ಇಂದಿನಿಂದ14ನೇ ಆವೃತ್ತಿಯ ಏರ್ ಶೋ; ಏರ್ ಶೋ ಉದ್ಘಾಟನೆಗೆ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಬೆಂಗಳೂರಿನಲ್ಲಿ ನಡೆಯುವ 14 ನೇ ಆವೃತ್ತಿ ಯ ಏರೋ ಇಂಡಿಯಾ ಶೋ ಉದ್ಘಾಟನೆಗೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ.

ಪ್ರಧಾನಿ ಮೋದಿಯವರನ್ನ ಎಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ಈ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಚಿವರು ಸೇರಿದಂತೆ ಇತರರು ಉಪಸ್ಥಿತರಿದ್ದರು.

ಒಟ್ಟು 98 ದೇಶಗಳ 811 ಪ್ರದರ್ಶಕರು ಭಾಗವಹಿಸಲಿದ್ದಾರೆ. 75 ಸಾವಿರ ಕೋಟಿ ರೂ. ವಹಿವಾಟಿನ 251 ರಕ್ಷಣಾ ಉಪಕರಣಗಳು, ಯುದ್ಧ ವಿಮಾನಗಳು ಮತ್ತು ಹೆಲಿಕಾಪ್ಟರ್‌ಗಳಿಗೆ ಸಂಬಂಧಿಸಿದ ಒಪ್ಪಂದಗಳಿಗೆ ವಿವಿಧ ಕಂಪನಿಗಳು ಸಹಿ ಹಾಕುವ ನಿರೀಕ್ಷೆ ಇದೆ.

ಫೆ.13ರಿಂದ 17ರವರೆಗೆ ಯಲಹಂಕ ವಾಯುನೆಲೆಯ ಒಟ್ಟು 35 ಸಾವಿರ ಚದರ ಮೀಟರ್ ಪ್ರದೇಶದಲ್ಲಿ ನಡೆಯಲಿರುವ ‘ಏರೋ ಇಂಡಿಯಾ–2023’ ನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಬೆಳಿಗ್ಗೆ 9.30ಕ್ಕೆ ಉದ್ಘಾಟಿಸಲಿದ್ದಾರೆ.

1996ರಲ್ಲಿ ಆರಂಭವಾದ ವೈಮಾನಿಕ ಕ್ಷೇತ್ರದ ಶಕ್ತಿ ಪ್ರದರ್ಶನವು ದ್ವೈವಾರ್ಷಿಕವಾಗಿ ನಡೆಯುತ್ತಿದ್ದು, ಇದು 14ನೇ ಆವೃತ್ತಿ. ಏಷ್ಯಾದಲ್ಲೇ ಅತಿ ದೊಡ್ಡ ರಕ್ಷಣಾ ಮತ್ತು ವೈಮಾನಿಕ ಪ್ರದರ್ಶನ ಇದಾಗಿದ್ದು, ದೇಶದ ಯುದ್ಧ ವಿಮಾನಗಳು, ಹೆಲಿಕಾಪ್ಟರ್‌ ಗಳು, ರಕ್ಷಣಾ ಉಪಕರಣ‌ಗಳು ಮತ್ತು ವೈಮಾನಿಕ ಕ್ಷೇತ್ರದ ಸಾಧನೆಗಳನ್ನು ಬಿಂಬಿಸಲಿದೆ. ವೈಮಾನಿಕ ಕ್ಷೇತ್ರದ ಉದ್ಯಮದ ಸಾಮರ್ಥ್ಯಗಳು, ಉತ್ಪನ್ನಗಳು ಮತ್ತು ಸೇವೆಗಳ ಪ್ರದರ್ಶನಕ್ಕೆ ಇದು ಅತಿ ದೊಡ್ಡ ವೇದಿಕೆಯಾಗಿದೆ.

32 ದೇಶಗಳ ರಕ್ಷಣಾ ಸಚಿವರು, ಜಾಗತಿಕ ಮತ್ತು ಭಾರತದ 73 ಪ್ರಮುಖ ಕಂಪನಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು (ಸಿಇಒ) ಭಾಗವಹಿಸಲಿದ್ದು, ಮಹತ್ವದ ಚರ್ಚೆಗಳು ಮತ್ತು ಒಪ್ಪಂದಗಳು ನಡೆಯುವ ಸಾಧ್ಯತೆ ಇದೆ.

Ramesh Babu

Journalist

Recent Posts

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

4 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

11 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

12 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 days ago