ಇಂದು ಇತಿಹಾಸ ಪ್ರಸಿದ್ಧ ಮಧುರೆ ಶನಿಮಹಾತ್ಮಸ್ವಾಮಿ 71ನೇ ಬ್ರಹ್ಮರಥೋತ್ಸವ: ಮುಂಜಾನೆಯಿಂದಲೇ ಆರಂಭಗೊಂಡ ವಿಶೇಷ ಪೂಜೆ, ಪುನಸ್ಕಾರ

ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ವಿಜೃಂಭಣೆಯಿಂದ ನೆರವೇರಲಿದೆ. ಪ್ರತಿವರ್ಷದಂತೆ ಈ ವರ್ಷವು ಸಹ ಬ್ರಹ್ಮರಥೋತ್ಸವನ್ನು ಅದ್ಧೂರಿಯಾಗಿ ನೆರವೇರಿಸಲು ಸಕಲ ಸಿದ್ಧತೆ ನಡೆಸಿಕೊಳ್ಳಲಾಗಿದೆ. ದೇವರಿಗೆ ವಿವಿಧ ಪುಷ್ಪಗಳಿಂದ ಅಲಂಕರಿಸಿ, ಇಂದು ಮುಂಜಾನೆಯಿಂದಲೇ ವಿಶೇಷ ಪೂಜೆ ಪುನಸ್ಕಾರಗಳನ್ನು ನೆರವೇರಿಸಲಾಗುತ್ತಿದೆ.. ಭಕ್ತಾಧಿಗಳು ಸಾಗರೋಪಾದಿಯಲ್ಲಿ ಬಂದು ದೇವರ ದರ್ಶನ ಪಡೆಯುತ್ತಿದ್ದಾರೆ…

ಇಂದು ಮಧ್ಯಾಹ್ನ 1:15ರಿಂದ 2:10 ಗಂಟೆಯೊಳಗೆ ಸಲ್ಲುವ ಶುಭಲಗ್ನದಲ್ಲಿ 71ನೇ ಬ್ರಹ್ಮರಥೋತ್ಸವ ನೆರವೇರಲಿದೆ. ಬ್ರಹ್ಮರಥೋತ್ಸವವು ಈ ಬಾರಿ ಹಲವು ವಿಶೇಷತೆಗಳಿಂದ ಕೂಡಿರಲಿದೆ. ತಾಲ್ಲೂಕಿನೆಲ್ಲೆಡೆಯಿಂದ 101 ಉತ್ಸವ ಮೂರ್ತಿಗಳನ್ನು ಬೆಳ್ಳಿ ರಥದೊಂದಿಗೆ ಕರೆಸಿ ಮೂಲ ದೇವಾಲಯದ ಸುತ್ತ ಪ್ರದಕ್ಷಿಣೆ ಹಾಕಿಸಿ ಶಾಲಾ ಆವರಣದಲ್ಲಿ ಸ್ಥಾಪಿಸಿ ವಿಶೇಷ ಪೂಜೆ ನೆರವೇರಿಸಲಾಗುವುದು.

ಫೆ.25ರಿಂದ ಮಾ.3 ರ ವರೆಗೆ ವಿಶೇಷವಾದ ಉತ್ಸವ ಕಾರ್ಯಕ್ರಮಗಳು ನೆರವೇರಲಿದೆ. ಮೊಬೈಲ್ ಆರ್ಕೆಸ್ಟ್ರಾ, ಜಿ ಕನ್ನಡ ವಾಹಿನಿಯ ಸರಿಗಮಪ ತಂಡದ ಖ್ಯಾತ ಚಲನಚಿತ್ರ ನಟರನ್ನೊಳಗೊಂಡ ಸಂಗೀತ ಸಂಜೆ, ಮದ್ದಿನ ಮರದ ಕಾರ್ಯಕ್ರಮ, ಕಾಕವಾಹನೋತ್ಸವ, ಚಂದ್ರಮಂಡಲೋತ್ಸವ, ಸುಪ್ರಭಾತೋತ್ಸವ, ಡೊಳ್ಳುಕುಣಿತ, ತೆಪ್ಪೋತ್ಸವ ಸೇರಿದಂತೆ ಹಲವು ಉತ್ಸವಗಳನ್ಮು ಹಮ್ಮಿಕೊಳ್ಳಲಾಗಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ.

ಭಕ್ತಾಧಿಗಳಿಗೆ ಅನ್ನದಾಸೋಹ ವ್ಯವಸ್ಥೆ ಮಾಡಲಾಗಿದೆ.. ಸೂಕ್ತ ಪೊಲೀಸ್ ಬಂದೋಬಸ್ತ್, ಸಾರಿಗೆ ವ್ಯವಸ್ಥೆ ಸೇರಿದಂತೆ ಇತರೆ ಸೌಕರ್ಯಗಳನ್ನು ಮಾಡಲಾಗಿದೆ….

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

3 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

15 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

15 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

16 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

19 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago