ಇಂದು ಮುಂಜಾನೆ ಸುಮಾರು 2 ರಿಂದ 3ಗಂಟೆ ಸಮಯದಲ್ಲಿ ವಿದ್ಯುತ್ ಮಗ್ಗದ ಮನೆಯಲ್ಲಿ ಕಳ್ಳರ ಕೈಚಳಕ ತೋರಿಸಿದ್ದಾರೆ. ನಗರದ ಮುಕ್ತಾಂಭಿಕಾ ನಗರದ 4ನೇ ಕ್ರಾಸ್ ಬಳಿಯ ಪ್ರಶಾಂತ್ ರಾವ್ ಎಂಬುವರ ಮಗ್ಗದ ಮನೆಯ ಬಾಗಿಲನ್ನು ಸಲಾಕೆಗಳಿಂದ ಮೀಟಿ ಸುಮಾರು 15 ಸಾವಿರ ಮೌಲ್ಯದ ಮಗ್ಗದ ಸಾಮಾಗ್ರಿಗಳನ್ನು ದೋಚಿದ್ದಾರೆ.
ಕಳ್ಳತನ ಕೃತ್ಯದಲ್ಲಿ ಸುಮಾರು 3-4 ಮಂದಿ ಕಳ್ಳರು ಭಾಗಿಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಕಳವು ಮಾಡಲಾದ ಕೋನ್ ಗಳನ್ನುಸೀರೆಯ ಬಾರ್ಡರ್ ನ ಜರಿಯನ್ನಾಗಿ ಬಳಸಲಾಗುತ್ತಿತ್ತು, ಸುಮಾರು 8 ಕೋನ್ ಗಳನ್ನು ಕಳ್ಳರು ಕದ್ದೊಯ್ದಿದ್ದಾರೆ, ಇವುಗಳ ಮೌಲ್ಯ ಸುಮಾರು 15ರಿಂದ 20 ಸಾವಿರ ಬೆಲೆಬಾಳುತ್ತಿತ್ತು, ಮೂರಂತಸ್ಥಿನ ಮನೆಯಲ್ಲಿ ತಳ ಮಹಡಿಯಲ್ಲಿ ಮಗ್ಗದ ಕೆಲಸ ಮಾಡಲಾಗುತ್ತಿತ್ತು. ಮೇಲ್ಮಹಡಿಯಲ್ಲಿ ಮಾಲೀಕರು ವಾಸವಿದ್ದರು. ಇಂದು ಬೆಳಗ್ಗೆ ಬಂದು ನೋಡಿದಾಗ ಕಳ್ಳತನ ಕೃತ್ಯ ಬೆಳಕಿಗೆ ಬಂದಿದೆ. ಕೂಡಲೇ ದೊಡ್ಡಬಳ್ಳಾಪುರ ನಗರ ಠಾಣೆಗೆ ದೂರು ನೀಡಿದ ಪ್ರಶಾಂತ್ ರಾವ್.
ಇತ್ತೀಚೆಗೆ ಇದೇ ರಸ್ತೆಯಲ್ಲಿ ಒಂಟಿ ಮಹಿಳೆ ನಡೆದುಕೊಂಡು ಬರುವ ವೇಳೆ ಬೈಕ್ ನಲ್ಲಿ ಬಂದ ಖದೀಮರು ಮಹಿಳೆಯ ಮಾಂಗಲ್ಯ ಸರ ಕಿತ್ತು ಪರಾರಿಯಾಗಿದ್ದರು. ಈ ಕಳ್ಳತನ ಮಾಸುವ ಮೊದಲೇ ಇಂದು ಮಗ್ಗದ ಮನೆಯಲ್ಲಿ ಕಳ್ಳತನ ನಡೆದಿರುವುದು ಇಲ್ಲಿನ ನಿವಾಸಿಗಳ ಆತಂಕಕ್ಕೆ ಕಾರಣವಾಗಿದೆ.
ಪೊಲೀಸರು ಇದನ್ನು ಗಂಭೀರವಾಗಿ ಪರಿಗಣಿಸಿ ಇಂತಹ ಕೃತ್ಯಗಳು ಮತ್ತೆ ಮರುಕಳಿಸದಂತೆ ಕಳ್ಳರನ್ನು ಮಟ್ಟಹಾಕಿ ನೆಮ್ಮದಿ ಜೀವನ ನಡೆಸಲು ಅನುವುಮಾಡಿಕೊಡಬೇಕು ಎಂದು ಸ್ಥಳೀಯರು ಒತ್ತಾಯಿಸುತ್ತಿದ್ದಾರೆ.
ವಿದ್ಯಾರ್ಥಿ ಮತ್ತು ಶಿಕ್ಷಕನ ಬಾಂಧವ್ಯ, ಸರ್ಕಾರಿ ಶಾಲೆಗಳ ಇಂದಿನ ಸ್ಥಿತಿಗತಿ ಮೊದಲಾದ ಅಂಶಗಳು ಒಳಗೊಂಡಿರುವ 'ನನ್ನ ಶಾಲೆಯನ್ನು ಪ್ರೀತಿಸುತ್ತೇನೆ' ಎಂಬ…
ಕೋವಿಡ್ ನಂತರದ ವಿಶ್ವದಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡಿದರೆ ಜಗತ್ತು ಬದಲಾವಣೆಯ ಹಾದಿಯಲ್ಲಿರುವಂತೆ ಕಾಣುತ್ತಿದೆ. ಕೆಲವು ಆಕ್ರಮಣಕಾರಿ ಯುದ್ಧಗಳು, ಮುಂದುವರಿದ ಭಯೋತ್ಪಾದನಾ…
22 ವರ್ಷದ ಯುವಕ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…