ಇಂದು ಇತಿಹಾಸ ಪ್ರಸಿದ್ಧ ಮಧುರೆ ಶನಿಮಹಾತ್ಮಸ್ವಾಮಿ 71ನೇ ಬ್ರಹ್ಮರಥೋತ್ಸವ: ಮುಂಜಾನೆಯಿಂದಲೇ ಆರಂಭಗೊಂಡ ವಿಶೇಷ ಪೂಜೆ, ಪುನಸ್ಕಾರ

ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ವಿಜೃಂಭಣೆಯಿಂದ ನೆರವೇರಲಿದೆ. ಪ್ರತಿವರ್ಷದಂತೆ ಈ ವರ್ಷವು ಸಹ ಬ್ರಹ್ಮರಥೋತ್ಸವನ್ನು ಅದ್ಧೂರಿಯಾಗಿ ನೆರವೇರಿಸಲು ಸಕಲ ಸಿದ್ಧತೆ ನಡೆಸಿಕೊಳ್ಳಲಾಗಿದೆ. ದೇವರಿಗೆ ವಿವಿಧ ಪುಷ್ಪಗಳಿಂದ ಅಲಂಕರಿಸಿ, ಇಂದು ಮುಂಜಾನೆಯಿಂದಲೇ ವಿಶೇಷ ಪೂಜೆ ಪುನಸ್ಕಾರಗಳನ್ನು ನೆರವೇರಿಸಲಾಗುತ್ತಿದೆ.. ಭಕ್ತಾಧಿಗಳು ಸಾಗರೋಪಾದಿಯಲ್ಲಿ ಬಂದು ದೇವರ ದರ್ಶನ ಪಡೆಯುತ್ತಿದ್ದಾರೆ…

ಇಂದು ಮಧ್ಯಾಹ್ನ 1:15ರಿಂದ 2:10 ಗಂಟೆಯೊಳಗೆ ಸಲ್ಲುವ ಶುಭಲಗ್ನದಲ್ಲಿ 71ನೇ ಬ್ರಹ್ಮರಥೋತ್ಸವ ನೆರವೇರಲಿದೆ. ಬ್ರಹ್ಮರಥೋತ್ಸವವು ಈ ಬಾರಿ ಹಲವು ವಿಶೇಷತೆಗಳಿಂದ ಕೂಡಿರಲಿದೆ. ತಾಲ್ಲೂಕಿನೆಲ್ಲೆಡೆಯಿಂದ 101 ಉತ್ಸವ ಮೂರ್ತಿಗಳನ್ನು ಬೆಳ್ಳಿ ರಥದೊಂದಿಗೆ ಕರೆಸಿ ಮೂಲ ದೇವಾಲಯದ ಸುತ್ತ ಪ್ರದಕ್ಷಿಣೆ ಹಾಕಿಸಿ ಶಾಲಾ ಆವರಣದಲ್ಲಿ ಸ್ಥಾಪಿಸಿ ವಿಶೇಷ ಪೂಜೆ ನೆರವೇರಿಸಲಾಗುವುದು.

ಫೆ.25ರಿಂದ ಮಾ.3 ರ ವರೆಗೆ ವಿಶೇಷವಾದ ಉತ್ಸವ ಕಾರ್ಯಕ್ರಮಗಳು ನೆರವೇರಲಿದೆ. ಮೊಬೈಲ್ ಆರ್ಕೆಸ್ಟ್ರಾ, ಜಿ ಕನ್ನಡ ವಾಹಿನಿಯ ಸರಿಗಮಪ ತಂಡದ ಖ್ಯಾತ ಚಲನಚಿತ್ರ ನಟರನ್ನೊಳಗೊಂಡ ಸಂಗೀತ ಸಂಜೆ, ಮದ್ದಿನ ಮರದ ಕಾರ್ಯಕ್ರಮ, ಕಾಕವಾಹನೋತ್ಸವ, ಚಂದ್ರಮಂಡಲೋತ್ಸವ, ಸುಪ್ರಭಾತೋತ್ಸವ, ಡೊಳ್ಳುಕುಣಿತ, ತೆಪ್ಪೋತ್ಸವ ಸೇರಿದಂತೆ ಹಲವು ಉತ್ಸವಗಳನ್ಮು ಹಮ್ಮಿಕೊಳ್ಳಲಾಗಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ.

ಭಕ್ತಾಧಿಗಳಿಗೆ ಅನ್ನದಾಸೋಹ ವ್ಯವಸ್ಥೆ ಮಾಡಲಾಗಿದೆ.. ಸೂಕ್ತ ಪೊಲೀಸ್ ಬಂದೋಬಸ್ತ್, ಸಾರಿಗೆ ವ್ಯವಸ್ಥೆ ಸೇರಿದಂತೆ ಇತರೆ ಸೌಕರ್ಯಗಳನ್ನು ಮಾಡಲಾಗಿದೆ….

Ramesh Babu

Journalist

Recent Posts

ಉಚಿತ ಯೋಜನೆಗಳ ಘೋಷಣೆಯ ಹಿಂದಿನ ವಾಸ್ತವಗಳು……

ಚುನಾವಣಾ ಹೊಸ್ತಿಲಿನಲ್ಲಿ ಕೆಲವು ರಾಜಕೀಯ ಪಕ್ಷಗಳ ಘೋಷಿಸುವ ಉಚಿತ ಯೋಜನೆಗಳ ಪರ ಮತ್ತು ವಿರೋಧವಾಗಿ ಚರ್ಚೆಗಳನ್ನು ಹುಟ್ಟು ಹಾಕಿದೆ. ಇದನ್ನು…

3 hours ago

ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮಹಿಳೆಯ ದಾರುಣ ಸಾವು

ರೆಸಾರ್ಟ್‌ ಸ್ವಿಮ್ಮಿಂಗ್ ಪೂಲ್ ಗೆ ಧುಮುಕಿದ ಮಹಿಳೆಯೊಬ್ಬರು ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ…

14 hours ago

ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ರಸ್ತೆಗೆ ಅಡ್ಡಲಾಗಿ ಉರುಳಿಬಿದ್ದ ವಿದ್ಯುತ್ ಕಂಬ

ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಅಡ್ಡಲಾಗಿ ವಿದ್ಯುತ್ ಕಂಬ ಉರುಳಿಬಿದ್ದಿದೆ. ದೊಡ್ಡಬಳ್ಳಾಪುರ ತಾಲೂಕಿನ…

14 hours ago

ಕೊಡಗು ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಮಳೆ

ಕೊಡಗು ಜಿಲ್ಲೆಯ ವಿವಿಧೆಡೆ ಇಂದು ಸಂಜೆ ಗುಡುಗು ಸಹಿತ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ವಿರಾಜಪೇಟೆ ತಾಲೂಕಿನ ವಿವಿಧ ಭಾಗಗಳು ಪೊನ್ನಂಪೇಟೆ…

16 hours ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: 6.5 ಕೋಟಿ ರೂ. ಮೌಲ್ಯದ 18.6 ಕೆಜಿ ಹೈಡ್ರೋಪೋನಿಕ್ ಗಾಂಜಾ ಸೀಜ್

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಎರಡು‌ ಪ್ರತ್ಯೇಕ ಪ್ರಕರಣಗಳಲ್ಲಿ‌ ಕೋಟಿ ಕೋಟಿ ಮೌಲ್ಯದ…

16 hours ago

ಚರಂಡಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ..!

ಚರಂಡಿಯಲ್ಲಿ‌ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆಯಾಗಿರುವ ಘಟನೆ ದೇವನಹಳ್ಳಿ ಪಟ್ಟಣದ ಸ್ವರ್ಣಾದ್ರಿ ಹೋಟೆಲ್ ಮುಂಭಾಗದಲ್ಲಿ ನಡೆದಿದೆ... ಮಹಿಳೆ…

20 hours ago