಿದ್ದಾರೆ…
ದೊಡ್ಡಬಳ್ಳಾಪುರದಲ್ಲಿ ನೇಕಾರಿಕೆ, ಗುಡಿ ಕೈಗಾರಿಕೆ ನಮ್ಮೆಯ ಕುಲಕಸುಬುಗಳಾಗಿವೆ. ದೊಡ್ಡಬಳ್ಳಾಪುರಕ್ಕೆ ಮ್ಯಾಂಚೆಸ್ಟರ್ ಆಫ್ ಇಂಡಿಯಾ ಬಿರುದು ಬಂದಿದೆ.. ದೊಡ್ಡಬಳ್ಳಾಪುರ ಸೀರೆಗಳ ವೈಶಿಷ್ಟ್ಯಗಳ ಬಗ್ಗೆ ಪರಿಚಯ ಮಾಡುವ ಉದ್ದೇಶದಿಂದ ಕಾರ್ಯಕ್ರಮ ಆಯೋಜನೆ.
ಉತ್ತಮ ಸೀರೆಗಳಿಗೆ ಬಹುಮಾನ ವಿತರಣೆ ಮಾಡಲಾಗುವುದು. ಉದ್ಘಾಟನಾ ಕಾರ್ಯಕ್ರಮಕ್ಕೆ ‘ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋ ವಿನ್ನರ್ ಗಿಲ್ಲಿ ನಟ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ.
ಸೀರೆ ಸಂತೆ ಕಾರ್ಯಕ್ರಮದಲ್ಲಿ ಯಾವುದೇ ಶುಲ್ಕ ಇರುವುದಿಲ್ಲ. ಮಳಿಗೆಗಳಲ್ಲಿ ದೊಡ್ಡಬಳ್ಳಾಪುರದಲ್ಲೇ ನೇಯ್ದಿರುವ ಸೀರೆಗಳನ್ನು ಮಾತ್ರ ಪ್ರದರ್ಶನಕ್ಕೆ ಇಡಲು ಅವಕಾಶ ಕಲ್ಪಿಸಲಾಗಿದೆ. ಮಳಿಗೆಗಳನ್ನು ಇಡಲು ಹಾಗೂ ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಯಾವುದೇ ಶುಲ್ಕ ಇರುವುದಿಲ್ಲ.
ಮೂರು ದಿನ ವಿವಿಧ ಕಲಾ ತಂಡಗಳಿಂದ ನಗೆ ಕಾರ್ಯಕ್ರಮ, ನೃತ್ಯ ಕಾರ್ಯಕ್ರಮ, ರಸ ಮಂಜರಿ, ಮಕ್ಕಳ ಫ್ಯಾಷನ್ ಶೋ ಕಾರ್ಯಕ್ರಮ ಸೇರಿದಂತೆ ಇತರೆ ಮನರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿರುತ್ತದೆ.
ಗಿಲ್ಲಿ ನಟ, ಪ್ರಾಣೇಶ್, ರಘು ದೀಕ್ಷಿತ್, ಕಾಮಿಡಿ ಕಿಲಾಡಿಗಳು ಶೋ ನ ಕಲಾವಿದರು ಸೇರಿದಂತೆ ಇತರರು ಮನರಂಜನೆ ಕಾರ್ಯಕ್ರಮಗಳನ್ನು ನಡೆಸಿಕೊಡಲಿದ್ದಾರೆ..
ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…
ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…
ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…
ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…
ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…
ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…