ಇಂದು ಎನ್ ಸಿಸಿ ದಿನದ ಅಂಗವಾಗಿ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜಿನ ಎನ್ ಸಿಸಿ ವಿದ್ಯಾರ್ಥಿಗಳು ಹುಲುಕಡಿ ಬೆಟ್ಟದವರೆಗೆ ಸೈಕ್ಲಿಂಗ್ ಕಾರ್ಯಕ್ರಮ ಹಮ್ಮಿಕೊಂಡಿದ್ದರು.
ಬೆಳಗ್ಗೆ 6:30ಕ್ಕೆ ಸರಿಯಾಗಿ ನಗರದ ಶ್ರಿ ಕೊಂಗಾಡಿಯಪ್ಪ ಕಾಲೇಜಿನಿಂದ ದೊಡ್ಡಬೆಳವಂಗಲ ಹೋಬಳಿಯ ಹುಲುಕಡಿ ಬೆಟ್ಟದವರೆಗೆ ಸೈಕ್ಲಿಂಗ್ ಹಮ್ಮಿಕೊಳ್ಳಲಾಗಿತ್ತು. ನಂತರ ಹುಲುಕಡಿ ಬೆಟ್ಟಕ್ಕೆ ಟ್ರೆಕ್ಕಿಂಗ್ ಮೂಲಕ ತೆರಳಿ ಅಲ್ಲಿ ಸ್ವಚ್ಛತೆ ಕಾರ್ಯ ನಡೆಸಿದ್ದಾರೆ.
ವಿದ್ಯಾರ್ಥಿ ಜೀವನದಲ್ಲಿ ಕೇವಲ ಓದಿಗೆ ಸೀಮಿತವಾಗಿರದೆ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಳ್ಳಬೇಕು. ಆ ಮೂಲಕ ತಮ್ಮ ಬದುಕಿನ ಅನುಭವಗಳನ್ನ ಹೆಚ್ಚಿಸಿಕೊಂಡು ಉನ್ನತ ಚಿಂತನೆಯನ್ನು ಬೆಳಸಿಕೊಳ್ಳಬೇಕು. ಉತ್ತಮ ಅರೋಗ್ಯ ಉತ್ತಮ ಸಮಾಜ ನಿರ್ಮಿಸುವಲ್ಲಿ ಎನ್ ಸಿಸಿ ವಿದ್ಯಾರ್ಥಿಗಳ ಪಾತ್ರ ಮುಖ್ಯವಾಗಿದೆ ಎಂದು ಕ್ಯಾಪ್ಟನ್ ಎನ್. ಶ್ರೀನಿವಾಸ್ ತಿಳಿಸಿದರು.
ಕಾಲೇಜಿನ ಉಪ ಪ್ರಾಂಶುಪಾಲ ಎಸ್ ಎಸ್. ಶಿವಶಂಕರ್ ಮಾತನಾಡಿ, ಆಧುನಿಕತೆಯ ಬಳುವಳಿಯಲ್ಲಿ ಮೂಲ ಬದುಕಿನ ರೂಢಿಗಳು ಮರೆಯಾಗುತ್ತಿವೆ. ದುಬಾರಿ ವಾಹನದ ಹುಚ್ಚು ಮನಸ್ಸನ್ನು ಬದಲಿಸುತ್ತಿದೆ. ಅದು ಬದಲಾಗಬೇಕು ಎಂದು ಆಶಯ ವ್ಯಕ್ತಪಡಿಸಿದರು.
ಈ ವೇಳೆ ಮೇಜರ್ ಎಸ್.ಮಹಾಬಲೇಶ್ವರ್ ಲೆಫ್ಟಿನಂಟ್ ಪ್ರವೀಣ್, ಸಿಟಿಒ ಶ್ರೀಕಾಂತ್. ಸಿ.ಕೆ ಹಾಗೂ ಎನ್ ಸಿಸಿ ವಿದ್ಯಾರ್ಥಿಗಳು ಇದ್ದರು.
ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…
ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ಪೂರಕವಾಗಿದೆ. ಇದನ್ನು ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ನ…
ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…
" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…
ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…
ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…