ಇಂದು ನಾಡಿನೆಲ್ಲೆಡೆ ಶ್ರೀ ರಾಮನವಮಿ ಸಂಭ್ರಮ ಸಡಗರ. ಶ್ರೀ ರಾಮನವಮಿ ಅಂಗವಾಗಿ ಶ್ರೀರಾಮ ಹಾಗೂ ಆಂಜನೇಯ ದೇಗುಲಗಳು ಸೇರಿದಂತೆ ವಿವಿದೆಡೆಗಳಲ್ಲಿ ಭಾನುವಾರ ಸಂಭ್ರಮ, ಸಡಗರ ಹಾಗೂ ಶ್ರದ್ಧ ಭಕ್ತಿಯಿಂದ ಪೂಜೆ ಪುನಸ್ಕಾರಗಳು, ಎಲ್ಲೆಲ್ಲೂ ಶ್ರೀ ರಾಮನಾಮಗಳು ಮೊಳಗಿದವು.
ಗ್ರಾಮೀಣ ಪ್ರದೇಶಗಳಲ್ಲಿರುವ ಶ್ರೀ ರಾಮ ಆಂಜನೇಯ ದೇಗುಲಗಳಿಗೆ ನವಮಿ ಉತ್ಸವ ಅಂಗವಾಗಿ ದೇವಸ್ಥಾನಗಳಿಗೆ ಸುಣ್ಣ ಬಣ್ಣಗಳಿಂದ ಹಾಗೂ ಹೂವು, ತಳಿರು ತೋರಣ, ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ರಾಮ ಮಹಿಮೆ ಸಾರುವ ಭಕ್ತಿ ಪ್ರಧಾನ ಗೀತೆಗಳು ಎಲ್ಲೆಡೆ ಮೊಳಗಿದವು.
ಮಹಿಳೆಯರು, ಮಕ್ಕಳು, ವೃದ್ಧರು ಸೇರಿದಂತೆ ಎಲ್ಲರೂ ರಾಮನ ಶ್ರೀರಾಮ ಆಂಜನೇಯನ ದೇವರಿಗೆ ಭಕ್ತಿ ಪರವಶರಾದರು.
ದಿಮಘಟ್ಟನಹಳ್ಳಿ ಕುಟುಂಬದವರಿಂದ ಅರಳು ಮಲ್ಲಿಗೆ ಗೇಟ್ ಬಳಿ ಇರುವ ಶ್ರೀ ಪ್ರಸನ್ನಾಂಜನೇಯ ದೇವಸ್ಥಾನದಲ್ಲಿ ಸೌತೆಕಾಯಿ, ಕ್ಯಾರೆಟ್, ಕೊತ್ತಂಬರಿ ಸೊಪ್ಪು, ಹೆಸರು ಬೇಳೆ ಗೆಡ್ಡೆಕೋಸುಗಳಿಂದ ಗಣಪತಿ ಚಿತ್ರ ಬಿಡಿಸಿ ಅಲಂಕಾರ ಮಾಡಲಾಗಿತ್ತು. ಈ ಚಿತ್ರಭಕ್ತರ ಕಣ್ಮನ ಸೆಳೆಯಿತು.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…