ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ(ಇಗ್ನೋ)ದಿಂದ ವಿವಿಧ ಕೋರ್ಸ್‌ಗಳ ಪ್ರವೇಶಾತಿಗಾಗಿ ಅರ್ಜಿ ಅಹ್ವಾನ

ಭಾರತ ಸರ್ಕಾರದ ಶಿಕ್ಷಣ ಸಚಿವಾಲಯ ಮತ್ತು ನ್ಯಾಕ್ ಎ++(NAAC A++) ಮಾನ್ಯತೆ ಪಡೆದ ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ (IGNOU-ಇಗ್ನೋ)ದ 2023ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ, ಪಿಜಿ ಡಿಪ್ಲೋಮಾ ಮತ್ತು ಪ್ರಮಾಣ ಪತ್ರ ಮಟ್ಟದ ಕಾರ್ಯಕ್ರಮಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ ಬೆಂಗಳೂರು ಪ್ರಾದೇಶಿಕ ಕೇಂದ್ರದ ಹಿರಿಯ ಪ್ರಾದೇಶಿಕ ನಿರ್ದೇಶಕಿ ಡಾ. ಎಸ್.ರಾಧಾ ಅವರು ತಿಳಿಸಿದ್ದಾರೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ದೈಹಿಕ ಅಶಕ್ತ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಮತ್ತು ಶುಲ್ಕ ಮರು ಪಾವತಿ ಸೌಲಭ್ಯ ಪಡೆಯಲು ಅವಕಾಶವಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡ (ಎಸ್‌ಸಿ/ಎಸ್ಟಿ) ವಿದ್ಯಾರ್ಥಿಗಳು ಸಾಮಾನ್ಯ ಬಿ.ಕಾಂ, ಬಿ.ಎ. ಮುತ್ತು ಬಿ.ಎಸ್ಸಿ ಗೆ ಅರ್ಜಿ ಸಲ್ಲಿಸುವಾಗ ಪರಿಶಿಷ್ಟ ಜಾತಿ ಉಪಜಾತಿ ಯೋಜನೆ(SCSP) ಮತ್ತು ಬುಡಕಟ್ಟು(TSP) ಅಡಿಯಲ್ಲಿ ಶುಲ್ಕ ವಿನಾಯಿತಿ ಪಡೆಯಬಹುದು.

ಅರ್ಹ ವಿದ್ಯಾರ್ಥಿಗಳು ಭಾರತ ಸರ್ಕಾರದ ವಿದ್ಯಾರ್ಥಿಗ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಮತ್ತು ವಿದ್ಯಾ ಲಕ್ಷ್ಮಿ ಪೋರ್ಟಲ್ ಮೂಲಕ ಶಿಕ್ಷಣ ಸಾಲ ಸೌಲಭ್ಯವನ್ನು ಸಹ ಪಡೆಯಬಹುದು.

ಜುಲೈನಲ್ಲಿ ನಡೆಯುವ ಪ್ರವೇಶಕ್ಕಾಗಿ ಅನ್‌ಲೈನ್‌ನ ಮೂಲಕ ಅರ್ಜಿ ಸಲ್ಲಿಸಲು https://ignouadmission.samarth.edu.in/ ಲಿಂಕ್ ಕ್ಲಿಕ್ ಮಾಡಿ ಮತ್ತು www.ignou.ac.in ಗೆ ಭೇಟಿ ನೀಡಿ ಸಮಗ್ರ ವಿವರಗಳನ್ನು ಪಡೆಯಬಹುದು.

AICTE ಪರಿಷ್ಕೃತ ನಿಯಮಗಳ ಪ್ರಕಾರ ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ ಇಲ್ಲದ ಎಂ.ಬಿಎ ಪದವಿಗೆ ನೇರ ಪ್ರವೇಶ ಒದಗಿಸಲಾಗುವುದು. ಡಿಜಿಟಲ್ ಮಾಧ್ಯಮ, ಎಲೆಕ್ಟ್ರಾನಿಕ್ ಮಾಧ್ಯಮ, ಅಭಿವೃದ್ಧಿ ಪತ್ರಿಕೋದ್ಯಮದ ಅತ್ಯಂತ ಉಪಯುಕ್ತ ಮತ್ತು ಉದ್ಯಮದ ಅಗತ್ಯ ಕಾರ್ಯಕ್ರಮಗಳನ್ನು ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ ಆರಂಭಿಸಿದ್ದು, ವಿದ್ಯಾರ್ಥಿಗಳು ತಮ್ಮ ಅಸಕ್ತಿಗೆ ಅನುಗುಣವಾಗಿ ಆಯ್ಕೆ ಮಾಡಿಕೊಳ್ಳಬಹುದು.

ಅರ್ಹತಾ ಷರತ್ತುಗಳು ಮತ್ತು ಇತರ ವಿವರಗಳಿಗಾಗಿ, ಇ-ಪ್ರಾಸ್ಪೆಕ್ಟಸ್ ಅನ್ನುhttp://www.ignou.ac.in/userfiles/Common-Prospectus-English.pdf ನಲ್ಲಿ ಡೌನ್ಲೋಡ್ ಮಾಡಿ. ಹೆಚ್ಚಿನ ಮಾಹಿತಿಗಾಗಿ 9449337272 ಗೆ Whatsapp SMS ಅಥವಾ 080-29607272 ಗೆ ಕರೆ ಮಾಡಬಹುದು, admissionrc13@ignou.ac.in ಗೆ ಮೇಲ್ ಮಾಡುವ ಮೂಲಕ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು ಇಗ್ನೋದ ಹಿರಿಯ ಪ್ರಾದೇಶಿಕ ನಿರ್ದೇಶಕಿ ಡಾ. ಎಸ್.ರಾಧಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

12 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

12 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

19 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

19 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

1 day ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

2 days ago