ಇಂದಿನಿಂದ14ನೇ ಆವೃತ್ತಿಯ ಏರ್ ಶೋ; ಏರ್ ಶೋ ಉದ್ಘಾಟನೆಗೆ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಬೆಂಗಳೂರಿನಲ್ಲಿ ನಡೆಯುವ 14 ನೇ ಆವೃತ್ತಿ ಯ ಏರೋ ಇಂಡಿಯಾ ಶೋ ಉದ್ಘಾಟನೆಗೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ.

ಪ್ರಧಾನಿ ಮೋದಿಯವರನ್ನ ಎಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ಈ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಚಿವರು ಸೇರಿದಂತೆ ಇತರರು ಉಪಸ್ಥಿತರಿದ್ದರು.

ಒಟ್ಟು 98 ದೇಶಗಳ 811 ಪ್ರದರ್ಶಕರು ಭಾಗವಹಿಸಲಿದ್ದಾರೆ. 75 ಸಾವಿರ ಕೋಟಿ ರೂ. ವಹಿವಾಟಿನ 251 ರಕ್ಷಣಾ ಉಪಕರಣಗಳು, ಯುದ್ಧ ವಿಮಾನಗಳು ಮತ್ತು ಹೆಲಿಕಾಪ್ಟರ್‌ಗಳಿಗೆ ಸಂಬಂಧಿಸಿದ ಒಪ್ಪಂದಗಳಿಗೆ ವಿವಿಧ ಕಂಪನಿಗಳು ಸಹಿ ಹಾಕುವ ನಿರೀಕ್ಷೆ ಇದೆ.

ಫೆ.13ರಿಂದ 17ರವರೆಗೆ ಯಲಹಂಕ ವಾಯುನೆಲೆಯ ಒಟ್ಟು 35 ಸಾವಿರ ಚದರ ಮೀಟರ್ ಪ್ರದೇಶದಲ್ಲಿ ನಡೆಯಲಿರುವ ‘ಏರೋ ಇಂಡಿಯಾ–2023’ ನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಬೆಳಿಗ್ಗೆ 9.30ಕ್ಕೆ ಉದ್ಘಾಟಿಸಲಿದ್ದಾರೆ.

1996ರಲ್ಲಿ ಆರಂಭವಾದ ವೈಮಾನಿಕ ಕ್ಷೇತ್ರದ ಶಕ್ತಿ ಪ್ರದರ್ಶನವು ದ್ವೈವಾರ್ಷಿಕವಾಗಿ ನಡೆಯುತ್ತಿದ್ದು, ಇದು 14ನೇ ಆವೃತ್ತಿ. ಏಷ್ಯಾದಲ್ಲೇ ಅತಿ ದೊಡ್ಡ ರಕ್ಷಣಾ ಮತ್ತು ವೈಮಾನಿಕ ಪ್ರದರ್ಶನ ಇದಾಗಿದ್ದು, ದೇಶದ ಯುದ್ಧ ವಿಮಾನಗಳು, ಹೆಲಿಕಾಪ್ಟರ್‌ ಗಳು, ರಕ್ಷಣಾ ಉಪಕರಣ‌ಗಳು ಮತ್ತು ವೈಮಾನಿಕ ಕ್ಷೇತ್ರದ ಸಾಧನೆಗಳನ್ನು ಬಿಂಬಿಸಲಿದೆ. ವೈಮಾನಿಕ ಕ್ಷೇತ್ರದ ಉದ್ಯಮದ ಸಾಮರ್ಥ್ಯಗಳು, ಉತ್ಪನ್ನಗಳು ಮತ್ತು ಸೇವೆಗಳ ಪ್ರದರ್ಶನಕ್ಕೆ ಇದು ಅತಿ ದೊಡ್ಡ ವೇದಿಕೆಯಾಗಿದೆ.

32 ದೇಶಗಳ ರಕ್ಷಣಾ ಸಚಿವರು, ಜಾಗತಿಕ ಮತ್ತು ಭಾರತದ 73 ಪ್ರಮುಖ ಕಂಪನಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು (ಸಿಇಒ) ಭಾಗವಹಿಸಲಿದ್ದು, ಮಹತ್ವದ ಚರ್ಚೆಗಳು ಮತ್ತು ಒಪ್ಪಂದಗಳು ನಡೆಯುವ ಸಾಧ್ಯತೆ ಇದೆ.

Ramesh Babu

Journalist

Recent Posts

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

1 hour ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

20 hours ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 days ago