ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ(ಇಗ್ನೋ)ದಿಂದ ವಿವಿಧ ಕೋರ್ಸ್‌ಗಳ ಪ್ರವೇಶಾತಿಗಾಗಿ ಅರ್ಜಿ ಅಹ್ವಾನ

ಭಾರತ ಸರ್ಕಾರದ ಶಿಕ್ಷಣ ಸಚಿವಾಲಯ ಮತ್ತು ನ್ಯಾಕ್ ಎ++(NAAC A++) ಮಾನ್ಯತೆ ಪಡೆದ ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ (IGNOU-ಇಗ್ನೋ)ದ 2023ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ, ಪಿಜಿ ಡಿಪ್ಲೋಮಾ ಮತ್ತು ಪ್ರಮಾಣ ಪತ್ರ ಮಟ್ಟದ ಕಾರ್ಯಕ್ರಮಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ ಬೆಂಗಳೂರು ಪ್ರಾದೇಶಿಕ ಕೇಂದ್ರದ ಹಿರಿಯ ಪ್ರಾದೇಶಿಕ ನಿರ್ದೇಶಕಿ ಡಾ. ಎಸ್.ರಾಧಾ ಅವರು ತಿಳಿಸಿದ್ದಾರೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ದೈಹಿಕ ಅಶಕ್ತ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಮತ್ತು ಶುಲ್ಕ ಮರು ಪಾವತಿ ಸೌಲಭ್ಯ ಪಡೆಯಲು ಅವಕಾಶವಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡ (ಎಸ್‌ಸಿ/ಎಸ್ಟಿ) ವಿದ್ಯಾರ್ಥಿಗಳು ಸಾಮಾನ್ಯ ಬಿ.ಕಾಂ, ಬಿ.ಎ. ಮುತ್ತು ಬಿ.ಎಸ್ಸಿ ಗೆ ಅರ್ಜಿ ಸಲ್ಲಿಸುವಾಗ ಪರಿಶಿಷ್ಟ ಜಾತಿ ಉಪಜಾತಿ ಯೋಜನೆ(SCSP) ಮತ್ತು ಬುಡಕಟ್ಟು(TSP) ಅಡಿಯಲ್ಲಿ ಶುಲ್ಕ ವಿನಾಯಿತಿ ಪಡೆಯಬಹುದು.

ಅರ್ಹ ವಿದ್ಯಾರ್ಥಿಗಳು ಭಾರತ ಸರ್ಕಾರದ ವಿದ್ಯಾರ್ಥಿಗ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಮತ್ತು ವಿದ್ಯಾ ಲಕ್ಷ್ಮಿ ಪೋರ್ಟಲ್ ಮೂಲಕ ಶಿಕ್ಷಣ ಸಾಲ ಸೌಲಭ್ಯವನ್ನು ಸಹ ಪಡೆಯಬಹುದು.

ಜುಲೈನಲ್ಲಿ ನಡೆಯುವ ಪ್ರವೇಶಕ್ಕಾಗಿ ಅನ್‌ಲೈನ್‌ನ ಮೂಲಕ ಅರ್ಜಿ ಸಲ್ಲಿಸಲು https://ignouadmission.samarth.edu.in/ ಲಿಂಕ್ ಕ್ಲಿಕ್ ಮಾಡಿ ಮತ್ತು www.ignou.ac.in ಗೆ ಭೇಟಿ ನೀಡಿ ಸಮಗ್ರ ವಿವರಗಳನ್ನು ಪಡೆಯಬಹುದು.

AICTE ಪರಿಷ್ಕೃತ ನಿಯಮಗಳ ಪ್ರಕಾರ ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ ಇಲ್ಲದ ಎಂ.ಬಿಎ ಪದವಿಗೆ ನೇರ ಪ್ರವೇಶ ಒದಗಿಸಲಾಗುವುದು. ಡಿಜಿಟಲ್ ಮಾಧ್ಯಮ, ಎಲೆಕ್ಟ್ರಾನಿಕ್ ಮಾಧ್ಯಮ, ಅಭಿವೃದ್ಧಿ ಪತ್ರಿಕೋದ್ಯಮದ ಅತ್ಯಂತ ಉಪಯುಕ್ತ ಮತ್ತು ಉದ್ಯಮದ ಅಗತ್ಯ ಕಾರ್ಯಕ್ರಮಗಳನ್ನು ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ ಆರಂಭಿಸಿದ್ದು, ವಿದ್ಯಾರ್ಥಿಗಳು ತಮ್ಮ ಅಸಕ್ತಿಗೆ ಅನುಗುಣವಾಗಿ ಆಯ್ಕೆ ಮಾಡಿಕೊಳ್ಳಬಹುದು.

ಅರ್ಹತಾ ಷರತ್ತುಗಳು ಮತ್ತು ಇತರ ವಿವರಗಳಿಗಾಗಿ, ಇ-ಪ್ರಾಸ್ಪೆಕ್ಟಸ್ ಅನ್ನುhttp://www.ignou.ac.in/userfiles/Common-Prospectus-English.pdf ನಲ್ಲಿ ಡೌನ್ಲೋಡ್ ಮಾಡಿ. ಹೆಚ್ಚಿನ ಮಾಹಿತಿಗಾಗಿ 9449337272 ಗೆ Whatsapp SMS ಅಥವಾ 080-29607272 ಗೆ ಕರೆ ಮಾಡಬಹುದು, admissionrc13@ignou.ac.in ಗೆ ಮೇಲ್ ಮಾಡುವ ಮೂಲಕ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು ಇಗ್ನೋದ ಹಿರಿಯ ಪ್ರಾದೇಶಿಕ ನಿರ್ದೇಶಕಿ ಡಾ. ಎಸ್.ರಾಧಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

4 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

11 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

14 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

15 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago