ಇಂದು ಮುಂಜಾನೆ ಸುಮಾರು 2 ರಿಂದ 3ಗಂಟೆ ಸಮಯದಲ್ಲಿ ವಿದ್ಯುತ್ ಮಗ್ಗದ ಮನೆಯಲ್ಲಿ ಕಳ್ಳರ ಕೈಚಳಕ ತೋರಿಸಿದ್ದಾರೆ. ನಗರದ ಮುಕ್ತಾಂಭಿಕಾ ನಗರದ 4ನೇ ಕ್ರಾಸ್ ಬಳಿಯ ಪ್ರಶಾಂತ್ ರಾವ್ ಎಂಬುವರ ಮಗ್ಗದ ಮನೆಯ ಬಾಗಿಲನ್ನು ಸಲಾಕೆಗಳಿಂದ ಮೀಟಿ ಸುಮಾರು 15 ಸಾವಿರ ಮೌಲ್ಯದ ಮಗ್ಗದ ಸಾಮಾಗ್ರಿಗಳನ್ನು ದೋಚಿದ್ದಾರೆ.
ಕಳ್ಳತನ ಕೃತ್ಯದಲ್ಲಿ ಸುಮಾರು 3-4 ಮಂದಿ ಕಳ್ಳರು ಭಾಗಿಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಕಳವು ಮಾಡಲಾದ ಕೋನ್ ಗಳನ್ನುಸೀರೆಯ ಬಾರ್ಡರ್ ನ ಜರಿಯನ್ನಾಗಿ ಬಳಸಲಾಗುತ್ತಿತ್ತು, ಸುಮಾರು 8 ಕೋನ್ ಗಳನ್ನು ಕಳ್ಳರು ಕದ್ದೊಯ್ದಿದ್ದಾರೆ, ಇವುಗಳ ಮೌಲ್ಯ ಸುಮಾರು 15ರಿಂದ 20 ಸಾವಿರ ಬೆಲೆಬಾಳುತ್ತಿತ್ತು, ಮೂರಂತಸ್ಥಿನ ಮನೆಯಲ್ಲಿ ತಳ ಮಹಡಿಯಲ್ಲಿ ಮಗ್ಗದ ಕೆಲಸ ಮಾಡಲಾಗುತ್ತಿತ್ತು. ಮೇಲ್ಮಹಡಿಯಲ್ಲಿ ಮಾಲೀಕರು ವಾಸವಿದ್ದರು. ಇಂದು ಬೆಳಗ್ಗೆ ಬಂದು ನೋಡಿದಾಗ ಕಳ್ಳತನ ಕೃತ್ಯ ಬೆಳಕಿಗೆ ಬಂದಿದೆ. ಕೂಡಲೇ ದೊಡ್ಡಬಳ್ಳಾಪುರ ನಗರ ಠಾಣೆಗೆ ದೂರು ನೀಡಿದ ಪ್ರಶಾಂತ್ ರಾವ್.
ಇತ್ತೀಚೆಗೆ ಇದೇ ರಸ್ತೆಯಲ್ಲಿ ಒಂಟಿ ಮಹಿಳೆ ನಡೆದುಕೊಂಡು ಬರುವ ವೇಳೆ ಬೈಕ್ ನಲ್ಲಿ ಬಂದ ಖದೀಮರು ಮಹಿಳೆಯ ಮಾಂಗಲ್ಯ ಸರ ಕಿತ್ತು ಪರಾರಿಯಾಗಿದ್ದರು. ಈ ಕಳ್ಳತನ ಮಾಸುವ ಮೊದಲೇ ಇಂದು ಮಗ್ಗದ ಮನೆಯಲ್ಲಿ ಕಳ್ಳತನ ನಡೆದಿರುವುದು ಇಲ್ಲಿನ ನಿವಾಸಿಗಳ ಆತಂಕಕ್ಕೆ ಕಾರಣವಾಗಿದೆ.
ಪೊಲೀಸರು ಇದನ್ನು ಗಂಭೀರವಾಗಿ ಪರಿಗಣಿಸಿ ಇಂತಹ ಕೃತ್ಯಗಳು ಮತ್ತೆ ಮರುಕಳಿಸದಂತೆ ಕಳ್ಳರನ್ನು ಮಟ್ಟಹಾಕಿ ನೆಮ್ಮದಿ ಜೀವನ ನಡೆಸಲು ಅನುವುಮಾಡಿಕೊಡಬೇಕು ಎಂದು ಸ್ಥಳೀಯರು ಒತ್ತಾಯಿಸುತ್ತಿದ್ದಾರೆ.
ಕಳೆದ 10 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದ ಸರ್ವೇ ನಂಬರ್ 50ರ ಗೋಮಾಳದಲ್ಲಿ 53-57 ಅರ್ಜಿ…
ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ…
ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…
ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…