ಇಂದು ನಾಡಿನೆಲ್ಲೆಡೆ ಶ್ರೀ ರಾಮನವಮಿ ಸಂಭ್ರಮ ಸಡಗರ. ಶ್ರೀ ರಾಮನವಮಿ ಅಂಗವಾಗಿ ಶ್ರೀರಾಮ ಹಾಗೂ ಆಂಜನೇಯ ದೇಗುಲಗಳು ಸೇರಿದಂತೆ ವಿವಿದೆಡೆಗಳಲ್ಲಿ ಭಾನುವಾರ ಸಂಭ್ರಮ, ಸಡಗರ ಹಾಗೂ ಶ್ರದ್ಧ ಭಕ್ತಿಯಿಂದ ಪೂಜೆ ಪುನಸ್ಕಾರಗಳು, ಎಲ್ಲೆಲ್ಲೂ ಶ್ರೀ ರಾಮನಾಮಗಳು ಮೊಳಗಿದವು.
ಗ್ರಾಮೀಣ ಪ್ರದೇಶಗಳಲ್ಲಿರುವ ಶ್ರೀ ರಾಮ ಆಂಜನೇಯ ದೇಗುಲಗಳಿಗೆ ನವಮಿ ಉತ್ಸವ ಅಂಗವಾಗಿ ದೇವಸ್ಥಾನಗಳಿಗೆ ಸುಣ್ಣ ಬಣ್ಣಗಳಿಂದ ಹಾಗೂ ಹೂವು, ತಳಿರು ತೋರಣ, ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ರಾಮ ಮಹಿಮೆ ಸಾರುವ ಭಕ್ತಿ ಪ್ರಧಾನ ಗೀತೆಗಳು ಎಲ್ಲೆಡೆ ಮೊಳಗಿದವು.
ಮಹಿಳೆಯರು, ಮಕ್ಕಳು, ವೃದ್ಧರು ಸೇರಿದಂತೆ ಎಲ್ಲರೂ ರಾಮನ ಶ್ರೀರಾಮ ಆಂಜನೇಯನ ದೇವರಿಗೆ ಭಕ್ತಿ ಪರವಶರಾದರು.
ದಿಮಘಟ್ಟನಹಳ್ಳಿ ಕುಟುಂಬದವರಿಂದ ಅರಳು ಮಲ್ಲಿಗೆ ಗೇಟ್ ಬಳಿ ಇರುವ ಶ್ರೀ ಪ್ರಸನ್ನಾಂಜನೇಯ ದೇವಸ್ಥಾನದಲ್ಲಿ ಸೌತೆಕಾಯಿ, ಕ್ಯಾರೆಟ್, ಕೊತ್ತಂಬರಿ ಸೊಪ್ಪು, ಹೆಸರು ಬೇಳೆ ಗೆಡ್ಡೆಕೋಸುಗಳಿಂದ ಗಣಪತಿ ಚಿತ್ರ ಬಿಡಿಸಿ ಅಲಂಕಾರ ಮಾಡಲಾಗಿತ್ತು. ಈ ಚಿತ್ರಭಕ್ತರ ಕಣ್ಮನ ಸೆಳೆಯಿತು.
ಹೊಸ ಹೋರಾಟಗಾರರು ಸೃಷ್ಟಿಯಾಗಬೇಕಿದೆ, ಹಳೆಯ ಹೋರಾಟಗಾರರು ಮರುಹುಟ್ಟು ಪಡೆಯಬೇಕಿದೆ, ಸಮಕಾಲೀನ ಹೋರಾಟಗಾರರು ಹೋರಾಟದ ಮಾರ್ಗಗಳನ್ನು ಪುನರ್ ರೂಪಿಸಿಕೊಳ್ಳಬೇಕಿದೆ...... 1995/2000 ಇಸವಿಯ…
ದೊಡ್ಡಬಳ್ಳಾಪುರ ತಾಲೂಕಿನ ತಿರುಮಗೊಂಡನಹಳ್ಳಿ ಗ್ರಾಮದ ಮೂಲಕ ಹಾದುಹೋಗುವ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಸ್ಥನ ರಸ್ತೆಗೆ ಅಡ್ಡಲಾಗಿ ರೈಲು ಹಳಿ ಹಾದುಹೋಗಿದ್ದು,…
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಉತ್ತೇಜಿಸುವ ಹಾಗು ಸಾರ್ವಜನಿಕ ದಾಖಲೆಗಳನ್ನು ಮುಕ್ತವಾಗಿ ಜನರ ಮುಂದೆ ಇಡುವುದು ಮಾಹಿತಿ…
ಧರ್ಮಸ್ಥಳ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ವಿ.ಸೋಮಣ್ಣ ಪ್ರತಿಕ್ರಿಯೆ ನೀಡಿ, ಧರ್ಮಸ್ಥಳ ವಿಶ್ವದಲ್ಲೇ ಪವಿತ್ರವಾದ ಸ್ಥಳ. ಅವಷೇಶ ಮತ್ತೊಂದು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ…
ಮೈಸೂರಿನ ಕೆಆರ್ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು…