ಇಂದಿನಿಂದ ಮತದಾರರಿಗೆ ಇವಿಎಂ, ವಿವಿ ಪ್ಯಾಟ್ ಕುರಿತು ಪ್ರಾತ್ಯಕ್ಷಿಕೆ: ಉಪವಿಭಾಗಾಧಿಕಾರಿ ತೇಜಸ್ ಕುಮಾರ್ ಮಾಹಿತಿ

ಇನ್ನೇನು ಕೆಲವೇ ದಿನಗಳಲ್ಲಿ ಸಾರ್ವತ್ರಿಕ ಚುನಾವಣೆ ಘೋಷಣೆ ಆಗಲಿದ್ದು, ಈ ಹಿನ್ನೆಲೆ ಚುನಾವಣಾಧಿಕಾರಿಗಳು ಚುನಾವಣೆಗೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 276 ಮತಗಟ್ಟೆಗಳಲ್ಲಿ ಇಂದಿನಿಂದ ಅತ್ಯಾಧುನಿಕ ತಂತ್ರಜ್ಞಾನದ ಎಂ-3 ಶ್ರೇಣಿಯ ಇವಿಎಂ ಮತಯಂತ್ರ‌ ಹಾಗೂ ವಿವಿ ಪ್ಯಾಟ್ ಕುರಿತು ಪ್ರಾತ್ಯಕ್ಷಿಕೆ ಆರಂಭ.

ಕಳೆದ ಭಾನುವಾರ ಇವಿಎಂ ಹಾಗೂ ವಿವಿ ಪ್ಯಾಟ್ ಗಳ ಮೊದಲ ಹಂತದ ತಪಾಸಣೆ ಮಾಡಿಸಿದ್ದು, ಜಿಲ್ಲಾಧಿಕಾರಿ ಕಚೇರಿಯ ಸ್ಟ್ರಾಂಗ್ ರೂಂನಲ್ಲಿ ಇರಿಸಲಾಗಿದೆ. 15 ಇವಿಎಂ ಯಂತ್ರಗಳನ್ನು ತರಬೇತಿ ಹಾಗೂ ಜಾಗೃತಿ ಮೂಡಿಸಲು ನೀಡಲಾಗಿದೆ ಎಂದು ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ತೇಜಸ್ ಕುಮಾರ್ ತಿಳಿಸಿದರು.

ವಿಧಾನಸಭೆ ಕ್ಷೇತ್ರದ ಪ್ರತಿ ಮತಗಟ್ಟೆಯಲ್ಲಿ ಮತದಾರರಿಗೆ ಇವಿಎಂ ಯಂತ್ರಗಳ ಪ್ರಾತ್ಯಕ್ಷಿಕೆ ನೀಡಲು ಪಿಡಿಒ, ಆರ್ ಐ, ವಿಎ ಹಾಗೂ ಗ್ರಾಮ ಸೇವಕರನ್ನು ಒಳಗೊಂಡ ತಂಡ ರಚಿಸಿದ್ದು, ಇಂದಿನಿಂದ ಪ್ರಾತ್ಯಕ್ಷಿಕೆ ನೀಡಲಾಗುತ್ತಿದೆ. ಜನರಲ್ಲಿ ಅರಿವು ಮೂಡಿಸಿ ಹೆಚ್ಚಿನ ಮತದಾನಕ್ಕೆ ಶ್ರಮಿಸಲಾಗುವುದು ಎಂದು ಹೇಳಿದರು.

ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಪ್ರಾತ್ಯಕ್ಷಿಕೆಗಾಗಿ ಇವಿಎಂ ಕಿಯೋಸ್ಕ್ ಇಡಲಾಗಿದ್ದು, ಇಲ್ಲಿಯೂ ಮತದಾರರಿಗೆ ನೂತನ ಮತಯಂತ್ರಗಳ ಕಾರ್ಯವೈಖರಿ ಕುರಿತು ಅರಿವು ಮೂಡಿಸಲಾಗುವುದು. ಕ್ಷೇತ್ರದ 276 ಮತಗಟ್ಟೆಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಖಾತ್ರಿಪಡಿಸಿಕೊಳ್ಳಲಾಗಿದೆ ಎಂದು ತಹಶಿಲ್ದಾರ್ ಮೋಹನ್ ಕುಮಾರಿ ತಿಳಿಸಿದರು.

Ramesh Babu

Journalist

Recent Posts

15 ನೇ ಸೆಪ್ಟೆಂಬರ್ 2026, ವಿಶ್ವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ…

  ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ.‌ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…

26 minutes ago

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

2 hours ago

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

14 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

15 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

16 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

20 hours ago