ಇಂದು ಎನ್ ಸಿಸಿ ದಿನ: ಎನ್ ಸಿಸಿ ವಿದ್ಯಾರ್ಥಿಗಳಿಂದ ಹುಲುಕಡಿ ಬೆಟ್ಟದವರೆಗೆ ಸೈಕ್ಲಿಂಗ್ ಹಾಗೂ ಟ್ರಕ್ಕಿಂಗ್

ಇಂದು ಎನ್ ಸಿಸಿ ದಿನದ ಅಂಗವಾಗಿ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜಿನ ಎನ್ ಸಿಸಿ ವಿದ್ಯಾರ್ಥಿಗಳು ಹುಲುಕಡಿ ಬೆಟ್ಟದವರೆಗೆ ಸೈಕ್ಲಿಂಗ್ ಕಾರ್ಯಕ್ರಮ ಹಮ್ಮಿಕೊಂಡಿದ್ದರು.

ಬೆಳಗ್ಗೆ 6:30ಕ್ಕೆ ಸರಿಯಾಗಿ ನಗರದ ಶ್ರಿ ಕೊಂಗಾಡಿಯಪ್ಪ ಕಾಲೇಜಿನಿಂದ ದೊಡ್ಡಬೆಳವಂಗಲ ಹೋಬಳಿಯ ಹುಲುಕಡಿ ಬೆಟ್ಟದವರೆಗೆ ಸೈಕ್ಲಿಂಗ್ ಹಮ್ಮಿಕೊಳ್ಳಲಾಗಿತ್ತು. ನಂತರ ಹುಲುಕಡಿ ಬೆಟ್ಟಕ್ಕೆ ಟ್ರೆಕ್ಕಿಂಗ್ ಮೂಲಕ ತೆರಳಿ ಅಲ್ಲಿ ಸ್ವಚ್ಛತೆ ಕಾರ್ಯ ನಡೆಸಿದ್ದಾರೆ‌.

ವಿದ್ಯಾರ್ಥಿ ಜೀವನದಲ್ಲಿ ಕೇವಲ ಓದಿಗೆ ಸೀಮಿತವಾಗಿರದೆ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಳ್ಳಬೇಕು. ಆ ಮೂಲಕ ತಮ್ಮ ಬದುಕಿನ ಅನುಭವಗಳನ್ನ ಹೆಚ್ಚಿಸಿಕೊಂಡು ಉನ್ನತ ಚಿಂತನೆಯನ್ನು ಬೆಳಸಿಕೊಳ್ಳಬೇಕು.  ಉತ್ತಮ ಅರೋಗ್ಯ ಉತ್ತಮ ಸಮಾಜ ನಿರ್ಮಿಸುವಲ್ಲಿ ಎನ್ ಸಿಸಿ ವಿದ್ಯಾರ್ಥಿಗಳ ಪಾತ್ರ ಮುಖ್ಯವಾಗಿದೆ ಎಂದು ಕ್ಯಾಪ್ಟನ್ ಎನ್. ಶ್ರೀನಿವಾಸ್ ತಿಳಿಸಿದರು.

ಕಾಲೇಜಿನ ಉಪ ಪ್ರಾಂಶುಪಾಲ ಎಸ್ ಎಸ್. ಶಿವಶಂಕರ್ ಮಾತನಾಡಿ, ಆಧುನಿಕತೆಯ ಬಳುವಳಿಯಲ್ಲಿ ಮೂಲ ಬದುಕಿನ ರೂಢಿಗಳು ಮರೆಯಾಗುತ್ತಿವೆ. ದುಬಾರಿ ವಾಹನದ ಹುಚ್ಚು ಮನಸ್ಸನ್ನು ಬದಲಿಸುತ್ತಿದೆ. ಅದು ಬದಲಾಗಬೇಕು ಎಂದು ಆಶಯ ವ್ಯಕ್ತಪಡಿಸಿದರು.

ಈ ವೇಳೆ ಮೇಜರ್ ಎಸ್.ಮಹಾಬಲೇಶ್ವರ್ ಲೆಫ್ಟಿನಂಟ್ ಪ್ರವೀಣ್, ಸಿಟಿಒ ಶ್ರೀಕಾಂತ್. ಸಿ.ಕೆ ಹಾಗೂ ಎನ್ ಸಿಸಿ ವಿದ್ಯಾರ್ಥಿಗಳು ಇದ್ದರು.

Ramesh Babu

Journalist

Recent Posts

ಕೇರಳದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನ ಭೇಟಿಯಾದ ದೊಡ್ಡಬಳ್ಳಾಪುರ ಕಾಂಗ್ರೆಸ್ ಮುಖಂಡರು….

ಕೇರಳದ ತಿರುವನಂತಪುರಂ ಜಿಲ್ಲೆಯ ಶಿವಗಿರಿ ಮಠದಲ್ಲಿ ಶ್ರೀ ನಾರಾಯಣ ಧರ್ಮಸಂಗಮ ಟ್ರಸ್ಟ್‌ ಆಯೋಜಿಸಿರುವ ಮಠದ ಯಾತ್ರಾರ್ಥಿಗಳ‌ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ…

2 hours ago

ಮಡಿಕೇರಿ ಹನಿ ಟ್ರ್ಯಾಪ್ ಪ್ರಕರಣ: ಬಲೆಗೆ ಬಿದ್ದರಾ ಗಣ್ಯರು?

ಇತ್ತೀಚೆಗೆ ಮಂಡ್ಯ ಮೂಲಕ ವ್ಯಕ್ತಿ ಮಹಿಳೆ ಮತ್ತು ಆಕೆಯ ಸಹಚರರ ಜಾಲಕ್ಕೆ ಸಿಲುಕಿ ಮಾರಣಾಂತಿಕ ಹಲ್ಲೆಗೆ ಒಳಗಾಗಿ ನಂತರ ಅರೆ…

3 hours ago

ನೇಣಿಗೆ ಶರಣಾಗಿರೋ ವ್ಯಕ್ತಿ

ಮನನೊಂದ ವ್ಯಕ್ತಿಯೋರ್ವ ಮನೆಯಲ್ಲಿ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮುಕ್ತಾಂಭಿಕಾ ಬಡಾವಣೆಯಲ್ಲಿ ನಿನ್ನೆ ರಾತ್ರಿ ಸುಮಾರು 10ಗಂಟೆಯಲ್ಲಿ ನಡೆದಿದೆ....…

4 hours ago

” ಹೊಸ ವರುಷ ಎಂಬುದೇನಿಲ್ಲ ಅರಿತವಗೆ…”

2026ಕ್ಕೆ ಕೆಲವೇ ಗಂಟೆಗಳು ಇರುವಾಗ.......... ಒಂದು ಜೀವನದ ಇಲ್ಲಿಯವರೆಗಿನ ನೆನಪಿನ ಪಯಣ......... " ನಿದ್ದೆಗೊಮ್ಮೆ ನಿತ್ಯ ಮರಣ ಎದ್ದ ಸಲ…

8 hours ago

ಪರಿಶಿಷ್ಟರ ಮೇಲಿನ ದೌರ್ಜನ್ಯವನ್ನು ಆಯೋಗ ಸಹಿಸುವುದಿಲ್ಲ-ಡಾ.ಎಲ್ ಮೂರ್ತಿ

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೇಲಿನ ಶೋಷಣೆ, ದೌರ್ಜನ್ಯಗಳನ್ನು ಆಯೋಗವು ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದು ಕರ್ನಾಟಕ…

20 hours ago

ಉನ್ನಾವೋ…..

  ಉನ್ನಾವೋ........ ಉನ್ನಾವೋ ಅತ್ಯಾಚಾರ, ಕುಲದೀಪ್ ಸಿಂಗ್ ಸೇಂಗರ್, ದೆಹಲಿ ಹೈಕೋರ್ಟ್ ಜಾಮೀನು ತೀರ್ಪು, ಭಾರತ ನ್ಯಾಯಾಂಗ ವ್ಯವಸ್ಥೆಯ ಕಾರ್ಯ…

21 hours ago