ಇಂದಿನಿಂದ ಮದ್ಯ ಮಾರಾಟ ನಿಷೇಧ..!! ದೊಡ್ಡಬಳ್ಳಾಪುರದಲ್ಲೂ ಮದ್ಯ ಅಂಗಡಿಗಳಿಗೆ ಬೀಗ

2023ರ ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಮೇ 10 ರಂದು ಮತದಾನ ಹಾಗೂ ಮೇ 13 ರಂದು ಮತ ಎಣಿಕೆ ನಡೆಯಲಿರುವ ಹಿನ್ನೆಲೆ, ಮುಕ್ತ, ಶಾಂತಿಯುತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಜಿಲ್ಲೆಯಾದ್ಯಂತ ಮದ್ಯ ಸಾಗಾಣಿಕೆ, ವಿತರಣೆ ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ.

ಈ ಕುರಿತಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ಆದೇಶದ ಮೇರೆಗೆ, ಮೇ 08 ರಂದು ಸಂಜೆ 5:00 ಗಂಟೆಯಿಂದ ಮೇ 11 ರಂದು ಬೆಳಗ್ಗೆ 6.00 ಗಂಟೆಯವರೆಗೆ ಹಾಗೂ ಮೇ 13 ರಂದು ಬೆಳಗ್ಗೆ 6.00 ಗಂಟೆಯಿಂದ ಮೇ 14 ರ ಬೆಳಿಗ್ಗೆ 6.00 ಗಂಟೆಯವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಮದ್ಯ ಸಾಗಾಣಿಕೆ, ವಿತರಣೆ ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಚುನಾವಣೆ ಅಧಿಕಾರಿಗಳು ಮದ್ಯ ಮಾರಾಟ ಮಳಿಗೆಗಳಿಗೆ ಬೀಗ ಹಾಕಿ, ಸೀಲ್ ಮಾಡಿದ್ದಾರೆ.

ದೊಡ್ಡಬಳ್ಳಾಪುರದಲ್ಲೂ‌ ಸಹ ಎಲ್ಲಾ ವಿವಿಧ ಮದ್ಯದ ವಹಿವಾಟನ್ನು ನಿಷೇದಿಸಿ ಒಣದಿನಗಳೆಂದು ಘೋಷಿಸಿ ಆದೇಶಿದ್ದು, ಈ ನಿಮಿತ್ತ ಅಬಕಾರಿ ಇಲಾಖೆಯ ಅಬಕಾರಿ ಇನ್ಸ್ ಪೆಕ್ಟರ್  ಎಸ್.ಎಂ.ಪಾಟೀಲ್, ಸಿಬ್ಬಂದಿಗಳಾದ ವಿನಯ್, ಹನುಮಂತರಾಜು, ರಾಜಶೇಖರ್, ಕೃಷ್ಣ, ಮಂಜುನಾಥ್, ಬಸಪ್ಪ, ಸತೀಶ್, ಮುತ್ತಯ್ಯ ಇವರು ತಾಲೂಕು ವ್ಯಾಪ್ತಿಯ ಎಲ್ಲಾ ವಿಧದ ಮದ್ಯದ ಅಂಗಡಿಗಳನ್ನು ಬಂದ್ ಮಾಡಿಸಿ ಬೀಗಕ್ಕೆ ಬಟ್ಟೆ ಸುತ್ತಿ ಅರಗಿನಿಂದ ಸೀಲ್ ಮಾಡಿದ್ದಾರೆ.

Ramesh Babu

Journalist

Recent Posts

ಶೈಕ್ಷಣಿಕ ಹಾದಿ……..

ಶಿಕ್ಷಣ ಕ್ಷೇತ್ರದ ಬಗ್ಗೆ ಪರೀಕ್ಷೆಗಳ ಫಲಿತಾಂಶಗಳು ಪ್ರಕಟವಾಗುತ್ತಿರುವ ಈ ಸಂದರ್ಭದಲ್ಲಿ....... ಶಿಕ್ಷಣ... ಜ್ಞಾನಾರ್ಜನೆಗಾಗಿಯೇ, ಉದ್ಯೋಗಕ್ಕಾಗಿಯೇ, ಬದುಕಿಗಾಗಿಯೇ, ಸಾಧನೆಗಾಗಿಯೇ, ಪೋಷಕರ ಒತ್ತಾಯಕ್ಕಾಗಿಯೇ,…

1 hour ago

ಕಾರಿನಲ್ಲಿ ಬೆಂಕಿ: ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮ: ಹಲವು ಅನುಮಾನ

ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…

15 hours ago

ಶ್ರೀ ಅಭಯ ಚೌಡೇಶ್ವರಿ ದೇವಿಯ ಜ್ಯೋತಿ, ಪಲ್ಲಕ್ಕಿ ಉತ್ಸವ

ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…

16 hours ago

ಗಂಗಸಂದ್ರದಲ್ಲಿ ಮೇ.6,7ರಂದು ಶ್ರೀ ಅಶ್ವತ್ಥ ಕಟ್ಟೆ ನಾಗ ದೇವರ ಪ್ರತಿಷ್ಠಾಪನಾ ಮಹೋತ್ಸವ

ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…

19 hours ago

ಬುದ್ದ ಹುಣ್ಣಿಮೆಯಲ್ಲಿ ಜ್ಞಾನವನ್ನು ಹುಡುಕುತ್ತಾ……

ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…

1 day ago

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

2 days ago