ಇಂದಿನಿಂದ (ಮಾ.1) ದ್ವಿತೀಯ ಪಿಯು ಪರೀಕ್ಷೆ ಶುರು:‌ ನಿಗದಿತ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಆರಂಭಿಸಿದ ವಿದ್ಯಾರ್ಥಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯು ಇಂದಿನಿಂದ (ಮಾ.1)ಆರಂಭಗೊಂಡಿದ್ದು, ನಿಗದಿತ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಆಗಮಿಸಿ, ಸೂಚನಾ ಫಲದತ್ತ ಕಣ್ಣಾಡಿಸಿ ತಮ್ಮ ನೋಂದಣಿ ಸಂಖ್ಯೆ ಇರುವ ಕೊಠಡಿಯನ್ನು ಖಾತರಿಪಡಿಸಿಕೊಂಡು ಪರೀಕ್ಷೆ ಬರೆಯಲು ಪ್ರಾರಂಭಿಸಿದ್ದಾರೆ.

ಜಿಲ್ಲೆಯಲ್ಲಿ ಈ ಬಾರಿ 11341 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ 10757 ಹೊಸ ವಿದ್ಯಾರ್ಥಿಗಳು, 183 ಖಾಸಗಿ ವಿದ್ಯಾರ್ಥಿಗಳು, 401 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 3, ದೇವನಹಳ್ಳಿ ತಾಲ್ಲೂಕಿನಲ್ಲಿ 3, ಹೊಸಕೋಟೆ ತಾಲ್ಲೂಕಿನಲ್ಲಿ 5 ಮತ್ತು ನೆಲಮಂಗಲ ತಾಲ್ಲೂಕಿನಲ್ಲಿ 6. ಒಟ್ಟು 17 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿದೆ.

ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳ ಕೊಠಡಿಗಳಲ್ಲಿ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಿ ವೆಬ್ ಕಾಸ್ಟಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ.

ದೊಡ್ಡಬಳ್ಳಾಪುರದ ಸರ್ಕಾರಿ ಪದವಿಪೂರ್ವ ಕಾಲೇಜು,   ಶ್ರೀ ಕೊಂಗಾಡಿಯಪ್ಪ ಪದವಿಪೂರ್ವ ಕಾಲೇಜು, ಶ್ರೀ ದೇವರಾಜ ಅರಸು ಪದವಿಪೂರ್ವ ಕಾಲೇಜುಗಳಲ್ಲಿ ಪರೀಕ್ಷೆ ನಿಗದಿ ಮಾಡಲಾಗಿದೆ. ತಮಗೆ ನಿಗದಿ ಮಾಡಿದ ಪರೀಕ್ಷಾ‌ ಕೇಂದ್ರಗಳಿಗೆ ವಿದ್ಯಾರ್ಥಿಗಳು ಸಮಯಕ್ಕೆ‌ ಸರಿಯಾಗಿ ಆಗಮಿಸಿ ತಮಗೆ ನೀಡಿರುವ ಪರೀಕ್ಷಾ ಕೊಠಡಿಗಳನ್ನು ಖಾತರಿಪಡಿಸಿಕೊಂಡು ಪರೀಕ್ಷೆ ಬರೆಯಲು ಪ್ರಾರಂಭಿಸಿದ್ದಾರೆ.

ಉಚಿತ  ಸಾರಿಗೆ ಸೌಲಭ್ಯ :- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳಲ್ಲಿ   ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮತ್ತು ಬಿ.ಎಂ.ಟಿ.ಸಿ ಬಸ್ ಗಳಲ್ಲಿ  ಉಚಿತವಾಗಿ ಪ್ರಯಾಣ ಮಾಡುವ ಸೌಲಭ್ಯವಿದೆ.

ಕಾನೂನು ವ್ಯವಸ್ಥೆ :- ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಅಕ್ರಮಗಳನ್ನು ತಡೆಯಲು ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಾಗೃತ ದಳ‌ ವ್ಯವಸ್ಥೆ ಜೊತೆಗೆ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಸುತ್ತಳತೆಯಲ್ಲಿ ನಿಷೇಧಾಜ್ಞೆ, ಪೊಲೀಸ್ ಭದ್ರತಾ ವ್ಯವಸ್ಥೆ, ಜೆರಾಕ್ಸ್ ಅಂಗಡಿಗಳು ಹಾಗೂ ಕಂಪ್ಯೂಟರ್ ಸೆಂಟರ್‍ಗಳನ್ನು ಮುಚ್ಚಿಸುವುದು ಸೇರಿದಂತೆ ವಿವಿಧ ಕ್ರಮಗಳನ್ನು ಕೈಗೊಂಡಿದೆ.

ಪರೀಕ್ಷಾ ದಿನಗಳು

ಮಾ.1 ಕನ್ನಡ, ಅರೇಬಿಕ್

ಮಾ.3 ಗಣಿತ, ಶಿಕ್ಷಣಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ

ಮಾ.4 ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್.

ಮಾ.5 ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ

ಮಾ.7 ಇತಿಹಾಸ, ಭೌತಶಾಸ್ತ್ರ

ಮಾ.10 ಐಚ್ಫಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ ಗೃಹವಿಜ್ಞಾನ.

ಮಾ.12 ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲಗಣಿತ

ಮಾ.13 ಅರ್ಥಶಾಸ್ತ್ರ

ಮಾ.15 ಇಂಗ್ಲೀಷ್

ಮಾ.17 ಭೂಗೋಳಶಾಸ್ತ್ರ

ಮಾ.18 ಜೀವಶಾಸ್ತ್ರ, ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ,  ಗಣಕವಿಜ್ಞಾನ.

ಮಾ.19 ಹಿಂದೂಸ್ತಾನಿ ಸಂಗೀತ,  ಮಾಹಿತಿ ತಂತ್ರಜ್ಞಾನ,  ರೀಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್  ವೆಲ್ ನೆಸ್

ಮಾ.20. ಹಿಂದಿ

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

9 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

10 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

19 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

3 days ago