ತಾಲೂಕಿನ ತೂಬಗೆರೆ ಗ್ರಾಮದಲ್ಲಿ 600 ವರ್ಷಗಳಿಂದ ಆಚರಿಸಿಕೊಂಡು ಬಂದಿರುವ ಪಾರಂಪರಿಕ ಜನಪದ ಹಬ್ಬವಾದ ಭೂತ ನೆರಿಗೆ ಆಚರಣೆ ಜೂನ್ 30(ಇಂದು) ಸಂಜೆ 4 ಗಂಟೆಗೆ ನಡೆಯಲಿದೆ.
ಕರಿಯಣ್ಣ – ಕೆಂಚಣ್ಣರ ವೇಷಧಾರಿಯಾದವರ ಮೇಲೆ ಭೂತ ಆಹ್ವಾನಿಸಿ, ಆರ್ಭಟಿಸುತ್ತವೆ. ಈ ವೇಳೆ, ಇವರ ಹಸಿವು ತಣಿಸುವ ಕೆಲಸ ಆಗುತ್ತದೆ. ವೇಷಧಾರಿಗಳು ಮನೆಗೆ ಬಂದರೆ ಮನೆಯಲ್ಲಿನ ದೆವ್ವ ಪೀಡೆ ಪಿಶಾಚಿಗಳು ಓಡಿ ಹೋಗುತ್ತವೆ ಎಂಬ ನಂಬಿಕೆಯೂ ಇದೆ.
ಪ್ರತಿವರ್ಷದಂತೆ ಈ ವರ್ಷವೂ ಸಹ ಆಷಾಡ ಮಾಸದ ಏಕಾದಶಿಯಾದ ಮಾರನೇ ದಿನವಾದ ದ್ವಾದಶಿಯಂದು ಭೂತ ನೆರಿಗೆ ಹಬ್ಬವನ್ನು ಆಚರಿಸಲು ಸಜ್ಜಾಗಿದೆ.
ವಿಷ್ಣುವಿನ ದ್ವಾರಪಾಲಕರಾದ ಜಯ-ವಿಜಯರು ಶಾಪಕ್ಕೆ ಗುರಿಯಾಗಿ ಕಲಿಯುಗದಲ್ಲಿ ಕರಿಯಣ್ಣ ಕೆಂಚಣ್ಣರಾಗಿ ಭೂಲೋಕಕ್ಕೆ ಬರುತ್ತಾರೆ ಎಂಬ ಐತಿಹಾಸಿಕ ಹಿನ್ನೆಲೆ ಇದೆ.
ಸುಮಾರು 600 ವರ್ಷಗಳ ಇತಿಹಾಸವಿರುವ ಈ ಭೂತನೆರಿಗೆ ಹಬ್ಬ ಇಂದಿಗೂ ಸಹ ತೂಬಗೆರೆ ಹಾಗೂ ಕಲ್ಲುಕೋಟೆ ಗ್ರಾಮದಲ್ಲಿ ನಡೆದುಕೊಂಡು ಬರುತ್ತಿದೆ.
ಭೂತನೆರಿಗೆ ಹಬ್ಬದಲ್ಲಿ ಕರಿಯಣ್ಣ ಮತ್ತು ಕೆಂಚಣ್ಣ ವೇಷಧಾರಿಗಳು ಒಂದು ಕೈಯಲ್ಲಿ ಭೂತದ ಮುಖ ಹೋಲುವ ವರ್ತುಲಾಕಾರದ ನೆರಿಗೆ ಹಿಡಿದಿರುತ್ತಾರೆ. ಮತ್ತೊಂದು ಕೈಯಲ್ಲಿ ಕತ್ತಿ ಹಿಡಿದಿರುತ್ತಾರೆ. ಲಕ್ಷ್ಮಿನರಸಿಂಹಸ್ವಾಮಿ ಭಕ್ತರು ಕೆಂಚಣ್ಣ-ಕರಿಯಣ್ಣರ ಮುಂದೆ ವಿಷ್ಣುವಿನ ನಾಮಸ್ಮರಣೆ ಮತ್ತು ಗುಣಗಾನ ಮಾಡುತ್ತಾ ಇವರನ್ನು ಕೆಣಕುತ್ತಾರೆ. ವಿಷ್ಣುವಿನ ನಾಮಸ್ಮರಣೆ ಸಹಿಸದ ಈ ಕರಿಯಣ್ಣ ಮತ್ತು ಕೆಂಚಣ್ಣ ಭಕ್ತರ ಮೇಲೆ ಕೋಪಗೊಂಡು ಅವರೆಡೆಗೆ ನುಗ್ಗುತ್ತಾರೆ.
ಕೋಪಗೊಂಡ ಕರಿಯಣ್ಣ ಕೆಂಚಣ್ಣರನ್ನು ಸಮಾಧಾನ ಮಾಡಲು ಇತರರು ಅವರ ಬಾಯಿಗೆ ಬಾಳೆ ಹಣ್ಣಿನ, ಹಲಸಿನ ಹಣ್ಣಿನಿಂದ ತಯಾರಿಸಿದ ರಸಾಯನವನ್ನು ತಿನ್ನಿಸುತ್ತಾರೆ. ಆವೇಶಕ್ಕೆ ಒಳಗಾದ ಈ ಭೂತಗಳು ಆ ಸಂದರ್ಭದಲ್ಲಿ ಏನು ಕೊಟ್ಟರೂ ತಿನ್ನುತ್ತಾರೆ ಎಂಬುದು ಜಾನಪದರ ನಂಬಿಕೆ. ಕೆಲವು ಗ್ರಾಮಗಳಲ್ಲಿ ನಡೆಯುವ ಈ ಹಬ್ಬದಲ್ಲಿ ಕರಿಯಣ್ಣ ಮತ್ತು ಕೆಂಚಣ್ಣರ ಬಾಯಿಗೆ ಕುರಿ-ಕೋಳಿಗಳನ್ನು ನೀಡುತ್ತಾರೆ. ಇವುಗಳ ರಕ್ತ ಹೀರುವುದರೊಂದಿಗೆ ಕರಿಯಣ್ಣ-ಕೆಂಚಣ್ಣ ಶಾಂತರಾಗುತಾರೆ ಎನ್ನುವುದು ಈ ಭಾಗದ ಭಕ್ತರ ನಂಬಿಕೆ.
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…
ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…
ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…
ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್, ಚಾಕುವಿನಿಂದ…
ನಟಿ ತ್ರಿಷಾ ಜತೆ ಅಫೇರ್ ಆರೋಪ, ಹೆಂಡ್ತಿ ಡಿವೋರ್ಸ್ ಗೆ ಅರ್ಜಿ ವಿಚಾರ, ವಿಪಕ್ಷಗಳ ಟೀಕಾ ಪ್ರಹಾರ, ಸೋಷಿಯಲ್ ಮೀಡಿಯಾದಲ್ಲಿ…