ತಾಲೂಕಿನ ತೂಬಗೆರೆ ಗ್ರಾಮದಲ್ಲಿ 600 ವರ್ಷಗಳಿಂದ ಆಚರಿಸಿಕೊಂಡು ಬಂದಿರುವ ಪಾರಂಪರಿಕ ಜನಪದ ಹಬ್ಬವಾದ ಭೂತ ನೆರಿಗೆ ಆಚರಣೆ ಜೂನ್ 30(ಇಂದು) ಸಂಜೆ 4 ಗಂಟೆಗೆ ನಡೆಯಲಿದೆ.
ಕರಿಯಣ್ಣ – ಕೆಂಚಣ್ಣರ ವೇಷಧಾರಿಯಾದವರ ಮೇಲೆ ಭೂತ ಆಹ್ವಾನಿಸಿ, ಆರ್ಭಟಿಸುತ್ತವೆ. ಈ ವೇಳೆ, ಇವರ ಹಸಿವು ತಣಿಸುವ ಕೆಲಸ ಆಗುತ್ತದೆ. ವೇಷಧಾರಿಗಳು ಮನೆಗೆ ಬಂದರೆ ಮನೆಯಲ್ಲಿನ ದೆವ್ವ ಪೀಡೆ ಪಿಶಾಚಿಗಳು ಓಡಿ ಹೋಗುತ್ತವೆ ಎಂಬ ನಂಬಿಕೆಯೂ ಇದೆ.
ಪ್ರತಿವರ್ಷದಂತೆ ಈ ವರ್ಷವೂ ಸಹ ಆಷಾಡ ಮಾಸದ ಏಕಾದಶಿಯಾದ ಮಾರನೇ ದಿನವಾದ ದ್ವಾದಶಿಯಂದು ಭೂತ ನೆರಿಗೆ ಹಬ್ಬವನ್ನು ಆಚರಿಸಲು ಸಜ್ಜಾಗಿದೆ.
ವಿಷ್ಣುವಿನ ದ್ವಾರಪಾಲಕರಾದ ಜಯ-ವಿಜಯರು ಶಾಪಕ್ಕೆ ಗುರಿಯಾಗಿ ಕಲಿಯುಗದಲ್ಲಿ ಕರಿಯಣ್ಣ ಕೆಂಚಣ್ಣರಾಗಿ ಭೂಲೋಕಕ್ಕೆ ಬರುತ್ತಾರೆ ಎಂಬ ಐತಿಹಾಸಿಕ ಹಿನ್ನೆಲೆ ಇದೆ.
ಸುಮಾರು 600 ವರ್ಷಗಳ ಇತಿಹಾಸವಿರುವ ಈ ಭೂತನೆರಿಗೆ ಹಬ್ಬ ಇಂದಿಗೂ ಸಹ ತೂಬಗೆರೆ ಹಾಗೂ ಕಲ್ಲುಕೋಟೆ ಗ್ರಾಮದಲ್ಲಿ ನಡೆದುಕೊಂಡು ಬರುತ್ತಿದೆ.
ಭೂತನೆರಿಗೆ ಹಬ್ಬದಲ್ಲಿ ಕರಿಯಣ್ಣ ಮತ್ತು ಕೆಂಚಣ್ಣ ವೇಷಧಾರಿಗಳು ಒಂದು ಕೈಯಲ್ಲಿ ಭೂತದ ಮುಖ ಹೋಲುವ ವರ್ತುಲಾಕಾರದ ನೆರಿಗೆ ಹಿಡಿದಿರುತ್ತಾರೆ. ಮತ್ತೊಂದು ಕೈಯಲ್ಲಿ ಕತ್ತಿ ಹಿಡಿದಿರುತ್ತಾರೆ. ಲಕ್ಷ್ಮಿನರಸಿಂಹಸ್ವಾಮಿ ಭಕ್ತರು ಕೆಂಚಣ್ಣ-ಕರಿಯಣ್ಣರ ಮುಂದೆ ವಿಷ್ಣುವಿನ ನಾಮಸ್ಮರಣೆ ಮತ್ತು ಗುಣಗಾನ ಮಾಡುತ್ತಾ ಇವರನ್ನು ಕೆಣಕುತ್ತಾರೆ. ವಿಷ್ಣುವಿನ ನಾಮಸ್ಮರಣೆ ಸಹಿಸದ ಈ ಕರಿಯಣ್ಣ ಮತ್ತು ಕೆಂಚಣ್ಣ ಭಕ್ತರ ಮೇಲೆ ಕೋಪಗೊಂಡು ಅವರೆಡೆಗೆ ನುಗ್ಗುತ್ತಾರೆ.
ಕೋಪಗೊಂಡ ಕರಿಯಣ್ಣ ಕೆಂಚಣ್ಣರನ್ನು ಸಮಾಧಾನ ಮಾಡಲು ಇತರರು ಅವರ ಬಾಯಿಗೆ ಬಾಳೆ ಹಣ್ಣಿನ, ಹಲಸಿನ ಹಣ್ಣಿನಿಂದ ತಯಾರಿಸಿದ ರಸಾಯನವನ್ನು ತಿನ್ನಿಸುತ್ತಾರೆ. ಆವೇಶಕ್ಕೆ ಒಳಗಾದ ಈ ಭೂತಗಳು ಆ ಸಂದರ್ಭದಲ್ಲಿ ಏನು ಕೊಟ್ಟರೂ ತಿನ್ನುತ್ತಾರೆ ಎಂಬುದು ಜಾನಪದರ ನಂಬಿಕೆ. ಕೆಲವು ಗ್ರಾಮಗಳಲ್ಲಿ ನಡೆಯುವ ಈ ಹಬ್ಬದಲ್ಲಿ ಕರಿಯಣ್ಣ ಮತ್ತು ಕೆಂಚಣ್ಣರ ಬಾಯಿಗೆ ಕುರಿ-ಕೋಳಿಗಳನ್ನು ನೀಡುತ್ತಾರೆ. ಇವುಗಳ ರಕ್ತ ಹೀರುವುದರೊಂದಿಗೆ ಕರಿಯಣ್ಣ-ಕೆಂಚಣ್ಣ ಶಾಂತರಾಗುತಾರೆ ಎನ್ನುವುದು ಈ ಭಾಗದ ಭಕ್ತರ ನಂಬಿಕೆ.
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…