ಇಂದಿನ ಶಿಕ್ಷಣವೆಂಬುದು ಅಂಕಗಳು ಮತ್ತು ಕೆಲಸ ಪಡೆಯಲು ಮಾತ್ರ ಸೀಮಿತವಾಗಬಾರದು-ಸಚಿವ ಕೆ.ಎಚ್.ಮುನಿಯಪ್ಪ

ದೇವನಹಳ್ಳಿ: ಇಂದಿನ ಮಕ್ಕಳು ಗಾಂಧೀ,ಬುದ್ದ ಬಸವಣ್ಣ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗಿದ್ದಂತಹ ಸಾಮಾಜಿಕ ಕಳಕಳಿ ,ಹೋರಾಟ ಮತ್ತು ಉತ್ತಮ ನಾಯಕತ್ವ ರೂಪಿಸಿಕೊಳ್ಳಬೇಕು ,ಶಿಕ್ಷಣವೆಂಬುದು ಹೆಚ್ಚು ಅಂಕಗಳು ಮತ್ತು ಕೆಲಸ ಪಡೆಯಲು ಮಾತ್ರ ಸೀಮಿತವಾಗದೇ ಒಳ್ಳೆಯ ಸಂಸ್ಕಾರ ,ಗುರು ಹಿರಿಯರನ್ನು ಗೌರವಿಸುವ ಗುಣ ,ಧರ್ಮ ಜಾತಿಗಳ ಕಟ್ಟುಪಾಡುಗಳಿಗೆ ಒಳಪಡದೇ ವಿಶಾಲ ಮನೋಭಾವದ ಯೋಚನೆಯನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ದೇವನಹಳ್ಳಿ ತಾಲೂಕಿನ ಚನ್ನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಚಾಣಕ್ಯ ವಿಶ್ವವಿದ್ಯಾನಿಲಯ ಸಭಾಂಗಣದಲ್ಲಿ” ದೇವನಹಳ್ಳಿ ತಾಲೂಕಿನ ಎಸೆಸೆಲ್ಸಿ ಮತ್ತು ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಆಯ್ದಾ ಐದು ಸರ್ಕಾರಿ ಶಾಲೆಗಳಿಗೆ ಉಚಿತ ಕಂಪ್ಯೂಟರ್ ವಿತರಣಾ ಸಮಾರಂಭ”ವನ್ನು ಉದ್ಘಾಟಿಸಿ ಮಾತನಾಡಿದರು.

ಚಾಣಕ್ಯದಂತಹ ಮಹಾನ್ ಸಾಮಾಜಿಕ ಗುರುಗಳ ಹಾದಿಯಲ್ಲಿ ಸಮಾಜವನ್ನು ಸುಧಾರಣೆಗೆ ಹಲವಾರು ಯೋಜನೆಗಳನ್ನು ರೂಪಿಸುತ್ತಿರುವ ಚಾಣಕ್ಯ ವಿಶ್ವವಿದ್ಯಾಲಯದ ಕುರಿತು ಪ್ರಶಂಸೆಯನ್ನು ವ್ಯಕ್ತಪಡಿಸಿದರು,ಭಾರತ ದೇಶದ ಕಲ್ಯಾಣಕ್ಕೆ ಸತ್ಪ್ರಜೆಗಳ ಸೃಷ್ಟಿಸುವ ಇಂತಹ ಶಾಲೆಗಳ ಸಮಾಜಕ್ಕೆ ಅಗತ್ಯವಿದೆ ಎಂದರು.

ಚಾಣಕ್ಯ ವಿಶ್ವವಿದ್ಯಾಲಯ ಸಂಸ್ಥಾಪಕ ಕುಲಪತಿಗಳು ಎಂ.ಕೆ.ಶ್ರೀಧರ್ ಮಾತನಾಡಿ ಕಾರ್ಯಕ್ರಮದಲ್ಲಿ ನೆರೆದಿರುವ ಪ್ರತಿಯೊಬ್ಬರಿಗೂ ದಸರಾ ಹಬ್ಬದ ಶುಭಾಶಯಗಳನ್ನು ತಿಳಿಸಿ,ನಮ್ಮ ವಿದ್ಯಾರ್ಥಿಗಳಲ್ಲಿ ಸಮಗ್ರ ನಾಯಕತ್ವ ಕಲಿಸುವುದು ನಮ್ಮ ಸಂಸ್ಥೆಯ ಉದ್ದೇಶ ಹಾಗೂ ವಿಶ್ವವಿದ್ಯಾಲಯಕ್ಕೆ ಸಹಕರಿಸುತ್ತಿರುವ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಕೃತಜ್ಞತೆ ಹೇಳಿದರು.

ಸರ್ಕಾರಿ ಶಾಲೆಗಳು ಎಷ್ಟೇ ಟೀಕೆಗಳು ಮಾಡಿದರೂ ನಿಜವಾದ ಸಾಮಾಜಿಕ ಸೇವೆಗಳಲ್ಲಿ ತೊಡಗಿಕೊಳ್ಳುವವರು ಅವರೇ ಅಂತಹ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಾಯ ಮಾಡುವ ಯೋಚನೆಯೊಂದಿಗೆ ಯುವಕಾ ಸಂಘ,ಕ್ಯಾಂಪಸ್2ಕಮ್ಯುನಿಟಿ ಮತ್ತು ಮೈಕ್ರೋಸಾಫ್ಟ್ ಸಹಯೋಗದೊಂದಿಗೆ ಉಚಿತ ಕಂಪೂಟರ್ ನೀಡುತ್ತಿದ್ದೇವೆ.ಮುಂದಿನ ದಿನಗಳಲ್ಲಿ ಇಲ್ಲಿ ಸುತ್ತಲೂ ಅನೇಕ ಕಂಪನಿಗಳು ನಿರ್ಮಾಣವಾಗಲಿದೆ ಅದಕ್ಕೆ ಪೂರಕವಾದ ಶಿಕ್ಷಣ ವಿದ್ಯಾರ್ಥಿಗಳಿಗೆ ಲಭ್ಯವಾಗಬೇಕು ಅದಕ್ಕಾಗಿ ನಮ್ಮ ಸಂಸ್ಥೆ ಶ್ರಮಿಸಲಿದೆ ಎಂದರು.

ಕಾರ್ಯಕ್ರಮದಲ್ಲಿ ದೇವನಹಳ್ಳಿ ತಾಲೂಕಿನ ಪ್ರತಿಭಾವಂತ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಮತ್ತು ಆಯ್ದ ಐದು ಶಾಲೆಗಳಿಗೆ ಉಚಿತ ಕಂಪ್ಯೂಟರ್ ವಿತರಿಸಲಾಯಿತು.

ಇದೇ ಸಂದರ್ಭದಲ್ಲಿ ಬಯಪ್ಪ ಅಧ್ಯಕ್ಷರಾದ ವಿ.ಶಾಂತಕುಮಾರ್,ತಹಸೀಲ್ದಾರ್ ಅನಿಲ್ ಕುಮಾರ್ ,ಇಒ.ಶ್ರೀನಾಥ್ ಗೌಡ,ಉಪ ಕುಲಪತಿಗಳು ಎಚ್.ಎಸ್.ಸುಬ್ರಮಣ್ಯ,ಕ್ಷೇತ್ರದ ಶಿಕ್ಷಣಧಿಕಾರಿ ಲಲೀತಮ್ಮ, ತಾಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಸಿ.ಜಗನ್ನಾಥ್ ,ಮೈಕ್ರೋ ಸಾಫ್ಟ್ ಪದಾಧಿಕಾರಿಗಳು ಕಿಶೋರ್ ಕುಮಾರ್,ವಿಜಯಪುರ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ದಿನ್ನೂರು ವೆಂಕಟೇಶ್,ತಾಪಂ ಮಾಜಿ ಸದಸ್ಯರಾದ ಸೋಮತ್ತನಹಳ್ಳಿ ಮಂಜುನಾಥ್,ಮುನೇಗೌಡ,
ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಮಂಜುಳಾ,ಬಯಪ್ಪ ನಿರ್ದೇಶಕ ಪ್ರಸನ್ನ ಕುಮಾರ್,ಗಂಗವಾರ ಬೈರೇಗೌಡ, ಮುಖಂಡರುಗಳಾದ ಲಕ್ಷ್ಮಣ್ ಮೂರ್ತಿ, ಚನ್ನಹಳ್ಳಿ ಗ್ರಾ.ಪಂ ಅಧ್ಯಕ್ಷ ದೇವರಾಜ್, ಮಾಜಿ ಅಧ್ಯಕ್ಷ ರಾಧಾಕೃಷ್ಣ,ವೆಂಕಟೇಶ್ ,ಮಂಜುಳಾ,ಯುವಕ ಸಂಘ ನಿರ್ದೇಶಕ ಮಹೇಶ್, ಸಂಯೋಜಕರಾದವದರ್ಶನ್, ಅಮೋಘ್,ಅಕಾಶ್,ದಿವಾಕರ್,ಅನುಷಾ ಸೇರಿದಂತೆ ಹಲವು ಮುಖಂಡರು ಚಾಣಕ್ಯ ವಿಶ್ವವಿದ್ಯಾನಿಲಯ ಬೋಧಕ- ಬೋಧಕೇತರ ಸಿಬ್ಬಂದಿ ವರ್ಗದವರು , ವಿದ್ಯಾರ್ಥಿಗಳು ಮತ್ತು ಪೋಷಕರು ಭಾಗಿಯಾದ್ದರು.

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

32 minutes ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

4 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

16 hours ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

17 hours ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

19 hours ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

21 hours ago