ಇಂದು ಮುಂಜಾನೆ ಸುಮಾರು 2 ರಿಂದ 3ಗಂಟೆ ಸಮಯದಲ್ಲಿ ವಿದ್ಯುತ್ ಮಗ್ಗದ ಮನೆಯಲ್ಲಿ ಕಳ್ಳರ ಕೈಚಳಕ ತೋರಿಸಿದ್ದಾರೆ. ನಗರದ ಮುಕ್ತಾಂಭಿಕಾ ನಗರದ 4ನೇ ಕ್ರಾಸ್ ಬಳಿಯ ಪ್ರಶಾಂತ್ ರಾವ್ ಎಂಬುವರ ಮಗ್ಗದ ಮನೆಯ ಬಾಗಿಲನ್ನು ಸಲಾಕೆಗಳಿಂದ ಮೀಟಿ ಸುಮಾರು 15 ಸಾವಿರ ಮೌಲ್ಯದ ಮಗ್ಗದ ಸಾಮಾಗ್ರಿಗಳನ್ನು ದೋಚಿದ್ದಾರೆ.
ಕಳ್ಳತನ ಕೃತ್ಯದಲ್ಲಿ ಸುಮಾರು 3-4 ಮಂದಿ ಕಳ್ಳರು ಭಾಗಿಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಕಳವು ಮಾಡಲಾದ ಕೋನ್ ಗಳನ್ನುಸೀರೆಯ ಬಾರ್ಡರ್ ನ ಜರಿಯನ್ನಾಗಿ ಬಳಸಲಾಗುತ್ತಿತ್ತು, ಸುಮಾರು 8 ಕೋನ್ ಗಳನ್ನು ಕಳ್ಳರು ಕದ್ದೊಯ್ದಿದ್ದಾರೆ, ಇವುಗಳ ಮೌಲ್ಯ ಸುಮಾರು 15ರಿಂದ 20 ಸಾವಿರ ಬೆಲೆಬಾಳುತ್ತಿತ್ತು, ಮೂರಂತಸ್ಥಿನ ಮನೆಯಲ್ಲಿ ತಳ ಮಹಡಿಯಲ್ಲಿ ಮಗ್ಗದ ಕೆಲಸ ಮಾಡಲಾಗುತ್ತಿತ್ತು. ಮೇಲ್ಮಹಡಿಯಲ್ಲಿ ಮಾಲೀಕರು ವಾಸವಿದ್ದರು. ಇಂದು ಬೆಳಗ್ಗೆ ಬಂದು ನೋಡಿದಾಗ ಕಳ್ಳತನ ಕೃತ್ಯ ಬೆಳಕಿಗೆ ಬಂದಿದೆ. ಕೂಡಲೇ ದೊಡ್ಡಬಳ್ಳಾಪುರ ನಗರ ಠಾಣೆಗೆ ದೂರು ನೀಡಿದ ಪ್ರಶಾಂತ್ ರಾವ್.
ಇತ್ತೀಚೆಗೆ ಇದೇ ರಸ್ತೆಯಲ್ಲಿ ಒಂಟಿ ಮಹಿಳೆ ನಡೆದುಕೊಂಡು ಬರುವ ವೇಳೆ ಬೈಕ್ ನಲ್ಲಿ ಬಂದ ಖದೀಮರು ಮಹಿಳೆಯ ಮಾಂಗಲ್ಯ ಸರ ಕಿತ್ತು ಪರಾರಿಯಾಗಿದ್ದರು. ಈ ಕಳ್ಳತನ ಮಾಸುವ ಮೊದಲೇ ಇಂದು ಮಗ್ಗದ ಮನೆಯಲ್ಲಿ ಕಳ್ಳತನ ನಡೆದಿರುವುದು ಇಲ್ಲಿನ ನಿವಾಸಿಗಳ ಆತಂಕಕ್ಕೆ ಕಾರಣವಾಗಿದೆ.
ಪೊಲೀಸರು ಇದನ್ನು ಗಂಭೀರವಾಗಿ ಪರಿಗಣಿಸಿ ಇಂತಹ ಕೃತ್ಯಗಳು ಮತ್ತೆ ಮರುಕಳಿಸದಂತೆ ಕಳ್ಳರನ್ನು ಮಟ್ಟಹಾಕಿ ನೆಮ್ಮದಿ ಜೀವನ ನಡೆಸಲು ಅನುವುಮಾಡಿಕೊಡಬೇಕು ಎಂದು ಸ್ಥಳೀಯರು ಒತ್ತಾಯಿಸುತ್ತಿದ್ದಾರೆ.
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…
ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…