ಇಂದಿನಿಂದ14ನೇ ಆವೃತ್ತಿಯ ಏರ್ ಶೋ; ಏರ್ ಶೋ ಉದ್ಘಾಟನೆಗೆ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಬೆಂಗಳೂರಿನಲ್ಲಿ ನಡೆಯುವ 14 ನೇ ಆವೃತ್ತಿ ಯ ಏರೋ ಇಂಡಿಯಾ ಶೋ ಉದ್ಘಾಟನೆಗೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ.

ಪ್ರಧಾನಿ ಮೋದಿಯವರನ್ನ ಎಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ಈ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಚಿವರು ಸೇರಿದಂತೆ ಇತರರು ಉಪಸ್ಥಿತರಿದ್ದರು.

ಒಟ್ಟು 98 ದೇಶಗಳ 811 ಪ್ರದರ್ಶಕರು ಭಾಗವಹಿಸಲಿದ್ದಾರೆ. 75 ಸಾವಿರ ಕೋಟಿ ರೂ. ವಹಿವಾಟಿನ 251 ರಕ್ಷಣಾ ಉಪಕರಣಗಳು, ಯುದ್ಧ ವಿಮಾನಗಳು ಮತ್ತು ಹೆಲಿಕಾಪ್ಟರ್‌ಗಳಿಗೆ ಸಂಬಂಧಿಸಿದ ಒಪ್ಪಂದಗಳಿಗೆ ವಿವಿಧ ಕಂಪನಿಗಳು ಸಹಿ ಹಾಕುವ ನಿರೀಕ್ಷೆ ಇದೆ.

ಫೆ.13ರಿಂದ 17ರವರೆಗೆ ಯಲಹಂಕ ವಾಯುನೆಲೆಯ ಒಟ್ಟು 35 ಸಾವಿರ ಚದರ ಮೀಟರ್ ಪ್ರದೇಶದಲ್ಲಿ ನಡೆಯಲಿರುವ ‘ಏರೋ ಇಂಡಿಯಾ–2023’ ನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಬೆಳಿಗ್ಗೆ 9.30ಕ್ಕೆ ಉದ್ಘಾಟಿಸಲಿದ್ದಾರೆ.

1996ರಲ್ಲಿ ಆರಂಭವಾದ ವೈಮಾನಿಕ ಕ್ಷೇತ್ರದ ಶಕ್ತಿ ಪ್ರದರ್ಶನವು ದ್ವೈವಾರ್ಷಿಕವಾಗಿ ನಡೆಯುತ್ತಿದ್ದು, ಇದು 14ನೇ ಆವೃತ್ತಿ. ಏಷ್ಯಾದಲ್ಲೇ ಅತಿ ದೊಡ್ಡ ರಕ್ಷಣಾ ಮತ್ತು ವೈಮಾನಿಕ ಪ್ರದರ್ಶನ ಇದಾಗಿದ್ದು, ದೇಶದ ಯುದ್ಧ ವಿಮಾನಗಳು, ಹೆಲಿಕಾಪ್ಟರ್‌ ಗಳು, ರಕ್ಷಣಾ ಉಪಕರಣ‌ಗಳು ಮತ್ತು ವೈಮಾನಿಕ ಕ್ಷೇತ್ರದ ಸಾಧನೆಗಳನ್ನು ಬಿಂಬಿಸಲಿದೆ. ವೈಮಾನಿಕ ಕ್ಷೇತ್ರದ ಉದ್ಯಮದ ಸಾಮರ್ಥ್ಯಗಳು, ಉತ್ಪನ್ನಗಳು ಮತ್ತು ಸೇವೆಗಳ ಪ್ರದರ್ಶನಕ್ಕೆ ಇದು ಅತಿ ದೊಡ್ಡ ವೇದಿಕೆಯಾಗಿದೆ.

32 ದೇಶಗಳ ರಕ್ಷಣಾ ಸಚಿವರು, ಜಾಗತಿಕ ಮತ್ತು ಭಾರತದ 73 ಪ್ರಮುಖ ಕಂಪನಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು (ಸಿಇಒ) ಭಾಗವಹಿಸಲಿದ್ದು, ಮಹತ್ವದ ಚರ್ಚೆಗಳು ಮತ್ತು ಒಪ್ಪಂದಗಳು ನಡೆಯುವ ಸಾಧ್ಯತೆ ಇದೆ.

Ramesh Babu

Journalist

Recent Posts

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

4 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

4 hours ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

5 hours ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

12 hours ago

ಲಾರಿ-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…

13 hours ago

ಹಸಿವಿನ ಔಷಧಿ ಮತ್ತು ಮತದಾನ…..

ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…

16 hours ago