ಇಂದಿನಿಂದ ಹಿಂದುಳಿದ ವರ್ಗಗಳ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ: ವಿದ್ಯುತ್ ಮೀಟರ್ ರೀಡರ್‌ಗಳ ಮೂಲಕ ಎಲ್ಲ ಮನೆಗಳ ಜಿಯೋ ಟ್ಯಾಗಿಂಗ್ ಕಾರ್ಯಕ್ಕೆ ಸಹಕರಿಸಿ- ಮಧುಸೂಧನ್ ಆರ್ ನಾಯ್ಕ ಮನವಿ

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಇಂದಿನಿಂದ ಪ್ರಾರಂಭಿಸುತ್ತಿದೆ, ವಿದ್ಯತ್ ಮೀಟರ್ ರೀಡರ್ ಗಳು ಎಲ್ಲ ಮನೆಗಳನ್ನು ಜಿಯೋ ಟ್ಯಾಗಿಂಗ್ ಮಾಡುವ ಕಾರ್ಯ ಪ್ರಾರಂಭಿಸಲಿದ್ದಾರೆ. ಯಾವುದೇ ಮನೆಗಳು ತಪ್ಪಿ ಹೋಗದಂತೆ ಯಶಸ್ವಿಯಾಗಿ ಸಮೀಕ್ಷೆ ಕೈಗೊಳ್ಳಲು ರಾಜ್ಯದ ಜನತೆ ಸಹಕರಿಸಬೇಕು ಎಂದು ಆಯೋಗದ ಅಧ್ಯಕ್ಷ ಮಧುಸೂಧನ್ ಆರ್ ನಾಯ್ಕ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು 90 ದಿನಗಳಲ್ಲಿ ಪೂರ್ಣಗೊಳಿಸುವ ಬದ್ಧತೆಯೊಂದಿಗೆ ಹಮ್ಮಿಕೊಳ್ಳಲಾಗಿದೆ.
ಮೊದಲ ಹಂತದಲ್ಲಿ ಸಮೀಕ್ಷೆಗೆ ಸಂಬಂಧಿಸಿದ ಪೂರ್ವಭಾವಿ ಕೆಲಸಗಳಾಗಿರುವ ಮನೆ ಪಟ್ಟಿ ಮತ್ತು ಅವುಗಳ ನಕ್ಷೆ (ಮ್ಯಾಪಿಂಗ್) ಸಿದ್ಧಪಡಿಸುವ ಕಾರ್ಯವನ್ನು ಒಳಗೊಂಡಿರುತ್ತದೆ. ಅದು ರಾಜ್ಯದಾದ್ಯಂತ ಎಲ್ಲಾ ಮನೆಗಳ ಸಂಪೂರ್ಣ ಎಣಿಕೆ, ಅನುಕ್ರಮ ಸಂಖ್ಯೆಗಳನ್ನು ನೀಡುವುದು ಮತ್ತು ಮ್ಯಾಪಿಂಗ್ ಮಾಡುವ ಕೆಲಸವನ್ನು ಸಾಧ್ಯವಾಗಿಸುತ್ತದೆ. ರಾಜ್ಯದಲ್ಲಿರುವ ಎಲ್ಲಾ ವಾಸದ ಮನೆಗಳಿಗೆ ವಿದ್ಯುತ್ ಸಂಪರ್ಕವಿರುವುದರಿಂದ ವಾಸದ ಮನೆಗಳ ಆರ್. ಆರ್. ಮೀಟರ್ ಆಧಾರದ ಮೇಲೆ ಮನೆಗಳನ್ನು ಗುರುತಿಸಿ ಅಲ್ಲಿರುವ ಜನರ ಸಮೀಕ್ಷೆ ಮಾಡುವುದರಿಂದ ಯಾವುದೇ ಮನೆಗಳು ಸಮೀಕ್ಷಾ ವ್ಯಾಪ್ತಿಯಿಂದ ತಪ್ಪಿ ಹೋಗುವುದಿಲ್ಲ.

ಇದರಿಂದ ಎರಡನೇ ಹಂತದಲ್ಲಿ ಸಮೀಕ್ಷೆಯ ಕಾರ್ಯವನ್ನು ವ್ಯವಸ್ಥಿತವಾಗಿ ಮತ್ತು ವೈಜ್ಞಾನಿಕವಾಗಿ ಕಾರ್ಯಗತಗೊಳಿಸಲು ಅನುಕೂಲವಾಗುತ್ತದೆ. ಎರಡನೇಯ ಹಂತದ ಸಮೀಕ್ಷೆಯ ಕಾರ್ಯವನ್ನು ದಸರಾ ರಜೆಯ ಅವಧಿಯಲ್ಲಿ 22 ನೇ ಸೆಪ್ಟೆಂಬರ್ ನಿಂದ 7 ನೇ ಅಕ್ಟೋಬರ್ 2025 ರವರೆಗೆ ನಡೆಸಲು ಗುರಿ ಹೊಂದಲಾಗಿದೆ. ಈ ಸಮಯದಲ್ಲಿ ಶಾಲಾ ರಜಾದಿನಗಳು ಇರುವುದರಿಂದ ಸಮೀಕ್ಷೆ ಕಾರ್ಯಕ್ಕೆ ಪೂರಕವಾಗುತ್ತದೆ.

ಇ-ಆಡಳಿತ ಮತ್ತು ಇಂಧನ ಇಲಾಖೆಗಳು ವಿದ್ಯುಚ್ಛಕ್ತಿ ಮೀಟರ್ ಸಂಪರ್ಕದ (ಆ‌ರ್.ಆ‌ರ್. ನಂಬರ್) ಆಧಾರದ ಮೇಲೆ ವಿನ್ಯಾಸಗೊಳಿಸಿದ ಈ ನವೀನ, ಕ್ರಿಯಾತ್ಮಕ ಮತ್ತು ವಿಶಿಷ್ಟ ವ್ಯವಸ್ಥೆಯು ಉತ್ತಮವಾಗಿದೆ. ಅದಕ್ಕನುಗುಣವಾಗಿ ಒಂದು ಅಗತ್ಯವಾದ ‘ಆ್ಯಪ್’ ಅಭಿವೃದ್ಧಿಪಡಿಸಲಾಗಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯರು ಸೇರಿದಂತೆ, ಆಯೋಗದ ಇಂಧನ ಇಲಾಖೆಯ, ಇ.ಡಿ.ಸಿ.ಎಸ್ ಸಂಸ್ಥೆಯ ಉತ್ಸಾಹಿ ಹಾಗೂ ಸೃಜನಶೀಲ ಸಲಹಾ ತಂಡದ ಸಹಕಾರದೊಂದಿಗೆ ಈ ಪ್ರಕ್ರಿಯೆಯನ್ನು ವಿನ್ಯಾಸಗೊಳಿಸಲಾಗಿದೆ. ಸಮೀಕ್ಷೆಯ ಕಾರ್ಯವನ್ನು ತ್ವರಿತವಾಗಿ ಪ್ರಾರಂಭಿಸಲು ಸಹಾಯ ಮಾಡುತ್ತದೆ.

ಇದು ರಾಜ್ಯದಾದ್ಯಂತ ಇರುವ ಇಂಧನ ಇಲಾಖೆಯ ಎಲ್ಲ ವಿದ್ಯುತ್ ಸರಬರಾಜು ಕಂಪನಿಗಳ ( ESCOM) ಗಳ ಅಪಾರ ಸಂಖ್ಯೆಯ ‘ಮೀಟರ್ ರೀಡರ್’ (Meter Readers) ಗಳನ್ನು ಒಳಗೊಂಡಿರುತ್ತದೆ. ಕರ್ನಾಟಕ ರಾಜ್ಯವು ಎಲ್ಲಾ ಮನೆಗಳನ್ನು ವಿದ್ಯುದ್ದೀಕರಣ ಗೊಳಿಸುವುದರಲ್ಲಿ ದೇಶದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ ಎಂಬುದು ಹೆಮ್ಮೆಯ ವಿಷಯವಾಗಿರುವುದರಿಂದ ಎಸ್ಕಾಂಗಳ ಮೀಟರ್ ರೀಡರ್ ಗಳು, ಗ್ರಾಹಕರ ಮನೆ ಬಳಕೆ ವಿದ್ಯುತ್ ಸಂಪರ್ಕದ ಮೀಟರ್ ಅನ್ನು ಓದುವುದು ಮತ್ತು ಬಿಲಿಂಗ್ ಮಾಡುವುದರ ಜೊತೆಗೆ ಮನೆಗಳನ್ನು ‘ಜಿಯೋ ಟ್ಯಾಗ್’ ಮಾಡಿ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವ್ಯಾಪ್ತಿಗೆ ಒಳಪಟಿಸುತ್ತಾರೆ.

ಮೀಟರ್ ರೀಡರ್ ಗಳು ಸೆರೆಹಿಡಿದ ಮನೆ ಪಟ್ಟಿ ಡೇಟಾವನ್ನು EDCS (ನಾಗರಿಕ ಸೇವೆಗಳ ಎಲೆಕ್ಟ್ರಾನಿಕ್ ವಿತರಣೆ) ನ ಸರ್ವರ‌್ ಗಳಲ್ಲಿ ಅಪ್‌ಲೋಡ್ ಮಾಡಲಾಗುತ್ತದೆ. ನಂತರ ದ್ವಿತೀಯ ದತ್ತಾಂಶಗಳನ್ನು ಆಧರಿಸಿ, ಮೌಲೀಕರಿಸಿದ ನಂತರ ‘ಮನೆ ಪಟ್ಟಿ’ ಸಮೀಕ್ಷೆಯ ಉದ್ದೇಶಕ್ಕಾಗಿ ‘ಮ್ಯಾಪಿಂಗ್’ ಮಾಡಲಾಗುತ್ತದೆ. ಅಭಿವೃದ್ಧಿಪಡಿಸಲಾದ ಅಪ್ಲಿಕೇಶನ್ ನಲ್ಲಿ ಮನೆಯ ‘ಸ್ಥಳ’ (Location) ವನ್ನು ಸೆರೆಹಿಡಿಯಲಾಗುತ್ತದೆ ಮತ್ತು ಪ್ರತಿ ಮನೆಗಳಿಗೆ ‘ವಿಶಿಷ್ಟ್ಯ (Unique Number) ಸಂಖ್ಯೆಯನ್ನು’ ನೀಡಲಾಗುತ್ತದೆ. [ಅಪಾರ್ಟ್‌ ಮೆಂಟ್ ಗಳು / ವಾಸಸ್ಥಳಗಳ ಕ್ಲಸ್ಟರ್ ಸೇರಿದಂತೆ]

ತಮ್ಮ ‘ಬಿಲ್ಲಿಂಗ್ ಸೈಕಲ್’ನಲ್ಲಿ ಮೀಟ‌ರ್ ರೀಡರ್ ಗಳು ಆಗಸ್ಟ್ 23, 2025 ರಿಂದ ಸದರಿ ಕೆಲಸವನ್ನು ಪ್ರಾರಂಭಿಸುತ್ತಾರೆ ಮತ್ತು ಅಭಿವೃದ್ಧಿ ಪಡಿಸಲಾದ ಆ್ಯಪ್ ನಲ್ಲಿ ದಾಖಲಿಸುತ್ತಾರೆ. ಇದಾದ ನಂತರ ಪ್ರತಿ ಮನೆಗೂ ಸ್ಟಿಕ್ಕರ್ ಅಂಟಿಸಿ ಸಮೀಕ್ಷಾ ದಾರರಿಗೆ ಮನೆಯ ಗುರುತಿಸುವಿಕೆ ಸುಲಭವಾಗುವಂತೆ ಮಾಡುತ್ತಾರೆ.

ಪ್ರಸ್ತಾವಿತ ಸಮೀಕ್ಷೆಯು ಹಿಂದುಳಿದ ವರ್ಗಗಳು ಮತ್ತು ಇತರ ಎಲ್ಲಾ ಜನರ ‘ದತ್ತಾಂಶಗಳನ್ನು ಸೆರೆಹಿಡಿಯುವುದು’ ಮಾತ್ರವಲ್ಲದೆ, ಅಂದಾಜು 7 ಕೋಟಿ ಜನರಿಗೆ ಸರ್ಕಾರಿ ಇಲಾಖೆಗಳಿಂದ ಪ್ರಾರಂಭಿಸಲಾಗಿರುವ ಹಾಗೂ ಮುಂದೆ ಪ್ರಾರಂಭಿಸಲಿರುವ ಎಲ್ಲಾ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಬಳಸಬಹುದಾದ ಉಪಯುಕ್ತ ದತ್ತಾಂಶವಾಗಲಿದೆ.

ಮನೆ ಪಟ್ಟಿ ಕಾರ್ಯಾಚರಣೆಗಳ ಈ ಮೊದಲ ಹಂತವು ತುಂಬಾ ಸವಾಲಿನದ್ದಾಗಿದ್ದರೂ ರಾಜ್ಯದ ಎಲ್ಲಾ ಮನೆಗಳನ್ನು ಒಳಗೊಂಡಂತೆ ವ್ಯವಸ್ಥಿತವಾಗಿ ಸಮೀಕ್ಷೆಯನ್ನು ನಡೆಸುವ ಉದ್ದೇಶಕ್ಕಾಗಿ ಇದು ಬಹಳ ಪ್ರಮುಖ ಕಾರ್ಯವಾಗಿದೆ. ಆದ್ದರಿಂದ, ಸಾರ್ವಜನಿಕರು ಮತ್ತು ಪ್ರತಿಯೊಂದು ಕುಟುಂಬದ ಸದಸ್ಯರು [ವಿಶೇಷವಾಗಿ ಅಪಾರ್ಟೆಂಟ್ ಮತ್ತು ಕ್ಲಸ್ಟರ್ ವಾಸಸ್ಥಳಗಳಲ್ಲಿ ವಾಸಿಸುವವರು] ಮೀಟರ್ ರೀಡರ್ ಗಳಿಗೆ ವಹಿಸಲಾಗಿರುವ ಮನೆ ಪಟ್ಟಿ ಕೆಲಸವನ್ನು ಸುಗಮವಾಗಿ ಪೂರ್ಣಗೊಳಿಸುವ ದಿಸೆಯಲ್ಲಿ ಸಹಕರಿಸಲು ಮತ್ತು ಅನುಕೂಲ ಮಾಡಿಕೊಡಲು ಆಯೋಗ ಮನವಿ ಮಾಡಿದೆ.

Ramesh Babu

Journalist

Recent Posts

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

3 hours ago

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…

7 hours ago

ಉಪರಾಷ್ಟ್ರಪತಿ‌ ಚುನಾವಣೆ: ಎನ್‌ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರಿಗೆ ಭರ್ಜರಿ ಗೆಲುವು

ಮಂಗಳವಾರ ನಡೆದ ಉಪರಾಷ್ಟ್ರಪತಿ‌ ಚುನಾವಣೆಯಲ್ಲಿ ಎನ್‌ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್‌ ಅವರು ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಉಪರಾಷ್ಟ್ರಪತಿ…

18 hours ago

40 ಕೋಟಿ ಮೌಲ್ಯದ 6 ಎಕರೆ ಸರ್ಕಾರಿ ಆಸ್ತಿ ಸರ್ಕಾರದ ವಶ: ಡಿಸಿ ಕ್ರಮಕ್ಕೆ ಪ್ರಬುದ್ಧ ಕರ್ನಾಟಕ ಭೀಮ ಸೇನೆ ಅಭಿನಂದನೆ ಸಲ್ಲಿಕೆ

ದೊಡ್ಡಬಳ್ಳಾಪುರ : 40 ಕೋಟಿ ಮೌಲ್ಯದ ಸರ್ಕಾರಿ ಆಸ್ತಿಯನ್ನ ಸರ್ಕಾರದ ವಶಕ್ಕೆ ಪಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜುರವರ…

19 hours ago

ಸಚಿವ ಕೆ.ಎಚ್.ಮುನಿಯಪ್ಪವರು ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರನ್ನು ಯಾವುದೇ ಕಾರಣಕ್ಕೂ ಕಡೆಗಣನೆ ಮಾಡಿಲ್ಲ- ಯೂತ್ ಕಾಂಗ್ರೆಸ್ ಸ್ಪಷ್ಟನೆ

ಆಹಾರ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪನವರು ಅನುಭವಿ, ಹಿರಿಯ ರಾಜಕಾರಣಿ. ಕೇಂದ್ರ, ರಾಜ್ಯ…

20 hours ago

ಜೈಲಿನಲ್ಲಿ ದರ್ಶನ್ ಗೆ ನರಕಯಾತನೆ: “ನಾನು ಬಿಸಿಲು ನೋಡಿ 30 ದಿನಗಳಾಗಿವೆ- ಕೈ ಎಲ್ಲಾ ಫಂಗಸ್ ಬಂದಿದೆ- ನನಗೆ ಪಾಯಿಸನ್ ಕೊಡಿ”- ಜಡ್ಜ್ ಬಳಿ ದರ್ಶನ್ ಮನವಿ

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ನಟ ದರ್ಶನ್ ಗೆ ಈ ಬಾರಿ ಜೈಲಿನಲ್ಲಿ ಯಾವುದೇ ಸೌಕರ್ಯಗಳು…

1 day ago