ಇಂದು ಪ್ರಜಾತಂತ್ರದ ಹಬ್ಬ ಅದ್ಧೂರಿ ಆಚರಣೆ: ಮತದಾನ ದಿನದಂದು ಸಹ ಮುಂದುವರಿದ ಮತದಾನ ಅರಿವು ಕಾರ್ಯಕ್ರಮ: 100% ಮತದಾನಕ್ಕೆ ಜಾಗೃತಿ

ಇಂದು ಕರ್ನಾಟಕ ರಾಜ್ಯದಲ್ಲಿ ಪ್ರಜಾತಂತ್ರದ ಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಬೆಳಗ್ಗೆ 7ರಿಂದ ಆರಂಭವಾದ ಮತದಾನ ಪ್ರಕ್ರಿಯೆ, ಮತದಾರರು ಕಡ್ಡಾಯವಾಗಿ ಮತದಾನ ಮಾಡುವಂತೆ ಸ್ವೀಪ್ ಸಮಿತಿ ವತಿಯಿಂದ ವಿನೂತನವಾಗಿ ಹಲವು ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಇಂದು ಸಹ ಕ್ಷೇತ್ರದಲ್ಲಿ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಕಾರ್ಯಕ್ರಮವನ್ನು ಏರ್ಪಡಿಸಿ ಚುನಾವಣೆ ಯಶಸ್ವಿಗೊಳಿಸುವಂತೆ ಮತದಾರರಲ್ಲಿ ಮನವಿ ಮಾಡಲಾಯಿತು.

ಪ್ರಜಾತಂತ್ರ ಹಬ್ಬವನ್ನು ಸಂಪೂರ್ಣ, ಶಾಂತಿಯುತ, ನ್ಯಾಯಸಮ್ಮತ, ಪಾರದರ್ಶಕವಾಗಿ ಆಚರಿಸಲು ಅವಿರತವಾಗಿ ದುಡಿಯುತ್ತಿರುವ ಅಧಿಕಾರಿಗಳು, ಚುನಾವಣಾ ಸಿಬ್ಬಂದಿ.

ವೃದ್ಧರಿಗೆ, ವಿಶೇಷಚೇತನರಿಗೆ ಮತದಾನ ಕೇಂದ್ರಕ್ಕೆ ಬಂದು ಮತದಾನ ಮಾಡಲು ವಾಹನ ವ್ಯವಸ್ಥೆ, ವೀಲ್ ಚೇರ್ ವ್ಯವಸ್ಥೆ ಒದಗಿಸಿ ಮತದಾನ ಮಾಡಲು ಸಹಕರಿಸುತ್ತಿರುವ ಅಧಿಕಾರಿಗಳು. ಮತದಾರರಿಂದಲೇ ವಿನೂತನವಾಗಿ ಮತದಾನ ಜಾಗೃತಿ ಮೂಡಿಸಲಾಯಿತು.

ಕ್ಷೇತ್ರದ ಮತಗಟ್ಟೆಗಳಿಗೆ ನೋಡಲ್ ಅಧಿಕಾರಿ ಶ್ರೀನಾಥ್ ಗೌಡ, ಸಹಾಯಕ ಚುನಾವಣಾ ಅಧಿಕಾರಿ ಮೋಹನ ಕುಮಾರಿ ಭೇಟಿ ನೀಡಿ ಪರಿಶೀಲನೆ‌ ನಡೆಸಿ ಶಾಂತಿಯುತ ಮತದಾನಕ್ಕೆ ಸಹಕರಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 hour ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

3 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

3 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

3 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

8 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

9 hours ago