ಇಂದು ನಾಡಿನೆಲ್ಲೆಡೆ ಶ್ರೀ ರಾಮನವಮಿ ಸಂಭ್ರಮ ಸಡಗರ. ಶ್ರೀ ರಾಮನವಮಿ ಅಂಗವಾಗಿ ಶ್ರೀರಾಮ ಹಾಗೂ ಆಂಜನೇಯ ದೇಗುಲಗಳು ಸೇರಿದಂತೆ ವಿವಿದೆಡೆಗಳಲ್ಲಿ ಭಾನುವಾರ ಸಂಭ್ರಮ, ಸಡಗರ ಹಾಗೂ ಶ್ರದ್ಧ ಭಕ್ತಿಯಿಂದ ಪೂಜೆ ಪುನಸ್ಕಾರಗಳು, ಎಲ್ಲೆಲ್ಲೂ ಶ್ರೀ ರಾಮನಾಮಗಳು ಮೊಳಗಿದವು.
ಗ್ರಾಮೀಣ ಪ್ರದೇಶಗಳಲ್ಲಿರುವ ಶ್ರೀ ರಾಮ ಆಂಜನೇಯ ದೇಗುಲಗಳಿಗೆ ನವಮಿ ಉತ್ಸವ ಅಂಗವಾಗಿ ದೇವಸ್ಥಾನಗಳಿಗೆ ಸುಣ್ಣ ಬಣ್ಣಗಳಿಂದ ಹಾಗೂ ಹೂವು, ತಳಿರು ತೋರಣ, ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ರಾಮ ಮಹಿಮೆ ಸಾರುವ ಭಕ್ತಿ ಪ್ರಧಾನ ಗೀತೆಗಳು ಎಲ್ಲೆಡೆ ಮೊಳಗಿದವು.
ಮಹಿಳೆಯರು, ಮಕ್ಕಳು, ವೃದ್ಧರು ಸೇರಿದಂತೆ ಎಲ್ಲರೂ ರಾಮನ ಶ್ರೀರಾಮ ಆಂಜನೇಯನ ದೇವರಿಗೆ ಭಕ್ತಿ ಪರವಶರಾದರು.
ದಿಮಘಟ್ಟನಹಳ್ಳಿ ಕುಟುಂಬದವರಿಂದ ಅರಳು ಮಲ್ಲಿಗೆ ಗೇಟ್ ಬಳಿ ಇರುವ ಶ್ರೀ ಪ್ರಸನ್ನಾಂಜನೇಯ ದೇವಸ್ಥಾನದಲ್ಲಿ ಸೌತೆಕಾಯಿ, ಕ್ಯಾರೆಟ್, ಕೊತ್ತಂಬರಿ ಸೊಪ್ಪು, ಹೆಸರು ಬೇಳೆ ಗೆಡ್ಡೆಕೋಸುಗಳಿಂದ ಗಣಪತಿ ಚಿತ್ರ ಬಿಡಿಸಿ ಅಲಂಕಾರ ಮಾಡಲಾಗಿತ್ತು. ಈ ಚಿತ್ರಭಕ್ತರ ಕಣ್ಮನ ಸೆಳೆಯಿತು.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…