ಇಂದಿನಿಂದ ಮತದಾರರಿಗೆ ಇವಿಎಂ, ವಿವಿ ಪ್ಯಾಟ್ ಕುರಿತು ಪ್ರಾತ್ಯಕ್ಷಿಕೆ: ಉಪವಿಭಾಗಾಧಿಕಾರಿ ತೇಜಸ್ ಕುಮಾರ್ ಮಾಹಿತಿ

ಇನ್ನೇನು ಕೆಲವೇ ದಿನಗಳಲ್ಲಿ ಸಾರ್ವತ್ರಿಕ ಚುನಾವಣೆ ಘೋಷಣೆ ಆಗಲಿದ್ದು, ಈ ಹಿನ್ನೆಲೆ ಚುನಾವಣಾಧಿಕಾರಿಗಳು ಚುನಾವಣೆಗೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 276 ಮತಗಟ್ಟೆಗಳಲ್ಲಿ ಇಂದಿನಿಂದ ಅತ್ಯಾಧುನಿಕ ತಂತ್ರಜ್ಞಾನದ ಎಂ-3 ಶ್ರೇಣಿಯ ಇವಿಎಂ ಮತಯಂತ್ರ‌ ಹಾಗೂ ವಿವಿ ಪ್ಯಾಟ್ ಕುರಿತು ಪ್ರಾತ್ಯಕ್ಷಿಕೆ ಆರಂಭ.

ಕಳೆದ ಭಾನುವಾರ ಇವಿಎಂ ಹಾಗೂ ವಿವಿ ಪ್ಯಾಟ್ ಗಳ ಮೊದಲ ಹಂತದ ತಪಾಸಣೆ ಮಾಡಿಸಿದ್ದು, ಜಿಲ್ಲಾಧಿಕಾರಿ ಕಚೇರಿಯ ಸ್ಟ್ರಾಂಗ್ ರೂಂನಲ್ಲಿ ಇರಿಸಲಾಗಿದೆ. 15 ಇವಿಎಂ ಯಂತ್ರಗಳನ್ನು ತರಬೇತಿ ಹಾಗೂ ಜಾಗೃತಿ ಮೂಡಿಸಲು ನೀಡಲಾಗಿದೆ ಎಂದು ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ತೇಜಸ್ ಕುಮಾರ್ ತಿಳಿಸಿದರು.

ವಿಧಾನಸಭೆ ಕ್ಷೇತ್ರದ ಪ್ರತಿ ಮತಗಟ್ಟೆಯಲ್ಲಿ ಮತದಾರರಿಗೆ ಇವಿಎಂ ಯಂತ್ರಗಳ ಪ್ರಾತ್ಯಕ್ಷಿಕೆ ನೀಡಲು ಪಿಡಿಒ, ಆರ್ ಐ, ವಿಎ ಹಾಗೂ ಗ್ರಾಮ ಸೇವಕರನ್ನು ಒಳಗೊಂಡ ತಂಡ ರಚಿಸಿದ್ದು, ಇಂದಿನಿಂದ ಪ್ರಾತ್ಯಕ್ಷಿಕೆ ನೀಡಲಾಗುತ್ತಿದೆ. ಜನರಲ್ಲಿ ಅರಿವು ಮೂಡಿಸಿ ಹೆಚ್ಚಿನ ಮತದಾನಕ್ಕೆ ಶ್ರಮಿಸಲಾಗುವುದು ಎಂದು ಹೇಳಿದರು.

ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಪ್ರಾತ್ಯಕ್ಷಿಕೆಗಾಗಿ ಇವಿಎಂ ಕಿಯೋಸ್ಕ್ ಇಡಲಾಗಿದ್ದು, ಇಲ್ಲಿಯೂ ಮತದಾರರಿಗೆ ನೂತನ ಮತಯಂತ್ರಗಳ ಕಾರ್ಯವೈಖರಿ ಕುರಿತು ಅರಿವು ಮೂಡಿಸಲಾಗುವುದು. ಕ್ಷೇತ್ರದ 276 ಮತಗಟ್ಟೆಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಖಾತ್ರಿಪಡಿಸಿಕೊಳ್ಳಲಾಗಿದೆ ಎಂದು ತಹಶಿಲ್ದಾರ್ ಮೋಹನ್ ಕುಮಾರಿ ತಿಳಿಸಿದರು.

Ramesh Babu

Journalist

Recent Posts

ಅಫಿಡವಿಟ್ ಆಧಾರಿತ ಭೂಪರಿವರ್ತನೆ ಅರ್ಜಿಗಳ ತ್ವರಿತ ವಿಲೇವಾರಿ ಕುರಿತಂತೆ ಕಂದಾಯ ಆಯುಕ್ತರ ಹೊಸ ಆದೇಶ

ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತನೆ ಮಾಡುವ ಪ್ರಕ್ರಿಯೆಯನ್ನು ಸರಳೀಕರಿಸುವ ಉದ್ದೇಶದಿಂದ ಅಫಿಡವಿಟ್ ಆಧಾರಿತ ಭೂಪರಿವರ್ತನೆ ಅರ್ಜಿಗಳನ್ನು ನಿಗದಿತ ಅವಧಿಯಲ್ಲಿ…

34 minutes ago

ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ…..?

ಪಟಾಕಿ ದುರಂತಕ್ಕೆ ಯಾರು ಹೊಣೆ.... ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ..... ಲೇಸರ್…

9 hours ago

ನಾಳೆ (ಏ.23ರಂದು) ವಿವಿಧ ಊರುಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.23 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F09-Rajaghatta, F03-Thalagavara, F12-Heggadihalli, F17- Nandi…

9 hours ago

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

21 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

23 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

23 hours ago