ಇಂದಿನಿಂದ14ನೇ ಆವೃತ್ತಿಯ ಏರ್ ಶೋ; ಏರ್ ಶೋ ಉದ್ಘಾಟನೆಗೆ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಬೆಂಗಳೂರಿನಲ್ಲಿ ನಡೆಯುವ 14 ನೇ ಆವೃತ್ತಿ ಯ ಏರೋ ಇಂಡಿಯಾ ಶೋ ಉದ್ಘಾಟನೆಗೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ.

ಪ್ರಧಾನಿ ಮೋದಿಯವರನ್ನ ಎಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ಈ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಚಿವರು ಸೇರಿದಂತೆ ಇತರರು ಉಪಸ್ಥಿತರಿದ್ದರು.

ಒಟ್ಟು 98 ದೇಶಗಳ 811 ಪ್ರದರ್ಶಕರು ಭಾಗವಹಿಸಲಿದ್ದಾರೆ. 75 ಸಾವಿರ ಕೋಟಿ ರೂ. ವಹಿವಾಟಿನ 251 ರಕ್ಷಣಾ ಉಪಕರಣಗಳು, ಯುದ್ಧ ವಿಮಾನಗಳು ಮತ್ತು ಹೆಲಿಕಾಪ್ಟರ್‌ಗಳಿಗೆ ಸಂಬಂಧಿಸಿದ ಒಪ್ಪಂದಗಳಿಗೆ ವಿವಿಧ ಕಂಪನಿಗಳು ಸಹಿ ಹಾಕುವ ನಿರೀಕ್ಷೆ ಇದೆ.

ಫೆ.13ರಿಂದ 17ರವರೆಗೆ ಯಲಹಂಕ ವಾಯುನೆಲೆಯ ಒಟ್ಟು 35 ಸಾವಿರ ಚದರ ಮೀಟರ್ ಪ್ರದೇಶದಲ್ಲಿ ನಡೆಯಲಿರುವ ‘ಏರೋ ಇಂಡಿಯಾ–2023’ ನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಬೆಳಿಗ್ಗೆ 9.30ಕ್ಕೆ ಉದ್ಘಾಟಿಸಲಿದ್ದಾರೆ.

1996ರಲ್ಲಿ ಆರಂಭವಾದ ವೈಮಾನಿಕ ಕ್ಷೇತ್ರದ ಶಕ್ತಿ ಪ್ರದರ್ಶನವು ದ್ವೈವಾರ್ಷಿಕವಾಗಿ ನಡೆಯುತ್ತಿದ್ದು, ಇದು 14ನೇ ಆವೃತ್ತಿ. ಏಷ್ಯಾದಲ್ಲೇ ಅತಿ ದೊಡ್ಡ ರಕ್ಷಣಾ ಮತ್ತು ವೈಮಾನಿಕ ಪ್ರದರ್ಶನ ಇದಾಗಿದ್ದು, ದೇಶದ ಯುದ್ಧ ವಿಮಾನಗಳು, ಹೆಲಿಕಾಪ್ಟರ್‌ ಗಳು, ರಕ್ಷಣಾ ಉಪಕರಣ‌ಗಳು ಮತ್ತು ವೈಮಾನಿಕ ಕ್ಷೇತ್ರದ ಸಾಧನೆಗಳನ್ನು ಬಿಂಬಿಸಲಿದೆ. ವೈಮಾನಿಕ ಕ್ಷೇತ್ರದ ಉದ್ಯಮದ ಸಾಮರ್ಥ್ಯಗಳು, ಉತ್ಪನ್ನಗಳು ಮತ್ತು ಸೇವೆಗಳ ಪ್ರದರ್ಶನಕ್ಕೆ ಇದು ಅತಿ ದೊಡ್ಡ ವೇದಿಕೆಯಾಗಿದೆ.

32 ದೇಶಗಳ ರಕ್ಷಣಾ ಸಚಿವರು, ಜಾಗತಿಕ ಮತ್ತು ಭಾರತದ 73 ಪ್ರಮುಖ ಕಂಪನಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು (ಸಿಇಒ) ಭಾಗವಹಿಸಲಿದ್ದು, ಮಹತ್ವದ ಚರ್ಚೆಗಳು ಮತ್ತು ಒಪ್ಪಂದಗಳು ನಡೆಯುವ ಸಾಧ್ಯತೆ ಇದೆ.

Ramesh Babu

Journalist

Recent Posts

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

1 hour ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

2 hours ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

4 hours ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

4 hours ago

ಯುವತಿಯ ಕುರಿತು ಅಪಪ್ರಚಾರದ ದ್ವೇಷ: ರೌಡಿ ಶೀಟರ್ ಖಲೀಮ್‌ನ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕುಟುಂಬದ ಬಗ್ಗೆ ಅವಹೇಳನ ಆರೋಪ: 7 ಮಂದಿಯ ತಂಡದ ಸಂಚು, 5 ಆರೋಪಿಗಳ ಬಂಧನ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…

8 hours ago

ನಗರಸಭೆ ವ್ಯಾಪ್ತಿಯ ವಾರ್ಡ್‌ಗಳಲ್ಲಿ ಸೌಕರ್ಯ ಕೊರತೆ: ಜನ ಹೈರಾಣ

ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…

10 hours ago