ಇಂದು ತೂಬಗೆರೆ ಗ್ರಾಮದಲ್ಲಿ 600 ವರ್ಷಗಳ ಇತಿಹಾಸದ ಭೂತ ನೆರಿಗೆ ಆಚರಣೆ

ತಾಲೂಕಿನ ತೂಬಗೆರೆ ಗ್ರಾಮದಲ್ಲಿ 600 ವರ್ಷಗಳಿಂದ ಆಚರಿಸಿಕೊಂಡು ಬಂದಿರುವ ಪಾರಂಪರಿಕ ಜನಪದ ಹಬ್ಬವಾದ ಭೂತ ನೆರಿಗೆ ಆಚರಣೆ ಜೂನ್ 30(ಇಂದು) ಸಂಜೆ 4 ಗಂಟೆಗೆ ನಡೆಯಲಿದೆ.

ಕರಿಯಣ್ಣ – ಕೆಂಚಣ್ಣರ ವೇಷಧಾರಿಯಾದವರ ಮೇಲೆ ಭೂತ ಆಹ್ವಾನಿಸಿ, ಆರ್ಭಟಿಸುತ್ತವೆ. ಈ ವೇಳೆ, ಇವರ ಹಸಿವು ತಣಿಸುವ ಕೆಲಸ ಆಗುತ್ತದೆ. ವೇಷಧಾರಿಗಳು ಮನೆಗೆ ಬಂದರೆ ಮನೆಯಲ್ಲಿನ ದೆವ್ವ ಪೀಡೆ ಪಿಶಾಚಿಗಳು ಓಡಿ ಹೋಗುತ್ತವೆ ಎಂಬ ನಂಬಿಕೆಯೂ ಇದೆ.

ಪ್ರತಿವರ್ಷದಂತೆ ಈ ವರ್ಷವೂ ಸಹ ಆಷಾಡ ಮಾಸದ ಏಕಾದಶಿಯಾದ ಮಾರನೇ ದಿನವಾದ ದ್ವಾದಶಿಯಂದು ಭೂತ ನೆರಿಗೆ ಹಬ್ಬವನ್ನು ಆಚರಿಸಲು ಸಜ್ಜಾಗಿದೆ.

ವಿಷ್ಣುವಿನ ದ್ವಾರಪಾಲಕರಾದ ಜಯ-ವಿಜಯರು ಶಾಪಕ್ಕೆ ಗುರಿಯಾಗಿ ಕಲಿಯುಗದಲ್ಲಿ ಕರಿಯಣ್ಣ ಕೆಂಚಣ್ಣರಾಗಿ ಭೂಲೋಕಕ್ಕೆ ಬರುತ್ತಾರೆ ಎಂಬ ಐತಿಹಾಸಿಕ ಹಿನ್ನೆಲೆ ಇದೆ.
ಸುಮಾರು 600 ವರ್ಷಗಳ ಇತಿಹಾಸವಿರುವ ಈ ಭೂತನೆರಿಗೆ ಹಬ್ಬ ಇಂದಿಗೂ ಸಹ ತೂಬಗೆರೆ ಹಾಗೂ ಕಲ್ಲುಕೋಟೆ ಗ್ರಾಮದಲ್ಲಿ ನಡೆದುಕೊಂಡು ಬರುತ್ತಿದೆ.

ಭೂತನೆರಿಗೆ ಹಬ್ಬದಲ್ಲಿ ಕರಿಯಣ್ಣ ಮತ್ತು ಕೆಂಚಣ್ಣ ವೇಷಧಾರಿಗಳು ಒಂದು ಕೈಯಲ್ಲಿ ಭೂತದ ಮುಖ ಹೋಲುವ ವರ್ತುಲಾಕಾರದ ನೆರಿಗೆ ಹಿಡಿದಿರುತ್ತಾರೆ. ಮತ್ತೊಂದು ಕೈಯಲ್ಲಿ ಕತ್ತಿ ಹಿಡಿದಿರುತ್ತಾರೆ. ಲಕ್ಷ್ಮಿನರಸಿಂಹಸ್ವಾಮಿ ಭಕ್ತರು ಕೆಂಚಣ್ಣ-ಕರಿಯಣ್ಣರ ಮುಂದೆ ವಿಷ್ಣುವಿನ ನಾಮಸ್ಮರಣೆ ಮತ್ತು ಗುಣಗಾನ ಮಾಡುತ್ತಾ ಇವರನ್ನು ಕೆಣಕುತ್ತಾರೆ. ವಿಷ್ಣುವಿನ ನಾಮಸ್ಮರಣೆ ಸಹಿಸದ ಈ ಕರಿಯಣ್ಣ ಮತ್ತು ಕೆಂಚಣ್ಣ ಭಕ್ತರ ಮೇಲೆ ಕೋಪಗೊಂಡು ಅವರೆಡೆಗೆ ನುಗ್ಗುತ್ತಾರೆ.

ಕೋಪಗೊಂಡ ಕರಿಯಣ್ಣ ಕೆಂಚಣ್ಣರನ್ನು ಸಮಾಧಾನ ಮಾಡಲು ಇತರರು ಅವರ ಬಾಯಿಗೆ ಬಾಳೆ ಹಣ್ಣಿನ, ಹಲಸಿನ ಹಣ್ಣಿನಿಂದ ತಯಾರಿಸಿದ ರಸಾಯನವನ್ನು ತಿನ್ನಿಸುತ್ತಾರೆ. ಆವೇಶಕ್ಕೆ ಒಳಗಾದ ಈ ಭೂತಗಳು ಆ ಸಂದರ್ಭದಲ್ಲಿ ಏನು ಕೊಟ್ಟರೂ ತಿನ್ನುತ್ತಾರೆ ಎಂಬುದು ಜಾನಪದರ ನಂಬಿಕೆ. ಕೆಲವು ಗ್ರಾಮಗಳಲ್ಲಿ ನಡೆಯುವ ಈ ಹಬ್ಬದಲ್ಲಿ ಕರಿಯಣ್ಣ ಮತ್ತು ಕೆಂಚಣ್ಣರ ಬಾಯಿಗೆ ಕುರಿ-ಕೋಳಿಗಳನ್ನು ನೀಡುತ್ತಾರೆ. ಇವುಗಳ ರಕ್ತ ಹೀರುವುದರೊಂದಿಗೆ ಕರಿಯಣ್ಣ-ಕೆಂಚಣ್ಣ ಶಾಂತರಾಗುತಾರೆ ಎನ್ನುವುದು ಈ ಭಾಗದ ಭಕ್ತರ ನಂಬಿಕೆ.

Ramesh Babu

Journalist

Recent Posts

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

4 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

15 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

24 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

2 days ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

2 days ago