ಇಂದು ಎನ್ ಸಿಸಿ ದಿನ: ಎನ್ ಸಿಸಿ ವಿದ್ಯಾರ್ಥಿಗಳಿಂದ ಹುಲುಕಡಿ ಬೆಟ್ಟದವರೆಗೆ ಸೈಕ್ಲಿಂಗ್ ಹಾಗೂ ಟ್ರಕ್ಕಿಂಗ್

ಇಂದು ಎನ್ ಸಿಸಿ ದಿನದ ಅಂಗವಾಗಿ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜಿನ ಎನ್ ಸಿಸಿ ವಿದ್ಯಾರ್ಥಿಗಳು ಹುಲುಕಡಿ ಬೆಟ್ಟದವರೆಗೆ ಸೈಕ್ಲಿಂಗ್ ಕಾರ್ಯಕ್ರಮ ಹಮ್ಮಿಕೊಂಡಿದ್ದರು.

ಬೆಳಗ್ಗೆ 6:30ಕ್ಕೆ ಸರಿಯಾಗಿ ನಗರದ ಶ್ರಿ ಕೊಂಗಾಡಿಯಪ್ಪ ಕಾಲೇಜಿನಿಂದ ದೊಡ್ಡಬೆಳವಂಗಲ ಹೋಬಳಿಯ ಹುಲುಕಡಿ ಬೆಟ್ಟದವರೆಗೆ ಸೈಕ್ಲಿಂಗ್ ಹಮ್ಮಿಕೊಳ್ಳಲಾಗಿತ್ತು. ನಂತರ ಹುಲುಕಡಿ ಬೆಟ್ಟಕ್ಕೆ ಟ್ರೆಕ್ಕಿಂಗ್ ಮೂಲಕ ತೆರಳಿ ಅಲ್ಲಿ ಸ್ವಚ್ಛತೆ ಕಾರ್ಯ ನಡೆಸಿದ್ದಾರೆ‌.

ವಿದ್ಯಾರ್ಥಿ ಜೀವನದಲ್ಲಿ ಕೇವಲ ಓದಿಗೆ ಸೀಮಿತವಾಗಿರದೆ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಳ್ಳಬೇಕು. ಆ ಮೂಲಕ ತಮ್ಮ ಬದುಕಿನ ಅನುಭವಗಳನ್ನ ಹೆಚ್ಚಿಸಿಕೊಂಡು ಉನ್ನತ ಚಿಂತನೆಯನ್ನು ಬೆಳಸಿಕೊಳ್ಳಬೇಕು.  ಉತ್ತಮ ಅರೋಗ್ಯ ಉತ್ತಮ ಸಮಾಜ ನಿರ್ಮಿಸುವಲ್ಲಿ ಎನ್ ಸಿಸಿ ವಿದ್ಯಾರ್ಥಿಗಳ ಪಾತ್ರ ಮುಖ್ಯವಾಗಿದೆ ಎಂದು ಕ್ಯಾಪ್ಟನ್ ಎನ್. ಶ್ರೀನಿವಾಸ್ ತಿಳಿಸಿದರು.

ಕಾಲೇಜಿನ ಉಪ ಪ್ರಾಂಶುಪಾಲ ಎಸ್ ಎಸ್. ಶಿವಶಂಕರ್ ಮಾತನಾಡಿ, ಆಧುನಿಕತೆಯ ಬಳುವಳಿಯಲ್ಲಿ ಮೂಲ ಬದುಕಿನ ರೂಢಿಗಳು ಮರೆಯಾಗುತ್ತಿವೆ. ದುಬಾರಿ ವಾಹನದ ಹುಚ್ಚು ಮನಸ್ಸನ್ನು ಬದಲಿಸುತ್ತಿದೆ. ಅದು ಬದಲಾಗಬೇಕು ಎಂದು ಆಶಯ ವ್ಯಕ್ತಪಡಿಸಿದರು.

ಈ ವೇಳೆ ಮೇಜರ್ ಎಸ್.ಮಹಾಬಲೇಶ್ವರ್ ಲೆಫ್ಟಿನಂಟ್ ಪ್ರವೀಣ್, ಸಿಟಿಒ ಶ್ರೀಕಾಂತ್. ಸಿ.ಕೆ ಹಾಗೂ ಎನ್ ಸಿಸಿ ವಿದ್ಯಾರ್ಥಿಗಳು ಇದ್ದರು.

Ramesh Babu

Journalist

Recent Posts

ಮಹಿಳೆಯರ ಒಳ ಉಡುಪು ಕದ್ದು ಧರಿಸುತ್ತಿದ್ದ ‘ಸೈಕೋ’ ಕಳ್ಳ ಅರೆಸ್ಟ್: ನಿಟ್ಟುಸಿರು ಬಿಟ್ಟ ಜನ

ಮಹಿಳೆಯರ ಒಳ ಉಡುಪುಗಳನ್ನು ಕದ್ದು ಧರಿಸುತ್ತಿದ್ದ ವಿಚಿತ್ರ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಅಮೃತ್ ಎಂಬ ಈ ಆರೋಪಿ, ರಾತ್ರಿ ವೇಳೆ…

17 minutes ago

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

15 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

20 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

20 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

1 day ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

2 days ago