ಇಂದು ಪ್ರಜಾತಂತ್ರದ ಹಬ್ಬ ಅದ್ಧೂರಿ ಆಚರಣೆ: ಮತದಾನ ದಿನದಂದು ಸಹ ಮುಂದುವರಿದ ಮತದಾನ ಅರಿವು ಕಾರ್ಯಕ್ರಮ: 100% ಮತದಾನಕ್ಕೆ ಜಾಗೃತಿ

ಇಂದು ಕರ್ನಾಟಕ ರಾಜ್ಯದಲ್ಲಿ ಪ್ರಜಾತಂತ್ರದ ಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಬೆಳಗ್ಗೆ 7ರಿಂದ ಆರಂಭವಾದ ಮತದಾನ ಪ್ರಕ್ರಿಯೆ, ಮತದಾರರು ಕಡ್ಡಾಯವಾಗಿ ಮತದಾನ ಮಾಡುವಂತೆ ಸ್ವೀಪ್ ಸಮಿತಿ ವತಿಯಿಂದ ವಿನೂತನವಾಗಿ ಹಲವು ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಇಂದು ಸಹ ಕ್ಷೇತ್ರದಲ್ಲಿ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಕಾರ್ಯಕ್ರಮವನ್ನು ಏರ್ಪಡಿಸಿ ಚುನಾವಣೆ ಯಶಸ್ವಿಗೊಳಿಸುವಂತೆ ಮತದಾರರಲ್ಲಿ ಮನವಿ ಮಾಡಲಾಯಿತು.

ಪ್ರಜಾತಂತ್ರ ಹಬ್ಬವನ್ನು ಸಂಪೂರ್ಣ, ಶಾಂತಿಯುತ, ನ್ಯಾಯಸಮ್ಮತ, ಪಾರದರ್ಶಕವಾಗಿ ಆಚರಿಸಲು ಅವಿರತವಾಗಿ ದುಡಿಯುತ್ತಿರುವ ಅಧಿಕಾರಿಗಳು, ಚುನಾವಣಾ ಸಿಬ್ಬಂದಿ.

ವೃದ್ಧರಿಗೆ, ವಿಶೇಷಚೇತನರಿಗೆ ಮತದಾನ ಕೇಂದ್ರಕ್ಕೆ ಬಂದು ಮತದಾನ ಮಾಡಲು ವಾಹನ ವ್ಯವಸ್ಥೆ, ವೀಲ್ ಚೇರ್ ವ್ಯವಸ್ಥೆ ಒದಗಿಸಿ ಮತದಾನ ಮಾಡಲು ಸಹಕರಿಸುತ್ತಿರುವ ಅಧಿಕಾರಿಗಳು. ಮತದಾರರಿಂದಲೇ ವಿನೂತನವಾಗಿ ಮತದಾನ ಜಾಗೃತಿ ಮೂಡಿಸಲಾಯಿತು.

ಕ್ಷೇತ್ರದ ಮತಗಟ್ಟೆಗಳಿಗೆ ನೋಡಲ್ ಅಧಿಕಾರಿ ಶ್ರೀನಾಥ್ ಗೌಡ, ಸಹಾಯಕ ಚುನಾವಣಾ ಅಧಿಕಾರಿ ಮೋಹನ ಕುಮಾರಿ ಭೇಟಿ ನೀಡಿ ಪರಿಶೀಲನೆ‌ ನಡೆಸಿ ಶಾಂತಿಯುತ ಮತದಾನಕ್ಕೆ ಸಹಕರಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

21 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

1 day ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago