ಭಾರತ ಸರ್ಕಾರದ ಶಿಕ್ಷಣ ಸಚಿವಾಲಯ ಮತ್ತು ನ್ಯಾಕ್ ಎ++(NAAC A++) ಮಾನ್ಯತೆ ಪಡೆದ ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ (IGNOU-ಇಗ್ನೋ)ದ 2023ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ, ಪಿಜಿ ಡಿಪ್ಲೋಮಾ ಮತ್ತು ಪ್ರಮಾಣ ಪತ್ರ ಮಟ್ಟದ ಕಾರ್ಯಕ್ರಮಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ ಬೆಂಗಳೂರು ಪ್ರಾದೇಶಿಕ ಕೇಂದ್ರದ ಹಿರಿಯ ಪ್ರಾದೇಶಿಕ ನಿರ್ದೇಶಕಿ ಡಾ. ಎಸ್.ರಾಧಾ ಅವರು ತಿಳಿಸಿದ್ದಾರೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ದೈಹಿಕ ಅಶಕ್ತ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಮತ್ತು ಶುಲ್ಕ ಮರು ಪಾವತಿ ಸೌಲಭ್ಯ ಪಡೆಯಲು ಅವಕಾಶವಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡ (ಎಸ್ಸಿ/ಎಸ್ಟಿ) ವಿದ್ಯಾರ್ಥಿಗಳು ಸಾಮಾನ್ಯ ಬಿ.ಕಾಂ, ಬಿ.ಎ. ಮುತ್ತು ಬಿ.ಎಸ್ಸಿ ಗೆ ಅರ್ಜಿ ಸಲ್ಲಿಸುವಾಗ ಪರಿಶಿಷ್ಟ ಜಾತಿ ಉಪಜಾತಿ ಯೋಜನೆ(SCSP) ಮತ್ತು ಬುಡಕಟ್ಟು(TSP) ಅಡಿಯಲ್ಲಿ ಶುಲ್ಕ ವಿನಾಯಿತಿ ಪಡೆಯಬಹುದು.
ಅರ್ಹ ವಿದ್ಯಾರ್ಥಿಗಳು ಭಾರತ ಸರ್ಕಾರದ ವಿದ್ಯಾರ್ಥಿಗ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಮತ್ತು ವಿದ್ಯಾ ಲಕ್ಷ್ಮಿ ಪೋರ್ಟಲ್ ಮೂಲಕ ಶಿಕ್ಷಣ ಸಾಲ ಸೌಲಭ್ಯವನ್ನು ಸಹ ಪಡೆಯಬಹುದು.
ಜುಲೈನಲ್ಲಿ ನಡೆಯುವ ಪ್ರವೇಶಕ್ಕಾಗಿ ಅನ್ಲೈನ್ನ ಮೂಲಕ ಅರ್ಜಿ ಸಲ್ಲಿಸಲು https://ignouadmission.samarth.edu.in/ ಲಿಂಕ್ ಕ್ಲಿಕ್ ಮಾಡಿ ಮತ್ತು www.ignou.ac.in ಗೆ ಭೇಟಿ ನೀಡಿ ಸಮಗ್ರ ವಿವರಗಳನ್ನು ಪಡೆಯಬಹುದು.
AICTE ಪರಿಷ್ಕೃತ ನಿಯಮಗಳ ಪ್ರಕಾರ ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ ಇಲ್ಲದ ಎಂ.ಬಿಎ ಪದವಿಗೆ ನೇರ ಪ್ರವೇಶ ಒದಗಿಸಲಾಗುವುದು. ಡಿಜಿಟಲ್ ಮಾಧ್ಯಮ, ಎಲೆಕ್ಟ್ರಾನಿಕ್ ಮಾಧ್ಯಮ, ಅಭಿವೃದ್ಧಿ ಪತ್ರಿಕೋದ್ಯಮದ ಅತ್ಯಂತ ಉಪಯುಕ್ತ ಮತ್ತು ಉದ್ಯಮದ ಅಗತ್ಯ ಕಾರ್ಯಕ್ರಮಗಳನ್ನು ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ ಆರಂಭಿಸಿದ್ದು, ವಿದ್ಯಾರ್ಥಿಗಳು ತಮ್ಮ ಅಸಕ್ತಿಗೆ ಅನುಗುಣವಾಗಿ ಆಯ್ಕೆ ಮಾಡಿಕೊಳ್ಳಬಹುದು.
ಅರ್ಹತಾ ಷರತ್ತುಗಳು ಮತ್ತು ಇತರ ವಿವರಗಳಿಗಾಗಿ, ಇ-ಪ್ರಾಸ್ಪೆಕ್ಟಸ್ ಅನ್ನುhttp://www.ignou.ac.in/userfiles/Common-Prospectus-English.pdf ನಲ್ಲಿ ಡೌನ್ಲೋಡ್ ಮಾಡಿ. ಹೆಚ್ಚಿನ ಮಾಹಿತಿಗಾಗಿ 9449337272 ಗೆ Whatsapp SMS ಅಥವಾ 080-29607272 ಗೆ ಕರೆ ಮಾಡಬಹುದು, admissionrc13@ignou.ac.in ಗೆ ಮೇಲ್ ಮಾಡುವ ಮೂಲಕ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು ಇಗ್ನೋದ ಹಿರಿಯ ಪ್ರಾದೇಶಿಕ ನಿರ್ದೇಶಕಿ ಡಾ. ಎಸ್.ರಾಧಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…