ಇಂದು ಎನ್ ಸಿಸಿ ದಿನದ ಅಂಗವಾಗಿ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜಿನ ಎನ್ ಸಿಸಿ ವಿದ್ಯಾರ್ಥಿಗಳು ಹುಲುಕಡಿ ಬೆಟ್ಟದವರೆಗೆ ಸೈಕ್ಲಿಂಗ್ ಕಾರ್ಯಕ್ರಮ ಹಮ್ಮಿಕೊಂಡಿದ್ದರು.
ಬೆಳಗ್ಗೆ 6:30ಕ್ಕೆ ಸರಿಯಾಗಿ ನಗರದ ಶ್ರಿ ಕೊಂಗಾಡಿಯಪ್ಪ ಕಾಲೇಜಿನಿಂದ ದೊಡ್ಡಬೆಳವಂಗಲ ಹೋಬಳಿಯ ಹುಲುಕಡಿ ಬೆಟ್ಟದವರೆಗೆ ಸೈಕ್ಲಿಂಗ್ ಹಮ್ಮಿಕೊಳ್ಳಲಾಗಿತ್ತು. ನಂತರ ಹುಲುಕಡಿ ಬೆಟ್ಟಕ್ಕೆ ಟ್ರೆಕ್ಕಿಂಗ್ ಮೂಲಕ ತೆರಳಿ ಅಲ್ಲಿ ಸ್ವಚ್ಛತೆ ಕಾರ್ಯ ನಡೆಸಿದ್ದಾರೆ.
ವಿದ್ಯಾರ್ಥಿ ಜೀವನದಲ್ಲಿ ಕೇವಲ ಓದಿಗೆ ಸೀಮಿತವಾಗಿರದೆ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಳ್ಳಬೇಕು. ಆ ಮೂಲಕ ತಮ್ಮ ಬದುಕಿನ ಅನುಭವಗಳನ್ನ ಹೆಚ್ಚಿಸಿಕೊಂಡು ಉನ್ನತ ಚಿಂತನೆಯನ್ನು ಬೆಳಸಿಕೊಳ್ಳಬೇಕು. ಉತ್ತಮ ಅರೋಗ್ಯ ಉತ್ತಮ ಸಮಾಜ ನಿರ್ಮಿಸುವಲ್ಲಿ ಎನ್ ಸಿಸಿ ವಿದ್ಯಾರ್ಥಿಗಳ ಪಾತ್ರ ಮುಖ್ಯವಾಗಿದೆ ಎಂದು ಕ್ಯಾಪ್ಟನ್ ಎನ್. ಶ್ರೀನಿವಾಸ್ ತಿಳಿಸಿದರು.
ಕಾಲೇಜಿನ ಉಪ ಪ್ರಾಂಶುಪಾಲ ಎಸ್ ಎಸ್. ಶಿವಶಂಕರ್ ಮಾತನಾಡಿ, ಆಧುನಿಕತೆಯ ಬಳುವಳಿಯಲ್ಲಿ ಮೂಲ ಬದುಕಿನ ರೂಢಿಗಳು ಮರೆಯಾಗುತ್ತಿವೆ. ದುಬಾರಿ ವಾಹನದ ಹುಚ್ಚು ಮನಸ್ಸನ್ನು ಬದಲಿಸುತ್ತಿದೆ. ಅದು ಬದಲಾಗಬೇಕು ಎಂದು ಆಶಯ ವ್ಯಕ್ತಪಡಿಸಿದರು.
ಈ ವೇಳೆ ಮೇಜರ್ ಎಸ್.ಮಹಾಬಲೇಶ್ವರ್ ಲೆಫ್ಟಿನಂಟ್ ಪ್ರವೀಣ್, ಸಿಟಿಒ ಶ್ರೀಕಾಂತ್. ಸಿ.ಕೆ ಹಾಗೂ ಎನ್ ಸಿಸಿ ವಿದ್ಯಾರ್ಥಿಗಳು ಇದ್ದರು.
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…