ಇಂದು ಬೆಳಗ್ಗೆ ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯಕ್ತ ಶಾಕ್….

ಸರ್ಕಾರಿ ಅಧಿಕಾರಿಗಳು ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಬೆಳ್ಳಂಬೆಳಗ್ಗೆ ಕರ್ನಾಟಕ ಲೋಕಾಯಕ್ತ ಶಾಕ್‌ ಕೊಟ್ಟಿದೆ. ಬೆಂಗಳೂರು ಸೇರಿ 10 ಸರ್ಕಾರಿ ಅಧಿಕಾರಿಗಳ ವಿರುದ್ಧ 40 ಕಡೆ ಲೋಕಾಯುಕ್ತ ದಾಳಿ ನಡೆಸಿದೆ.

ತುಮಕೂರು, ಚಿಕ್ಕಮಗಳೂರು, ಮಂಡ್ಯ, ಹಾಸನ, ಕೊಪ್ಪಳ, ಚಾಮರಾಜನಗರ, ಮೈಸೂರು, ಬಳ್ಳಾರಿ, ವಿಜಯನಗರ, ಮಂಗಳೂರಿನಲ್ಲಿಯೂ ಬೆಳ್ಳಂಬೆಳಗ್ಗೆ ಅಧಿಕಾರಿಗಳು ಮನೆಗಳಿಗೆ ಎಂಟ್ರಿ ಕೊಟ್ಟಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿಕೊಂಡಿದ್ದಾರೆ.

ಲೋಕಾಯುಕ್ತ ದಾಳಿಗೊಳಗಾದ ಅಧಿಕಾರಿಗಳು

1.ಬಿ.ರಬಿ, ಅಸಿಸ್ಟೆಂಟ್ ಪ್ರೊಫೆಸರ್ ಬಳ್ಳಾರಿ.

2.ಹನುಮಂತರಾಯಪ್ಪ, ಕೆಆರ್ ಐಡಿಎಲ್ ತುಮಕೂರು.

3.ಹರ್ಷ, ಲೋಕೋಪಯೋಗಿ ಇಲಾಖೆ  ಮಂಡ್ಯ.

4. ಪಿ.ರವಿ, ರೂರಲ್ ಡೆವಲಪ್ಮೆಂಟ್ ಇಲಾಖೆ ಚಾಮರಾಜನಗರ.

5. ಜಗನ್ನಾಥ್ ಜಿ, ಆಹಾರ ನಿರೀಕ್ಷಕರು, ಹಾಸನ.

6.ಶಾಂತಕುಮಾರ್ ಹೆಚ್ ಎಮ್, ಮೆಸ್ಕಾಂ ಮಂಗಳೂರು

7.ರೇಣುಕಮ್ಮ, ಅರಣ್ಯ ಇಲಾಖೆ ಕೊಪ್ಪಳ.

8.ಯಗ್ನೇಂದ್ರ, ಮುಡಾ ಮೈಸೂರು.

9.ಭಾಸ್ಕರ್, ವಿದ್ಯುತ್ ಇಲಾಖೆ ವಿಜಯನಗರ.

10.ನೇತ್ರಾವತಿ, ಸಿಟಿಓ ಚಿಕ್ಕಮಗಳೂರು.

ಬಳ್ಳಾರಿಯಲ್ಲಿ ಮೆಗಾ ರೈಡ್..

ಸಂಡೂರಿನ ಕೃಷ್ಣದೇವರಾಯ ವಿವಿಯ ಅಧಿಕಾರಿಯಾದ ಡಾ.ರವಿ ಮನೆ,ಕಚೇರಿಯಲ್ಲಿಯೂ ಲೋಕಾಯಕ್ತ ಎಂಟ್ರಿ ಕೊಟಿದ್ದಾರೆ. ಸಂಡೂರಿನ ಪಿಜಿ ಸೆಂಟರ್ ಕಚೇರಿ,ಗಾಂಧಿನಗರದ ಮನೆ, ದಾವಣಗೆರೆಯಲ್ಲಿನ ಮನೆಯ ಮೇಲೆ ,ಬಳ್ಳಾರಿಯ ಲೋಕಯುಕ್ತ ಎಸ್ಪಿ ಸಿದ್ದರಾಜುರವರ ನೇತೃತ್ವದಲ್ಲಿ ದಾಳಿ ನಡೆಯುತ್ತಿದೆ.

ತುಮಕೂರಿನ ಇಂಜಿನಿಯರ್ ಅಧಿಕಾರಿ ಹನುಮಂತರಾಯಪ್ಪ

ಕೆಆರ್​ಡಿಎಲ್ ಇಂಜಿನಿಯರ್ ಹನುಮಂತರಾಯಪ್ಪ ವಿರುದ್ಧವೂ ಅಕ್ರಮ ಆಸ್ತಿ ಗಳಿಕೆಯ ಆರೋಪ ಕೇಳಿ ಬಂದಿತ್ತು. ತುಮಕೂರಿನ ಶಿರಾ ಗೇಟ್‌ ನ 80 ಫೀಟ್ ಬಳಿಯಿರುವ ನಿವಾಸ,ಮಿಡಿಗೇಶಿಯ ಫಾರಂ ಹೌಸ್ ಹಾಗೂ ಕೊರಟಗೆರೆಯ ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳಿಂದ ದಾಖಲೆಗಳ ಪರಿಶೀಲನೆ ಮುಂದುವರಿಯುತ್ತಿದೆ.

ಮಂಡ್ಯದಲ್ಲಿ ಲೋಕಾಯುಕ್ತ ರೈಡ್

ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿರುವ PWD ಇಲಾಖೆಯ ಎಕ್ಸಿಕ್ಯುಟಿವ್ ಇಂಜಿನಿಯರ್ ಹರ್ಷ ಮೇಲೆ ಅಕ್ರಮ ಆಸ್ತಿ ಗಳಿಕೆಯ ಆರೋಪ. ಆರು ಸ್ಥಳಗಳಲ್ಲಿ ಏಕಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಮನೆ, ಕಚೇರಿ, ಕುಟುಂಬಸ್ಥರು, ಸಂಬಂಧಿಕರ ಮನೆ ಮೇಲೆ ದಾಳಿನಡೆಯುತ್ತಿದ್ದು ,ಮಂಡ್ಯ ಲೋಕಾಯುಕ್ತ ಎಸ್ಪಿ ಸಜೀತ್ ನೇತೃತ್ವದಲ್ಲಿ ಪರಿಶೀಲನೆ ನಡೆಯುತ್ತಿದೆ.

ಚಾಮರಾಜನಗರದ ಜಿಲ್ಲೆಯಲ್ಲೂ ಲೋಕಾಯುಕ್ತ ದಾಳಿ

ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯ ಇಂಜಿನಿಯರ್ ಆಗಿರುವ ಪಿ.ರವಿಕುಮಾರ್ ವಿರುದ್ಧ ಲೋಕಾಯುಕ್ತ ದಾಳಿ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಆಲನಹಳ್ಳಿ ಗ್ರಾಮದ ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ.ಚಾಮರಾಜನಗರ,ಮೈಸೂರು ಎರಡು ಕಡೆ ದಾಳಿ ನಡೆದಿದೆ.

ಹಾಸನದಲ್ಲಿ ಐಟಿ ಶಾಕ್!

ಹಾಸನದ ಆಹಾರ ನೀರಿಕ್ಷಕ ಜಗನ್ನಾಥ್ ನಿವಾಸ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.ಜಗನ್ನಾಥ್ ಸಹೋದರ ರಿಯಲ್ ಎಸ್ಟೇಟ್ ಉದ್ಯಮಿ ಕಿರಣ್ ನಿವಾಸ ಮತ್ತು ಕಚೇರಿ ಮೇಲೂ ದಾಳಿ ನಡೆದಿದೆ.

ಲೋಕಾಯುಕ್ತ ಎಸ್​​ಪಿ ಮಲ್ಲಿಕ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ತಿರುಮಲೇಶ್, ಇನ್ಸ್‌ಪೆಕ್ಟರ್‌ಗಳಾದ ಬಾಲು,ಶಿಲ್ಪಾ ನೇತೃತ್ವದ ತಂಡ ದಾಳಿ ನಡೆದಿದೆ.

ಮಂಗಳೂರಿನಲ್ಲಿಯೂ ಪರಿಶೀಲನೆ

ಮಂಗಳೂರಿನ ಅತ್ತಾವರ ವಿಭಾಗದ ಮೆಸ್ಕಾಂ ಇಇ ಶಾಂತಕುಮಾರ್ ನಿವಾಸ ಮತ್ತು ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ಎಂಟ್ರಿ ಕೊಟ್ಟಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.ಶಾಂತಕುಮಾರ್ ಕಳೆದ ಐದಾರು ವರ್ಷಗಳಿಂದ ಮಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

Ramesh Babu

Journalist

Recent Posts

ಇಚ್ಚಾ ಶಕ್ತಿಯ ಕೊರತೆ ಅಥವಾ ಕಪಟ ನಾಟಕ ಅಥವಾ ಸ್ವ ಹಿತಾಸಕ್ತಿ……

ಇಚ್ಚಾ ಶಕ್ತಿಯ ಕೊರತೆ ಅಥವಾ ಕಪಟ ನಾಟಕ ಅಥವಾ ಸ್ವ ಹಿತಾಸಕ್ತಿ...... ಮತದಾರರ ಪಟ್ಟಿ ಪರಿಷ್ಕರಣೆ, ಲೋಕಸಭಾ ಕ್ಷೇತ್ರಗಳ ಪುನರ್…

3 hours ago

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಸೋಲು

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಸೋಲಾಗಿದೆ. ವಿಧೇಯಕ ಅಂಗೀಕಾರವಾಗಲು 326 ಸದಸ್ಯರ ಬೆಂಬಲ‌ ಬೇಕಿತ್ತು.‌ ಒಟ್ಟಾರೆ 489 ಸದಸ್ಯರು ಮತ…

14 hours ago

ಧಾರವಾಡದ ಬಿಜೆಪಿ ಮುಖಂಡ ಯೋಗೀಶ್‌ ಗೌಡ ಹತ್ಯೆ ಪ್ರಕರಣ: ಹಾಲಿ ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ ಪ್ರಕಟ

2016ರಲ್ಲಿ ಧಾರವಾಡದಲ್ಲಿ ಜಿಲ್ಲಾ ಪಂಚಾಯಿತಿಯ ಬಿಜೆಪಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡ ಹತ್ಯೆ ಪ್ರಕರಣದಲ್ಲಿ ದೋಷಿಗಳಾದ ಮಾಜಿ ಸಚಿವ ಹಾಗೂ ಹಾಲಿ…

17 hours ago

ಚಿನ್ನಸ್ವಾಮಿ ಕ್ರೀಡಾಂಗಣದ ಕ್ಯಾಂಟೀನ್ ನೌಕರನ ಬಳಿ 100 ಐಪಿಎಲ್ ಟಿಕೆಟ್ ಪತ್ತೆ

ಚಿನ್ನಸ್ವಾಮಿ ಕ್ರೀಡಾಂಗಣದ ಕ್ಯಾಂಟೀನ್ ನೌಕರನ ಬಳಿ 100 ಐಪಿಎಲ್ ಟಿಕೆಟ್ ಪತ್ತೆಯಾಗಿದೆ. ಕ್ಯಾಂಟೀನ್ ನೌಕರ 100ಕ್ಕೂ ಹೆಚ್ಚು ಐಪಿಎಲ್ ಟಿಕೆಟ್‌ಗಳನ್ನು…

20 hours ago

ಲವ್ ಜಿಹಾದ್ ಮತ್ತೊಮ್ಮೆ ಇಡೀ ದೇಶಾದ್ಯಂತ ಮಾಧ್ಯಮಗಳಲ್ಲಿ ಚರ್ಚೆ

ಲವ್ ಜಿಹಾದ್....... ಪ್ರೀತಿ - ಪ್ರೇಮದ ಧರ್ಮ ಯುದ್ಧ..... ಒಂದು ಆತ್ಮಾವಲೋಕನ,..... ನಿಜ ಪ್ರೀತಿಯನ್ನು ಅನುಮಾನದಿಂದ ನೋಡುವ ಅತ್ಯಂತ ಕೆಟ್ಟ,…

1 day ago

ಪ್ರಸ್ತುತ 114 ತಾಲೂಕುಗಳ 598 ಗ್ರಾಮ ಪಂಚಾಯತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ- ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆ, ಜಾನುವಾರುಗಳ…

2 days ago