ಇಂದಿನಿಂದ14ನೇ ಆವೃತ್ತಿಯ ಏರ್ ಶೋ; ಏರ್ ಶೋ ಉದ್ಘಾಟನೆಗೆ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಬೆಂಗಳೂರಿನಲ್ಲಿ ನಡೆಯುವ 14 ನೇ ಆವೃತ್ತಿ ಯ ಏರೋ ಇಂಡಿಯಾ ಶೋ ಉದ್ಘಾಟನೆಗೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ.

ಪ್ರಧಾನಿ ಮೋದಿಯವರನ್ನ ಎಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ಈ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಚಿವರು ಸೇರಿದಂತೆ ಇತರರು ಉಪಸ್ಥಿತರಿದ್ದರು.

ಒಟ್ಟು 98 ದೇಶಗಳ 811 ಪ್ರದರ್ಶಕರು ಭಾಗವಹಿಸಲಿದ್ದಾರೆ. 75 ಸಾವಿರ ಕೋಟಿ ರೂ. ವಹಿವಾಟಿನ 251 ರಕ್ಷಣಾ ಉಪಕರಣಗಳು, ಯುದ್ಧ ವಿಮಾನಗಳು ಮತ್ತು ಹೆಲಿಕಾಪ್ಟರ್‌ಗಳಿಗೆ ಸಂಬಂಧಿಸಿದ ಒಪ್ಪಂದಗಳಿಗೆ ವಿವಿಧ ಕಂಪನಿಗಳು ಸಹಿ ಹಾಕುವ ನಿರೀಕ್ಷೆ ಇದೆ.

ಫೆ.13ರಿಂದ 17ರವರೆಗೆ ಯಲಹಂಕ ವಾಯುನೆಲೆಯ ಒಟ್ಟು 35 ಸಾವಿರ ಚದರ ಮೀಟರ್ ಪ್ರದೇಶದಲ್ಲಿ ನಡೆಯಲಿರುವ ‘ಏರೋ ಇಂಡಿಯಾ–2023’ ನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಬೆಳಿಗ್ಗೆ 9.30ಕ್ಕೆ ಉದ್ಘಾಟಿಸಲಿದ್ದಾರೆ.

1996ರಲ್ಲಿ ಆರಂಭವಾದ ವೈಮಾನಿಕ ಕ್ಷೇತ್ರದ ಶಕ್ತಿ ಪ್ರದರ್ಶನವು ದ್ವೈವಾರ್ಷಿಕವಾಗಿ ನಡೆಯುತ್ತಿದ್ದು, ಇದು 14ನೇ ಆವೃತ್ತಿ. ಏಷ್ಯಾದಲ್ಲೇ ಅತಿ ದೊಡ್ಡ ರಕ್ಷಣಾ ಮತ್ತು ವೈಮಾನಿಕ ಪ್ರದರ್ಶನ ಇದಾಗಿದ್ದು, ದೇಶದ ಯುದ್ಧ ವಿಮಾನಗಳು, ಹೆಲಿಕಾಪ್ಟರ್‌ ಗಳು, ರಕ್ಷಣಾ ಉಪಕರಣ‌ಗಳು ಮತ್ತು ವೈಮಾನಿಕ ಕ್ಷೇತ್ರದ ಸಾಧನೆಗಳನ್ನು ಬಿಂಬಿಸಲಿದೆ. ವೈಮಾನಿಕ ಕ್ಷೇತ್ರದ ಉದ್ಯಮದ ಸಾಮರ್ಥ್ಯಗಳು, ಉತ್ಪನ್ನಗಳು ಮತ್ತು ಸೇವೆಗಳ ಪ್ರದರ್ಶನಕ್ಕೆ ಇದು ಅತಿ ದೊಡ್ಡ ವೇದಿಕೆಯಾಗಿದೆ.

32 ದೇಶಗಳ ರಕ್ಷಣಾ ಸಚಿವರು, ಜಾಗತಿಕ ಮತ್ತು ಭಾರತದ 73 ಪ್ರಮುಖ ಕಂಪನಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು (ಸಿಇಒ) ಭಾಗವಹಿಸಲಿದ್ದು, ಮಹತ್ವದ ಚರ್ಚೆಗಳು ಮತ್ತು ಒಪ್ಪಂದಗಳು ನಡೆಯುವ ಸಾಧ್ಯತೆ ಇದೆ.

Ramesh Babu

Journalist

Recent Posts

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

1 hour ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

9 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

10 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

22 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

23 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

23 hours ago