ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ವಿಜೃಂಭಣೆಯಿಂದ ನೆರವೇರಲಿದೆ. ಪ್ರತಿವರ್ಷದಂತೆ ಈ ವರ್ಷವು ಸಹ ಬ್ರಹ್ಮರಥೋತ್ಸವನ್ನು ಅದ್ಧೂರಿಯಾಗಿ ನೆರವೇರಿಸಲು ಸಕಲ ಸಿದ್ಧತೆ ನಡೆಸಿಕೊಳ್ಳಲಾಗಿದೆ. ದೇವರಿಗೆ ವಿವಿಧ ಪುಷ್ಪಗಳಿಂದ ಅಲಂಕರಿಸಿ, ಇಂದು ಮುಂಜಾನೆಯಿಂದಲೇ ವಿಶೇಷ ಪೂಜೆ ಪುನಸ್ಕಾರಗಳನ್ನು ನೆರವೇರಿಸಲಾಗುತ್ತಿದೆ.. ಭಕ್ತಾಧಿಗಳು ಸಾಗರೋಪಾದಿಯಲ್ಲಿ ಬಂದು ದೇವರ ದರ್ಶನ ಪಡೆಯುತ್ತಿದ್ದಾರೆ…
ಇಂದು ಮಧ್ಯಾಹ್ನ 1:15ರಿಂದ 2:10 ಗಂಟೆಯೊಳಗೆ ಸಲ್ಲುವ ಶುಭಲಗ್ನದಲ್ಲಿ 71ನೇ ಬ್ರಹ್ಮರಥೋತ್ಸವ ನೆರವೇರಲಿದೆ. ಬ್ರಹ್ಮರಥೋತ್ಸವವು ಈ ಬಾರಿ ಹಲವು ವಿಶೇಷತೆಗಳಿಂದ ಕೂಡಿರಲಿದೆ. ತಾಲ್ಲೂಕಿನೆಲ್ಲೆಡೆಯಿಂದ 101 ಉತ್ಸವ ಮೂರ್ತಿಗಳನ್ನು ಬೆಳ್ಳಿ ರಥದೊಂದಿಗೆ ಕರೆಸಿ ಮೂಲ ದೇವಾಲಯದ ಸುತ್ತ ಪ್ರದಕ್ಷಿಣೆ ಹಾಕಿಸಿ ಶಾಲಾ ಆವರಣದಲ್ಲಿ ಸ್ಥಾಪಿಸಿ ವಿಶೇಷ ಪೂಜೆ ನೆರವೇರಿಸಲಾಗುವುದು.
ಫೆ.25ರಿಂದ ಮಾ.3 ರ ವರೆಗೆ ವಿಶೇಷವಾದ ಉತ್ಸವ ಕಾರ್ಯಕ್ರಮಗಳು ನೆರವೇರಲಿದೆ. ಮೊಬೈಲ್ ಆರ್ಕೆಸ್ಟ್ರಾ, ಜಿ ಕನ್ನಡ ವಾಹಿನಿಯ ಸರಿಗಮಪ ತಂಡದ ಖ್ಯಾತ ಚಲನಚಿತ್ರ ನಟರನ್ನೊಳಗೊಂಡ ಸಂಗೀತ ಸಂಜೆ, ಮದ್ದಿನ ಮರದ ಕಾರ್ಯಕ್ರಮ, ಕಾಕವಾಹನೋತ್ಸವ, ಚಂದ್ರಮಂಡಲೋತ್ಸವ, ಸುಪ್ರಭಾತೋತ್ಸವ, ಡೊಳ್ಳುಕುಣಿತ, ತೆಪ್ಪೋತ್ಸವ ಸೇರಿದಂತೆ ಹಲವು ಉತ್ಸವಗಳನ್ಮು ಹಮ್ಮಿಕೊಳ್ಳಲಾಗಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ.
ಭಕ್ತಾಧಿಗಳಿಗೆ ಅನ್ನದಾಸೋಹ ವ್ಯವಸ್ಥೆ ಮಾಡಲಾಗಿದೆ.. ಸೂಕ್ತ ಪೊಲೀಸ್ ಬಂದೋಬಸ್ತ್, ಸಾರಿಗೆ ವ್ಯವಸ್ಥೆ ಸೇರಿದಂತೆ ಇತರೆ ಸೌಕರ್ಯಗಳನ್ನು ಮಾಡಲಾಗಿದೆ….
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…