ಇಂದಿನಿಂದ ಮತದಾರರಿಗೆ ಇವಿಎಂ, ವಿವಿ ಪ್ಯಾಟ್ ಕುರಿತು ಪ್ರಾತ್ಯಕ್ಷಿಕೆ: ಉಪವಿಭಾಗಾಧಿಕಾರಿ ತೇಜಸ್ ಕುಮಾರ್ ಮಾಹಿತಿ

ಇನ್ನೇನು ಕೆಲವೇ ದಿನಗಳಲ್ಲಿ ಸಾರ್ವತ್ರಿಕ ಚುನಾವಣೆ ಘೋಷಣೆ ಆಗಲಿದ್ದು, ಈ ಹಿನ್ನೆಲೆ ಚುನಾವಣಾಧಿಕಾರಿಗಳು ಚುನಾವಣೆಗೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 276 ಮತಗಟ್ಟೆಗಳಲ್ಲಿ ಇಂದಿನಿಂದ ಅತ್ಯಾಧುನಿಕ ತಂತ್ರಜ್ಞಾನದ ಎಂ-3 ಶ್ರೇಣಿಯ ಇವಿಎಂ ಮತಯಂತ್ರ‌ ಹಾಗೂ ವಿವಿ ಪ್ಯಾಟ್ ಕುರಿತು ಪ್ರಾತ್ಯಕ್ಷಿಕೆ ಆರಂಭ.

ಕಳೆದ ಭಾನುವಾರ ಇವಿಎಂ ಹಾಗೂ ವಿವಿ ಪ್ಯಾಟ್ ಗಳ ಮೊದಲ ಹಂತದ ತಪಾಸಣೆ ಮಾಡಿಸಿದ್ದು, ಜಿಲ್ಲಾಧಿಕಾರಿ ಕಚೇರಿಯ ಸ್ಟ್ರಾಂಗ್ ರೂಂನಲ್ಲಿ ಇರಿಸಲಾಗಿದೆ. 15 ಇವಿಎಂ ಯಂತ್ರಗಳನ್ನು ತರಬೇತಿ ಹಾಗೂ ಜಾಗೃತಿ ಮೂಡಿಸಲು ನೀಡಲಾಗಿದೆ ಎಂದು ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ತೇಜಸ್ ಕುಮಾರ್ ತಿಳಿಸಿದರು.

ವಿಧಾನಸಭೆ ಕ್ಷೇತ್ರದ ಪ್ರತಿ ಮತಗಟ್ಟೆಯಲ್ಲಿ ಮತದಾರರಿಗೆ ಇವಿಎಂ ಯಂತ್ರಗಳ ಪ್ರಾತ್ಯಕ್ಷಿಕೆ ನೀಡಲು ಪಿಡಿಒ, ಆರ್ ಐ, ವಿಎ ಹಾಗೂ ಗ್ರಾಮ ಸೇವಕರನ್ನು ಒಳಗೊಂಡ ತಂಡ ರಚಿಸಿದ್ದು, ಇಂದಿನಿಂದ ಪ್ರಾತ್ಯಕ್ಷಿಕೆ ನೀಡಲಾಗುತ್ತಿದೆ. ಜನರಲ್ಲಿ ಅರಿವು ಮೂಡಿಸಿ ಹೆಚ್ಚಿನ ಮತದಾನಕ್ಕೆ ಶ್ರಮಿಸಲಾಗುವುದು ಎಂದು ಹೇಳಿದರು.

ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಪ್ರಾತ್ಯಕ್ಷಿಕೆಗಾಗಿ ಇವಿಎಂ ಕಿಯೋಸ್ಕ್ ಇಡಲಾಗಿದ್ದು, ಇಲ್ಲಿಯೂ ಮತದಾರರಿಗೆ ನೂತನ ಮತಯಂತ್ರಗಳ ಕಾರ್ಯವೈಖರಿ ಕುರಿತು ಅರಿವು ಮೂಡಿಸಲಾಗುವುದು. ಕ್ಷೇತ್ರದ 276 ಮತಗಟ್ಟೆಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಖಾತ್ರಿಪಡಿಸಿಕೊಳ್ಳಲಾಗಿದೆ ಎಂದು ತಹಶಿಲ್ದಾರ್ ಮೋಹನ್ ಕುಮಾರಿ ತಿಳಿಸಿದರು.

Ramesh Babu

Journalist

Recent Posts

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

6 hours ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

10 hours ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

11 hours ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

18 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

1 day ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

2 days ago