2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ 01:45 ಗಂಟೆಯ ವರೆಗೆ ನಡೆಯಲಿದ್ದು ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ.
ಎಸ್.ಎಸ್.ಎಲ್.ಸಿ ಪರೀಕ್ಷೆ-01 ಕ್ಕೆ ನಿಗದಿಪಡಿಸಿರುವ ಪರೀಕ್ಷಾ ಕೇಂದ್ರಗಳು ದೇವನಹಳ್ಳಿ ತಾಲ್ಲೂಕಿನಲ್ಲಿ 13, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 14, ಹೊಸಕೋಟೆ ತಾಲ್ಲೂಕಿನಲ್ಲಿ 12, ನೆಲಮಂಗಲ ತಾಲ್ಲೂಕಿನಲ್ಲಿ 13 ಸೇರಿ ಒಟ್ಟು 52 ಪರೀಕ್ಷಾ ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲಾಗುತ್ತಿದೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಕ್ಕೆ ನೋಂದಣಿ ವಿವರ ನೋಡುವುದಾದರೆ ಗಂಡು ಮಕ್ಕಳ ಸಂಖ್ಯೆ 7070, ಹೆಣ್ಣು ಮಕ್ಕಳ ಸಂಖ್ಯೆ 7244 ಸೇರಿ ಒಟ್ಟು 14,314 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ.
ಅದರಲ್ಲಿ ಮೊದಲ(ಪ್ರಥಮ) ಬಾರಿ ಪರೀಕ್ಷೆ ಬರೆಯುವವರ ಸಂಖ್ಯೆ 13,418, ಪುನರಾವರ್ತಿತ ಅಭ್ಯರ್ಥಿಗಳು 896 ಮಂದಿ ಪರೀಕ್ಷೆಗೆ ಹಾಜರಾಗಲಿದ್ದಾರೆ.
ಪರೀಕ್ಷೆಗಳು ಪಾರದರ್ಶಕತೆ ಹಾಗೂ ಸುವ್ಯವಸ್ಥಿತವಾಗಿ ನಡೆಸುವ ನಿಟ್ಟಿನಲ್ಲಿ ಕರ್ನಾಟಕ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯಿಂದ ಮತ್ತು ಜಿಲ್ಲಾಡಳಿತದಿಂದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಜಿಲ್ಲೆಯ ನಾಲ್ಕು ತಾಲ್ಲೂಕಿನ 52 ಪರೀಕ್ಷಾ ಕೇಂದ್ರಗಳ ಕೊಠಡಿಗಳಲ್ಲಿ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಿ, ವೆಬ್ ಕಾಸ್ಟಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ. ಪರೀಕ್ಷಾ ಕೇಂದ್ರ ಸುತ್ತ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಅದರಂತೆ ಇಂದಿನ ಪರೀಕ್ಷೆ ಎದುರಿಸಲು ವಿದ್ಯಾರ್ಥಿಗಳು ನಿಗದಿ ಪರೀಕ್ಷೆ ಕೇಂದ್ರಗಳಿಗೆ ಆಗಮಿಸಿ ನೋಂದಣಿ ಸಂಖ್ಯೆ, ಪರೀಕ್ಷಾ ಕೊಠಡಿ ಹುಡುಕುತ್ತಿರುವ ದೃಶ್ಯ ಕಂಡುಬಂತು.
ಜೊತೆಗೆ ಬಿಇಒ ಅವರು ಪರೀಕ್ಷೆಗೆ ಬಂದ ವಿದ್ಯಾರ್ಥಿಗಳಿಗೆ ಗುಲಾಬಿ ನೀಡಿ ಸ್ವಾಗತಿಸಿದರು. ದೊಡ್ಡಬಳ್ಳಾಪುರದ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಗುಲಾಬಿ ನೀಡಿ ಸ್ವಾಗತ ಕೋರಿದರು. ನಿರ್ಭೀತಿಯಿಂದ ಪರೀಕ್ಷೆ ಬರೆಯುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…
ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…
ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿರುವ SCSP-TSP ಅನುದಾನವನ್ನು ಸಮರ್ಪಕವಾಗಿ ಬಳಸದ ಇಲಾಖೆಗಳ ಮುಂದಿನ ಹಣಕಾಸು…
ದೊಡ್ಡಬಳ್ಳಾಪುರ: ತಾಲೂಕಿನ ಕೋಡಿಗೆಹಳ್ಳಿಯಲ್ಲಿರುವ ಆತ್ರೇಯ ಆಯುರ್ವೇದ ಕಾಲೇಜು ಆಡಳಿತ ಮಂಡಳಿಯು ಬ್ಯಾಂಕ್ ಸಾಲ ಮರುಪಾವತಿಸದ ಹಿನ್ನೆಲೆಯಲ್ಲಿ ಕಾಲೇಜಿಗೆ ಬೀಗ…
ತಮಿಳುನಾಡಿಗೆ ನಿತ್ಯ 6 ಸಾವಿರ ಕ್ಯೂಸೆಕ್ಸ್ ಕಾವೇರಿ ನೀರು ಹರಿಸುವಂತೆ CWRC ನೀಡಿರುವ ಆದೇಶ ಅಸಂಬದ್ಧವಾಗಿದ್ದು, ಅತ್ಯಂತ ನೋವು ಹಾಗೂ…