ಇಂದು ಮುಂಜಾನೆ ಸುಮಾರು 2 ರಿಂದ 3ಗಂಟೆ ಸಮಯದಲ್ಲಿ ವಿದ್ಯುತ್ ಮಗ್ಗದ ಮನೆಯಲ್ಲಿ ಕಳ್ಳರ ಕೈಚಳಕ ತೋರಿಸಿದ್ದಾರೆ. ನಗರದ ಮುಕ್ತಾಂಭಿಕಾ ನಗರದ 4ನೇ ಕ್ರಾಸ್ ಬಳಿಯ ಪ್ರಶಾಂತ್ ರಾವ್ ಎಂಬುವರ ಮಗ್ಗದ ಮನೆಯ ಬಾಗಿಲನ್ನು ಸಲಾಕೆಗಳಿಂದ ಮೀಟಿ ಸುಮಾರು 15 ಸಾವಿರ ಮೌಲ್ಯದ ಮಗ್ಗದ ಸಾಮಾಗ್ರಿಗಳನ್ನು ದೋಚಿದ್ದಾರೆ.
ಕಳ್ಳತನ ಕೃತ್ಯದಲ್ಲಿ ಸುಮಾರು 3-4 ಮಂದಿ ಕಳ್ಳರು ಭಾಗಿಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಕಳವು ಮಾಡಲಾದ ಕೋನ್ ಗಳನ್ನುಸೀರೆಯ ಬಾರ್ಡರ್ ನ ಜರಿಯನ್ನಾಗಿ ಬಳಸಲಾಗುತ್ತಿತ್ತು, ಸುಮಾರು 8 ಕೋನ್ ಗಳನ್ನು ಕಳ್ಳರು ಕದ್ದೊಯ್ದಿದ್ದಾರೆ, ಇವುಗಳ ಮೌಲ್ಯ ಸುಮಾರು 15ರಿಂದ 20 ಸಾವಿರ ಬೆಲೆಬಾಳುತ್ತಿತ್ತು, ಮೂರಂತಸ್ಥಿನ ಮನೆಯಲ್ಲಿ ತಳ ಮಹಡಿಯಲ್ಲಿ ಮಗ್ಗದ ಕೆಲಸ ಮಾಡಲಾಗುತ್ತಿತ್ತು. ಮೇಲ್ಮಹಡಿಯಲ್ಲಿ ಮಾಲೀಕರು ವಾಸವಿದ್ದರು. ಇಂದು ಬೆಳಗ್ಗೆ ಬಂದು ನೋಡಿದಾಗ ಕಳ್ಳತನ ಕೃತ್ಯ ಬೆಳಕಿಗೆ ಬಂದಿದೆ. ಕೂಡಲೇ ದೊಡ್ಡಬಳ್ಳಾಪುರ ನಗರ ಠಾಣೆಗೆ ದೂರು ನೀಡಿದ ಪ್ರಶಾಂತ್ ರಾವ್.
ಇತ್ತೀಚೆಗೆ ಇದೇ ರಸ್ತೆಯಲ್ಲಿ ಒಂಟಿ ಮಹಿಳೆ ನಡೆದುಕೊಂಡು ಬರುವ ವೇಳೆ ಬೈಕ್ ನಲ್ಲಿ ಬಂದ ಖದೀಮರು ಮಹಿಳೆಯ ಮಾಂಗಲ್ಯ ಸರ ಕಿತ್ತು ಪರಾರಿಯಾಗಿದ್ದರು. ಈ ಕಳ್ಳತನ ಮಾಸುವ ಮೊದಲೇ ಇಂದು ಮಗ್ಗದ ಮನೆಯಲ್ಲಿ ಕಳ್ಳತನ ನಡೆದಿರುವುದು ಇಲ್ಲಿನ ನಿವಾಸಿಗಳ ಆತಂಕಕ್ಕೆ ಕಾರಣವಾಗಿದೆ.
ಪೊಲೀಸರು ಇದನ್ನು ಗಂಭೀರವಾಗಿ ಪರಿಗಣಿಸಿ ಇಂತಹ ಕೃತ್ಯಗಳು ಮತ್ತೆ ಮರುಕಳಿಸದಂತೆ ಕಳ್ಳರನ್ನು ಮಟ್ಟಹಾಕಿ ನೆಮ್ಮದಿ ಜೀವನ ನಡೆಸಲು ಅನುವುಮಾಡಿಕೊಡಬೇಕು ಎಂದು ಸ್ಥಳೀಯರು ಒತ್ತಾಯಿಸುತ್ತಿದ್ದಾರೆ.
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…
ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್ಸ್ಪೆಕ್ಟರ್ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…
ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್…
ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…
ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್ನ ಮೆಡ್ಚಲ್ ಪ್ರದೇಶದಲ್ಲಿ…
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…