ಇಂದಿನಿಂದ (ಮಾ.1) ದ್ವಿತೀಯ ಪಿಯು ಪರೀಕ್ಷೆ ಶುರು:‌ ನಿಗದಿತ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಆರಂಭಿಸಿದ ವಿದ್ಯಾರ್ಥಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯು ಇಂದಿನಿಂದ (ಮಾ.1)ಆರಂಭಗೊಂಡಿದ್ದು, ನಿಗದಿತ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಆಗಮಿಸಿ, ಸೂಚನಾ ಫಲದತ್ತ ಕಣ್ಣಾಡಿಸಿ ತಮ್ಮ ನೋಂದಣಿ ಸಂಖ್ಯೆ ಇರುವ ಕೊಠಡಿಯನ್ನು ಖಾತರಿಪಡಿಸಿಕೊಂಡು ಪರೀಕ್ಷೆ ಬರೆಯಲು ಪ್ರಾರಂಭಿಸಿದ್ದಾರೆ.

ಜಿಲ್ಲೆಯಲ್ಲಿ ಈ ಬಾರಿ 11341 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ 10757 ಹೊಸ ವಿದ್ಯಾರ್ಥಿಗಳು, 183 ಖಾಸಗಿ ವಿದ್ಯಾರ್ಥಿಗಳು, 401 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 3, ದೇವನಹಳ್ಳಿ ತಾಲ್ಲೂಕಿನಲ್ಲಿ 3, ಹೊಸಕೋಟೆ ತಾಲ್ಲೂಕಿನಲ್ಲಿ 5 ಮತ್ತು ನೆಲಮಂಗಲ ತಾಲ್ಲೂಕಿನಲ್ಲಿ 6. ಒಟ್ಟು 17 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿದೆ.

ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳ ಕೊಠಡಿಗಳಲ್ಲಿ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಿ ವೆಬ್ ಕಾಸ್ಟಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ.

ದೊಡ್ಡಬಳ್ಳಾಪುರದ ಸರ್ಕಾರಿ ಪದವಿಪೂರ್ವ ಕಾಲೇಜು,   ಶ್ರೀ ಕೊಂಗಾಡಿಯಪ್ಪ ಪದವಿಪೂರ್ವ ಕಾಲೇಜು, ಶ್ರೀ ದೇವರಾಜ ಅರಸು ಪದವಿಪೂರ್ವ ಕಾಲೇಜುಗಳಲ್ಲಿ ಪರೀಕ್ಷೆ ನಿಗದಿ ಮಾಡಲಾಗಿದೆ. ತಮಗೆ ನಿಗದಿ ಮಾಡಿದ ಪರೀಕ್ಷಾ‌ ಕೇಂದ್ರಗಳಿಗೆ ವಿದ್ಯಾರ್ಥಿಗಳು ಸಮಯಕ್ಕೆ‌ ಸರಿಯಾಗಿ ಆಗಮಿಸಿ ತಮಗೆ ನೀಡಿರುವ ಪರೀಕ್ಷಾ ಕೊಠಡಿಗಳನ್ನು ಖಾತರಿಪಡಿಸಿಕೊಂಡು ಪರೀಕ್ಷೆ ಬರೆಯಲು ಪ್ರಾರಂಭಿಸಿದ್ದಾರೆ.

ಉಚಿತ  ಸಾರಿಗೆ ಸೌಲಭ್ಯ :- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳಲ್ಲಿ   ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮತ್ತು ಬಿ.ಎಂ.ಟಿ.ಸಿ ಬಸ್ ಗಳಲ್ಲಿ  ಉಚಿತವಾಗಿ ಪ್ರಯಾಣ ಮಾಡುವ ಸೌಲಭ್ಯವಿದೆ.

ಕಾನೂನು ವ್ಯವಸ್ಥೆ :- ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಅಕ್ರಮಗಳನ್ನು ತಡೆಯಲು ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಾಗೃತ ದಳ‌ ವ್ಯವಸ್ಥೆ ಜೊತೆಗೆ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಸುತ್ತಳತೆಯಲ್ಲಿ ನಿಷೇಧಾಜ್ಞೆ, ಪೊಲೀಸ್ ಭದ್ರತಾ ವ್ಯವಸ್ಥೆ, ಜೆರಾಕ್ಸ್ ಅಂಗಡಿಗಳು ಹಾಗೂ ಕಂಪ್ಯೂಟರ್ ಸೆಂಟರ್‍ಗಳನ್ನು ಮುಚ್ಚಿಸುವುದು ಸೇರಿದಂತೆ ವಿವಿಧ ಕ್ರಮಗಳನ್ನು ಕೈಗೊಂಡಿದೆ.

ಪರೀಕ್ಷಾ ದಿನಗಳು

ಮಾ.1 ಕನ್ನಡ, ಅರೇಬಿಕ್

ಮಾ.3 ಗಣಿತ, ಶಿಕ್ಷಣಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ

ಮಾ.4 ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್.

ಮಾ.5 ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ

ಮಾ.7 ಇತಿಹಾಸ, ಭೌತಶಾಸ್ತ್ರ

ಮಾ.10 ಐಚ್ಫಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ ಗೃಹವಿಜ್ಞಾನ.

ಮಾ.12 ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲಗಣಿತ

ಮಾ.13 ಅರ್ಥಶಾಸ್ತ್ರ

ಮಾ.15 ಇಂಗ್ಲೀಷ್

ಮಾ.17 ಭೂಗೋಳಶಾಸ್ತ್ರ

ಮಾ.18 ಜೀವಶಾಸ್ತ್ರ, ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ,  ಗಣಕವಿಜ್ಞಾನ.

ಮಾ.19 ಹಿಂದೂಸ್ತಾನಿ ಸಂಗೀತ,  ಮಾಹಿತಿ ತಂತ್ರಜ್ಞಾನ,  ರೀಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್  ವೆಲ್ ನೆಸ್

ಮಾ.20. ಹಿಂದಿ

Ramesh Babu

Journalist

Recent Posts

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

2 days ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

2 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

2 days ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

3 days ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

3 days ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

3 days ago