ಇಂದು ನಾಡಿನೆಲ್ಲೆಡೆ ಶ್ರೀ ರಾಮನವಮಿ ಸಂಭ್ರಮ‌, ಸಡಗರ: ದೇವಾಲಯಗಳಲ್ಲಿ ವಿಶೇಷ ಪೂಜೆ: ಭಕ್ತರಿಗೆ ಪಾನಕ, ಮಜ್ಜಿಗೆ, ಕೋಸಂಬರಿ ವಿತರಣೆ

ಇಂದು ನಾಡಿನೆಲ್ಲೆಡೆ ಶ್ರೀ ರಾಮನವಮಿ ಸಂಭ್ರಮ‌ ಸಡಗರ. ಶ್ರೀ ರಾಮನವಮಿ ಅಂಗವಾಗಿ ಶ್ರೀರಾಮ ಹಾಗೂ ಆಂಜನೇಯ ದೇಗುಲಗಳು ಸೇರಿದಂತೆ ವಿವಿದೆಡೆಗಳಲ್ಲಿ ಭಾನುವಾರ ಸಂಭ್ರಮ, ಸಡಗರ ಹಾಗೂ ಶ್ರದ್ಧ ಭಕ್ತಿಯಿಂದ ಪೂಜೆ ಪುನಸ್ಕಾರಗಳು, ಎಲ್ಲೆಲ್ಲೂ ಶ್ರೀ ರಾಮನಾಮಗಳು ಮೊಳಗಿದವು.

ತಾಲೂಕಿನ ಶ್ರೀರಾಮ ಹಾಗೂ ಆಂಜನೇಯಸ್ವಾಮಿ ದೇವಾಲಯಗಳನ್ನು ವಿವಿಧ ಬಗೆಯ ಹೂಗಳಿಂದ ಅಲಂಕರಿಸಿ, ಮಹಾಮಂಗಳಾರತಿ ಮಾಡಲಾಯಿತು. ದೇವರಿಗೆ ಬೆಳಗ್ಗೆಯಿಂದಲೇ ಅಭಿಷೇಕಗಳು ವಿವಿಧ ಪೂಜೆಗಳನ್ನು ನೆರವೇರಿಸಲಾಯಿತು. ಇಂದು ಮುಂಜಾನೆಯಿಂದಲೇ ಸಹಸ್ರಾರು ಭಕ್ತರು ದೇವಾಲಯಗಳಿಗೆ ಆಗಮಿಸಿ ದೇವರ ದರ್ಶನ ಪಡೆದು, ಪಾನಕ, ಮಜ್ಜಿಗೆ, ಕೋಸಂಬರಿ ತಿಂದು ದೇವರ ಕೃಪೆಗೆ ಪಾತ್ರರಾದರು.

ಗ್ರಾಮೀಣ ಪ್ರದೇಶಗಳಲ್ಲಿರುವ ಶ್ರೀ ರಾಮ ಆಂಜನೇಯ ದೇಗುಲಗಳಿಗೆ ನವಮಿ ಉತ್ಸವ ಅಂಗವಾಗಿ ದೇವಸ್ಥಾನಗಳಿಗೆ ಸುಣ್ಣ ಬಣ್ಣಗಳಿಂದ ಹಾಗೂ ಹೂವು, ತಳಿರು ತೋರಣ, ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ರಾಮ ಮಹಿಮೆ ಸಾರುವ ಭಕ್ತಿ ಪ್ರಧಾನ ಗೀತೆಗಳು ಎಲ್ಲೆಡೆ ಮೊಳಗಿದವು.

ಮಹಿಳೆಯರು, ಮಕ್ಕಳು, ವೃದ್ಧರು ಸೇರಿದಂತೆ ಎಲ್ಲರೂ ರಾಮನ ಶ್ರೀರಾಮ ಆಂಜನೇಯನ ದೇವರಿಗೆ ಭಕ್ತಿ ಪರವಶರಾದರು.

ದಿಮಘಟ್ಟನಹಳ್ಳಿ ಕುಟುಂಬದವರಿಂದ ಅರಳು ಮಲ್ಲಿಗೆ ಗೇಟ್ ಬಳಿ ಇರುವ ಶ್ರೀ ಪ್ರಸನ್ನಾಂಜನೇಯ ದೇವಸ್ಥಾನದಲ್ಲಿ ಸೌತೆಕಾಯಿ, ಕ್ಯಾರೆಟ್, ಕೊತ್ತಂಬರಿ ಸೊಪ್ಪು, ಹೆಸರು ಬೇಳೆ ಗೆಡ್ಡೆಕೋಸುಗಳಿಂದ ಗಣಪತಿ ಚಿತ್ರ ಬಿಡಿಸಿ ಅಲಂಕಾರ ಮಾಡಲಾಗಿತ್ತು. ಈ ಚಿತ್ರ‌ಭಕ್ತರ ಕಣ್ಮನ ಸೆಳೆಯಿತು.

Ramesh Babu

Journalist

Recent Posts

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

4 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

6 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

8 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

11 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

22 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

23 hours ago