ಇಂದು ಪ್ರಜಾತಂತ್ರದ ಹಬ್ಬ ಅದ್ಧೂರಿ ಆಚರಣೆ: ಮತದಾನ ದಿನದಂದು ಸಹ ಮುಂದುವರಿದ ಮತದಾನ ಅರಿವು ಕಾರ್ಯಕ್ರಮ: 100% ಮತದಾನಕ್ಕೆ ಜಾಗೃತಿ

ಇಂದು ಕರ್ನಾಟಕ ರಾಜ್ಯದಲ್ಲಿ ಪ್ರಜಾತಂತ್ರದ ಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಬೆಳಗ್ಗೆ 7ರಿಂದ ಆರಂಭವಾದ ಮತದಾನ ಪ್ರಕ್ರಿಯೆ, ಮತದಾರರು ಕಡ್ಡಾಯವಾಗಿ ಮತದಾನ ಮಾಡುವಂತೆ ಸ್ವೀಪ್ ಸಮಿತಿ ವತಿಯಿಂದ ವಿನೂತನವಾಗಿ ಹಲವು ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಇಂದು ಸಹ ಕ್ಷೇತ್ರದಲ್ಲಿ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಕಾರ್ಯಕ್ರಮವನ್ನು ಏರ್ಪಡಿಸಿ ಚುನಾವಣೆ ಯಶಸ್ವಿಗೊಳಿಸುವಂತೆ ಮತದಾರರಲ್ಲಿ ಮನವಿ ಮಾಡಲಾಯಿತು.

ಪ್ರಜಾತಂತ್ರ ಹಬ್ಬವನ್ನು ಸಂಪೂರ್ಣ, ಶಾಂತಿಯುತ, ನ್ಯಾಯಸಮ್ಮತ, ಪಾರದರ್ಶಕವಾಗಿ ಆಚರಿಸಲು ಅವಿರತವಾಗಿ ದುಡಿಯುತ್ತಿರುವ ಅಧಿಕಾರಿಗಳು, ಚುನಾವಣಾ ಸಿಬ್ಬಂದಿ.

ವೃದ್ಧರಿಗೆ, ವಿಶೇಷಚೇತನರಿಗೆ ಮತದಾನ ಕೇಂದ್ರಕ್ಕೆ ಬಂದು ಮತದಾನ ಮಾಡಲು ವಾಹನ ವ್ಯವಸ್ಥೆ, ವೀಲ್ ಚೇರ್ ವ್ಯವಸ್ಥೆ ಒದಗಿಸಿ ಮತದಾನ ಮಾಡಲು ಸಹಕರಿಸುತ್ತಿರುವ ಅಧಿಕಾರಿಗಳು. ಮತದಾರರಿಂದಲೇ ವಿನೂತನವಾಗಿ ಮತದಾನ ಜಾಗೃತಿ ಮೂಡಿಸಲಾಯಿತು.

ಕ್ಷೇತ್ರದ ಮತಗಟ್ಟೆಗಳಿಗೆ ನೋಡಲ್ ಅಧಿಕಾರಿ ಶ್ರೀನಾಥ್ ಗೌಡ, ಸಹಾಯಕ ಚುನಾವಣಾ ಅಧಿಕಾರಿ ಮೋಹನ ಕುಮಾರಿ ಭೇಟಿ ನೀಡಿ ಪರಿಶೀಲನೆ‌ ನಡೆಸಿ ಶಾಂತಿಯುತ ಮತದಾನಕ್ಕೆ ಸಹಕರಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.

Ramesh Babu

Journalist

Recent Posts

ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…

9 hours ago

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

11 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

14 hours ago

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

1 day ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

1 day ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

1 day ago