ಇಂದು ನಾಡಿನೆಲ್ಲೆಡೆ ಶ್ರೀ ರಾಮನವಮಿ ಸಂಭ್ರಮ‌, ಸಡಗರ: ದೇವಾಲಯಗಳಲ್ಲಿ ವಿಶೇಷ ಪೂಜೆ: ಭಕ್ತರಿಗೆ ಪಾನಕ, ಮಜ್ಜಿಗೆ, ಕೋಸಂಬರಿ ವಿತರಣೆ

ಇಂದು ನಾಡಿನೆಲ್ಲೆಡೆ ಶ್ರೀ ರಾಮನವಮಿ ಸಂಭ್ರಮ‌ ಸಡಗರ. ಶ್ರೀ ರಾಮನವಮಿ ಅಂಗವಾಗಿ ಶ್ರೀರಾಮ ಹಾಗೂ ಆಂಜನೇಯ ದೇಗುಲಗಳು ಸೇರಿದಂತೆ ವಿವಿದೆಡೆಗಳಲ್ಲಿ ಭಾನುವಾರ ಸಂಭ್ರಮ, ಸಡಗರ ಹಾಗೂ ಶ್ರದ್ಧ ಭಕ್ತಿಯಿಂದ ಪೂಜೆ ಪುನಸ್ಕಾರಗಳು, ಎಲ್ಲೆಲ್ಲೂ ಶ್ರೀ ರಾಮನಾಮಗಳು ಮೊಳಗಿದವು.

ತಾಲೂಕಿನ ಶ್ರೀರಾಮ ಹಾಗೂ ಆಂಜನೇಯಸ್ವಾಮಿ ದೇವಾಲಯಗಳನ್ನು ವಿವಿಧ ಬಗೆಯ ಹೂಗಳಿಂದ ಅಲಂಕರಿಸಿ, ಮಹಾಮಂಗಳಾರತಿ ಮಾಡಲಾಯಿತು. ದೇವರಿಗೆ ಬೆಳಗ್ಗೆಯಿಂದಲೇ ಅಭಿಷೇಕಗಳು ವಿವಿಧ ಪೂಜೆಗಳನ್ನು ನೆರವೇರಿಸಲಾಯಿತು. ಇಂದು ಮುಂಜಾನೆಯಿಂದಲೇ ಸಹಸ್ರಾರು ಭಕ್ತರು ದೇವಾಲಯಗಳಿಗೆ ಆಗಮಿಸಿ ದೇವರ ದರ್ಶನ ಪಡೆದು, ಪಾನಕ, ಮಜ್ಜಿಗೆ, ಕೋಸಂಬರಿ ತಿಂದು ದೇವರ ಕೃಪೆಗೆ ಪಾತ್ರರಾದರು.

ಗ್ರಾಮೀಣ ಪ್ರದೇಶಗಳಲ್ಲಿರುವ ಶ್ರೀ ರಾಮ ಆಂಜನೇಯ ದೇಗುಲಗಳಿಗೆ ನವಮಿ ಉತ್ಸವ ಅಂಗವಾಗಿ ದೇವಸ್ಥಾನಗಳಿಗೆ ಸುಣ್ಣ ಬಣ್ಣಗಳಿಂದ ಹಾಗೂ ಹೂವು, ತಳಿರು ತೋರಣ, ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ರಾಮ ಮಹಿಮೆ ಸಾರುವ ಭಕ್ತಿ ಪ್ರಧಾನ ಗೀತೆಗಳು ಎಲ್ಲೆಡೆ ಮೊಳಗಿದವು.

ಮಹಿಳೆಯರು, ಮಕ್ಕಳು, ವೃದ್ಧರು ಸೇರಿದಂತೆ ಎಲ್ಲರೂ ರಾಮನ ಶ್ರೀರಾಮ ಆಂಜನೇಯನ ದೇವರಿಗೆ ಭಕ್ತಿ ಪರವಶರಾದರು.

ದಿಮಘಟ್ಟನಹಳ್ಳಿ ಕುಟುಂಬದವರಿಂದ ಅರಳು ಮಲ್ಲಿಗೆ ಗೇಟ್ ಬಳಿ ಇರುವ ಶ್ರೀ ಪ್ರಸನ್ನಾಂಜನೇಯ ದೇವಸ್ಥಾನದಲ್ಲಿ ಸೌತೆಕಾಯಿ, ಕ್ಯಾರೆಟ್, ಕೊತ್ತಂಬರಿ ಸೊಪ್ಪು, ಹೆಸರು ಬೇಳೆ ಗೆಡ್ಡೆಕೋಸುಗಳಿಂದ ಗಣಪತಿ ಚಿತ್ರ ಬಿಡಿಸಿ ಅಲಂಕಾರ ಮಾಡಲಾಗಿತ್ತು. ಈ ಚಿತ್ರ‌ಭಕ್ತರ ಕಣ್ಮನ ಸೆಳೆಯಿತು.

Ramesh Babu

Journalist

Recent Posts

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

37 minutes ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

6 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

18 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

18 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

19 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

22 hours ago