ಇಂದು ನಾಡಿನೆಲ್ಲೆಡೆ ಶ್ರೀ ರಾಮನವಮಿ ಸಂಭ್ರಮ‌, ಸಡಗರ: ದೇವಾಲಯಗಳಲ್ಲಿ ವಿಶೇಷ ಪೂಜೆ: ಭಕ್ತರಿಗೆ ಪಾನಕ, ಮಜ್ಜಿಗೆ, ಕೋಸಂಬರಿ ವಿತರಣೆ

ಇಂದು ನಾಡಿನೆಲ್ಲೆಡೆ ಶ್ರೀ ರಾಮನವಮಿ ಸಂಭ್ರಮ‌ ಸಡಗರ. ಶ್ರೀ ರಾಮನವಮಿ ಅಂಗವಾಗಿ ಶ್ರೀರಾಮ ಹಾಗೂ ಆಂಜನೇಯ ದೇಗುಲಗಳು ಸೇರಿದಂತೆ ವಿವಿದೆಡೆಗಳಲ್ಲಿ ಭಾನುವಾರ ಸಂಭ್ರಮ, ಸಡಗರ ಹಾಗೂ ಶ್ರದ್ಧ ಭಕ್ತಿಯಿಂದ ಪೂಜೆ ಪುನಸ್ಕಾರಗಳು, ಎಲ್ಲೆಲ್ಲೂ ಶ್ರೀ ರಾಮನಾಮಗಳು ಮೊಳಗಿದವು.

ತಾಲೂಕಿನ ಶ್ರೀರಾಮ ಹಾಗೂ ಆಂಜನೇಯಸ್ವಾಮಿ ದೇವಾಲಯಗಳನ್ನು ವಿವಿಧ ಬಗೆಯ ಹೂಗಳಿಂದ ಅಲಂಕರಿಸಿ, ಮಹಾಮಂಗಳಾರತಿ ಮಾಡಲಾಯಿತು. ದೇವರಿಗೆ ಬೆಳಗ್ಗೆಯಿಂದಲೇ ಅಭಿಷೇಕಗಳು ವಿವಿಧ ಪೂಜೆಗಳನ್ನು ನೆರವೇರಿಸಲಾಯಿತು. ಇಂದು ಮುಂಜಾನೆಯಿಂದಲೇ ಸಹಸ್ರಾರು ಭಕ್ತರು ದೇವಾಲಯಗಳಿಗೆ ಆಗಮಿಸಿ ದೇವರ ದರ್ಶನ ಪಡೆದು, ಪಾನಕ, ಮಜ್ಜಿಗೆ, ಕೋಸಂಬರಿ ತಿಂದು ದೇವರ ಕೃಪೆಗೆ ಪಾತ್ರರಾದರು.

ಗ್ರಾಮೀಣ ಪ್ರದೇಶಗಳಲ್ಲಿರುವ ಶ್ರೀ ರಾಮ ಆಂಜನೇಯ ದೇಗುಲಗಳಿಗೆ ನವಮಿ ಉತ್ಸವ ಅಂಗವಾಗಿ ದೇವಸ್ಥಾನಗಳಿಗೆ ಸುಣ್ಣ ಬಣ್ಣಗಳಿಂದ ಹಾಗೂ ಹೂವು, ತಳಿರು ತೋರಣ, ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ರಾಮ ಮಹಿಮೆ ಸಾರುವ ಭಕ್ತಿ ಪ್ರಧಾನ ಗೀತೆಗಳು ಎಲ್ಲೆಡೆ ಮೊಳಗಿದವು.

ಮಹಿಳೆಯರು, ಮಕ್ಕಳು, ವೃದ್ಧರು ಸೇರಿದಂತೆ ಎಲ್ಲರೂ ರಾಮನ ಶ್ರೀರಾಮ ಆಂಜನೇಯನ ದೇವರಿಗೆ ಭಕ್ತಿ ಪರವಶರಾದರು.

ದಿಮಘಟ್ಟನಹಳ್ಳಿ ಕುಟುಂಬದವರಿಂದ ಅರಳು ಮಲ್ಲಿಗೆ ಗೇಟ್ ಬಳಿ ಇರುವ ಶ್ರೀ ಪ್ರಸನ್ನಾಂಜನೇಯ ದೇವಸ್ಥಾನದಲ್ಲಿ ಸೌತೆಕಾಯಿ, ಕ್ಯಾರೆಟ್, ಕೊತ್ತಂಬರಿ ಸೊಪ್ಪು, ಹೆಸರು ಬೇಳೆ ಗೆಡ್ಡೆಕೋಸುಗಳಿಂದ ಗಣಪತಿ ಚಿತ್ರ ಬಿಡಿಸಿ ಅಲಂಕಾರ ಮಾಡಲಾಗಿತ್ತು. ಈ ಚಿತ್ರ‌ಭಕ್ತರ ಕಣ್ಮನ ಸೆಳೆಯಿತು.

Ramesh Babu

Journalist

Recent Posts

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

9 minutes ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

12 hours ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

13 hours ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

15 hours ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

18 hours ago

ಖಾತೆ ಹಂಚಿಕೆ ಕುರಿತು ಸಚಿವ ಕೆ.ಎಚ್. ಮುನಿಯಪ್ಪ ಅಸಮಾಧಾನ: “ಸಿನಿಯಾರಿಟಿಗೆ ಗೌರವ ಸಿಕ್ಕಿಲ್ಲ”- ಕೆ.ಎಚ್ ಮುನಿಯಪ್ಪ

ದೇವನಹಳ್ಳಿ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರವಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್ ಮುನಿಯಪ್ಪ ಅವರು…

20 hours ago