ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯು ಇಂದಿನಿಂದ (ಮಾ.1)ಆರಂಭಗೊಂಡಿದ್ದು, ನಿಗದಿತ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಆಗಮಿಸಿ, ಸೂಚನಾ ಫಲದತ್ತ ಕಣ್ಣಾಡಿಸಿ ತಮ್ಮ ನೋಂದಣಿ ಸಂಖ್ಯೆ ಇರುವ ಕೊಠಡಿಯನ್ನು ಖಾತರಿಪಡಿಸಿಕೊಂಡು ಪರೀಕ್ಷೆ ಬರೆಯಲು ಪ್ರಾರಂಭಿಸಿದ್ದಾರೆ.
ಜಿಲ್ಲೆಯಲ್ಲಿ ಈ ಬಾರಿ 11341 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ 10757 ಹೊಸ ವಿದ್ಯಾರ್ಥಿಗಳು, 183 ಖಾಸಗಿ ವಿದ್ಯಾರ್ಥಿಗಳು, 401 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 3, ದೇವನಹಳ್ಳಿ ತಾಲ್ಲೂಕಿನಲ್ಲಿ 3, ಹೊಸಕೋಟೆ ತಾಲ್ಲೂಕಿನಲ್ಲಿ 5 ಮತ್ತು ನೆಲಮಂಗಲ ತಾಲ್ಲೂಕಿನಲ್ಲಿ 6. ಒಟ್ಟು 17 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿದೆ.
ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳ ಕೊಠಡಿಗಳಲ್ಲಿ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಿ ವೆಬ್ ಕಾಸ್ಟಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ.
ದೊಡ್ಡಬಳ್ಳಾಪುರದ ಸರ್ಕಾರಿ ಪದವಿಪೂರ್ವ ಕಾಲೇಜು, ಶ್ರೀ ಕೊಂಗಾಡಿಯಪ್ಪ ಪದವಿಪೂರ್ವ ಕಾಲೇಜು, ಶ್ರೀ ದೇವರಾಜ ಅರಸು ಪದವಿಪೂರ್ವ ಕಾಲೇಜುಗಳಲ್ಲಿ ಪರೀಕ್ಷೆ ನಿಗದಿ ಮಾಡಲಾಗಿದೆ. ತಮಗೆ ನಿಗದಿ ಮಾಡಿದ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಆಗಮಿಸಿ ತಮಗೆ ನೀಡಿರುವ ಪರೀಕ್ಷಾ ಕೊಠಡಿಗಳನ್ನು ಖಾತರಿಪಡಿಸಿಕೊಂಡು ಪರೀಕ್ಷೆ ಬರೆಯಲು ಪ್ರಾರಂಭಿಸಿದ್ದಾರೆ.
ಕಾನೂನು ವ್ಯವಸ್ಥೆ :- ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಅಕ್ರಮಗಳನ್ನು ತಡೆಯಲು ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಾಗೃತ ದಳ ವ್ಯವಸ್ಥೆ ಜೊತೆಗೆ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಸುತ್ತಳತೆಯಲ್ಲಿ ನಿಷೇಧಾಜ್ಞೆ, ಪೊಲೀಸ್ ಭದ್ರತಾ ವ್ಯವಸ್ಥೆ, ಜೆರಾಕ್ಸ್ ಅಂಗಡಿಗಳು ಹಾಗೂ ಕಂಪ್ಯೂಟರ್ ಸೆಂಟರ್ಗಳನ್ನು ಮುಚ್ಚಿಸುವುದು ಸೇರಿದಂತೆ ವಿವಿಧ ಕ್ರಮಗಳನ್ನು ಕೈಗೊಂಡಿದೆ.
ಪರೀಕ್ಷಾ ದಿನಗಳು
ಮಾ.1 ಕನ್ನಡ, ಅರೇಬಿಕ್
ಮಾ.3 ಗಣಿತ, ಶಿಕ್ಷಣಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಮಾ.4 ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್.
ಮಾ.5 ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಮಾ.7 ಇತಿಹಾಸ, ಭೌತಶಾಸ್ತ್ರ
ಮಾ.10 ಐಚ್ಫಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ ಗೃಹವಿಜ್ಞಾನ.
ಮಾ.12 ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲಗಣಿತ
ಮಾ.13 ಅರ್ಥಶಾಸ್ತ್ರ
ಮಾ.15 ಇಂಗ್ಲೀಷ್
ಮಾ.17 ಭೂಗೋಳಶಾಸ್ತ್ರ
ಮಾ.18 ಜೀವಶಾಸ್ತ್ರ, ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕವಿಜ್ಞಾನ.
ಮಾ.19 ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್
ಮಾ.20. ಹಿಂದಿ
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…
ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…