ಇಂದಿನಿಂದ14ನೇ ಆವೃತ್ತಿಯ ಏರ್ ಶೋ; ಏರ್ ಶೋ ಉದ್ಘಾಟನೆಗೆ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಬೆಂಗಳೂರಿನಲ್ಲಿ ನಡೆಯುವ 14 ನೇ ಆವೃತ್ತಿ ಯ ಏರೋ ಇಂಡಿಯಾ ಶೋ ಉದ್ಘಾಟನೆಗೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ.

ಪ್ರಧಾನಿ ಮೋದಿಯವರನ್ನ ಎಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ಈ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಚಿವರು ಸೇರಿದಂತೆ ಇತರರು ಉಪಸ್ಥಿತರಿದ್ದರು.

ಒಟ್ಟು 98 ದೇಶಗಳ 811 ಪ್ರದರ್ಶಕರು ಭಾಗವಹಿಸಲಿದ್ದಾರೆ. 75 ಸಾವಿರ ಕೋಟಿ ರೂ. ವಹಿವಾಟಿನ 251 ರಕ್ಷಣಾ ಉಪಕರಣಗಳು, ಯುದ್ಧ ವಿಮಾನಗಳು ಮತ್ತು ಹೆಲಿಕಾಪ್ಟರ್‌ಗಳಿಗೆ ಸಂಬಂಧಿಸಿದ ಒಪ್ಪಂದಗಳಿಗೆ ವಿವಿಧ ಕಂಪನಿಗಳು ಸಹಿ ಹಾಕುವ ನಿರೀಕ್ಷೆ ಇದೆ.

ಫೆ.13ರಿಂದ 17ರವರೆಗೆ ಯಲಹಂಕ ವಾಯುನೆಲೆಯ ಒಟ್ಟು 35 ಸಾವಿರ ಚದರ ಮೀಟರ್ ಪ್ರದೇಶದಲ್ಲಿ ನಡೆಯಲಿರುವ ‘ಏರೋ ಇಂಡಿಯಾ–2023’ ನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಬೆಳಿಗ್ಗೆ 9.30ಕ್ಕೆ ಉದ್ಘಾಟಿಸಲಿದ್ದಾರೆ.

1996ರಲ್ಲಿ ಆರಂಭವಾದ ವೈಮಾನಿಕ ಕ್ಷೇತ್ರದ ಶಕ್ತಿ ಪ್ರದರ್ಶನವು ದ್ವೈವಾರ್ಷಿಕವಾಗಿ ನಡೆಯುತ್ತಿದ್ದು, ಇದು 14ನೇ ಆವೃತ್ತಿ. ಏಷ್ಯಾದಲ್ಲೇ ಅತಿ ದೊಡ್ಡ ರಕ್ಷಣಾ ಮತ್ತು ವೈಮಾನಿಕ ಪ್ರದರ್ಶನ ಇದಾಗಿದ್ದು, ದೇಶದ ಯುದ್ಧ ವಿಮಾನಗಳು, ಹೆಲಿಕಾಪ್ಟರ್‌ ಗಳು, ರಕ್ಷಣಾ ಉಪಕರಣ‌ಗಳು ಮತ್ತು ವೈಮಾನಿಕ ಕ್ಷೇತ್ರದ ಸಾಧನೆಗಳನ್ನು ಬಿಂಬಿಸಲಿದೆ. ವೈಮಾನಿಕ ಕ್ಷೇತ್ರದ ಉದ್ಯಮದ ಸಾಮರ್ಥ್ಯಗಳು, ಉತ್ಪನ್ನಗಳು ಮತ್ತು ಸೇವೆಗಳ ಪ್ರದರ್ಶನಕ್ಕೆ ಇದು ಅತಿ ದೊಡ್ಡ ವೇದಿಕೆಯಾಗಿದೆ.

32 ದೇಶಗಳ ರಕ್ಷಣಾ ಸಚಿವರು, ಜಾಗತಿಕ ಮತ್ತು ಭಾರತದ 73 ಪ್ರಮುಖ ಕಂಪನಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು (ಸಿಇಒ) ಭಾಗವಹಿಸಲಿದ್ದು, ಮಹತ್ವದ ಚರ್ಚೆಗಳು ಮತ್ತು ಒಪ್ಪಂದಗಳು ನಡೆಯುವ ಸಾಧ್ಯತೆ ಇದೆ.

Ramesh Babu

Journalist

Recent Posts

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

3 hours ago

ಗಂಟಿಗಾನಹಳ್ಳಿಯಲ್ಲಿ ಮೇ.3ರಂದು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ: ರಂಗೋಲಿ ಸ್ಪರ್ಧೆ, ವಾಲಿಬಾಲ್ ಪಂದ್ಯಾವಳಿ, ಆರ್ಕೆಸ್ಟ್ರಾ ಆಯೋಜನೆ

ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…

4 hours ago

ಗೋಡೆ ಕೊರೆದು ಕೋಟ್ಯಂತರ ರೂ. ಮೌಲ್ಯದ ಬೆಳ್ಳಿ ಕಳವು

ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…

6 hours ago

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

24 hours ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

1 day ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

1 day ago